ಚಾರ್ಮಾಡಿ ಘಾಟ್ ನ ಮಲೆಯಮಾರುತ ಬಳಿ ಅರಣ್ಯಕ್ಕೆ ಬೆಂಕಿ ಮೂಡಿಗೆರೆ: ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಮೂರ್ನಾಲ್ಕು ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿರುವ ದುರ್ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಮಲಯಮಾರುತ ಗುಡ್ಡದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ ಅರಣ್ಯ ಪ್ರದೇಶದಲ್ಲಿ ಇದಕ್ಕಿದಂತೆ ಬೆಂಕಿ ಕಾಣಿಸಿಕೊಂಡಿದೆ. ಮೊದಲೇ ಬೇಸಿಗೆ ಆಗಿರುವುದರಿಂದ ಬಿಸಿಲ ತಾಪಕ್ಕೆ ಬೆಂಕಿ ಮತ್ತಷ್ಟು ಉಲ್ಬಣಿಸಿದೆ. ಕಾಡಿನ ಮದ್ಯ ದಟ್ಟ ಹೊಗೆ ಎದ್ದು ಬೆಂಕಿಯ ಕೆನ್ನಾಲಿಗೆ ಚಾಚುತ್ತಿದ್ದಂತೆ ಮರಗಳಲ್ಲಿ ಪಕ್ಷಿಗಳು ದಿಕ್ಕಾಪಾಲಾಗಿ ಹಾರಲಾರಂಭಿಸಿವೆ. ಅಪಾರ ಪ್ರಮಾಣದ ಸಸ್ಯಗಳು, ಗಿಡ ಮರಗಳು ಬೆಂಕಿಗೆ ಆಹುತಿಯಾಗಿವೆ. ಗುಡ್ಡಕ್ಕೆ ಬೆಂಕಿ ತಗುಲಿದೆ ಎಂದು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಅಧಿಕಾರಿಗಳು ಬೆಂಕಿಯನ್ನ ನಂದಿಸಿದ್ದಾರೆ. ರಸ್ತೆಯಿಂದ ಸುಮಾರು ನಾಲ್ಕೈದು ಕಿ.ಮೀ. ದೂರದ ಎತ್ತರಕ್ಕೆ ಬೆಟ್ಟಕ್ಕೆ ದೌಡಾಯಿಸಿದ ಅಧಿಕಾರಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಧಿಕಾರಿಗಳ ಸಮಯಪ್ರಜ್ಞೆಯಿಂದ ನೂರಾರು ಎಕರೆ ಅರಣ್ಯ ಹಾಗೂ ಜೀವಸಂಕುಲ ಅಪಾಯಕ್ಕೀಡಾಗುವುದು ತಪ್ಪಿದೆ.
1 min read
ಮೂಡಿಗೆರೆ: ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಮೂರ್ನಾಲ್ಕು ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿರುವ ದುರ್ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಮಲಯಮಾರುತ ಗುಡ್ಡದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ
ಅರಣ್ಯ ಪ್ರದೇಶದಲ್ಲಿ ಇದಕ್ಕಿದಂತೆ ಬೆಂಕಿ ಕಾಣಿಸಿಕೊಂಡಿದೆ. ಮೊದಲೇ ಬೇಸಿಗೆ ಆಗಿರುವುದರಿಂದ ಬಿಸಿಲ ತಾಪಕ್ಕೆ ಬೆಂಕಿ ಮತ್ತಷ್ಟು ಉಲ್ಬಣಿಸಿದೆ. ಕಾಡಿನ ಮದ್ಯ ದಟ್ಟ ಹೊಗೆ ಎದ್ದು ಬೆಂಕಿಯ ಕೆನ್ನಾಲಿಗೆ ಚಾಚುತ್ತಿದ್ದಂತೆ ಮರಗಳಲ್ಲಿ ಪಕ್ಷಿಗಳು ದಿಕ್ಕಾಪಾಲಾಗಿ ಹಾರಲಾರಂಭಿಸಿವೆ. ಅಪಾರ ಪ್ರಮಾಣದ ಸಸ್ಯಗಳು, ಗಿಡ ಮರಗಳು ಬೆಂಕಿಗೆ ಆಹುತಿಯಾಗಿವೆ.
ಗುಡ್ಡಕ್ಕೆ ಬೆಂಕಿ ತಗುಲಿದೆ ಎಂದು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಅಧಿಕಾರಿಗಳು ಬೆಂಕಿಯನ್ನ ನಂದಿಸಿದ್ದಾರೆ. ರಸ್ತೆಯಿಂದ ಸುಮಾರು ನಾಲ್ಕೈದು ಕಿ.ಮೀ. ದೂರದ ಎತ್ತರಕ್ಕೆ ಬೆಟ್ಟಕ್ಕೆ ದೌಡಾಯಿಸಿದ ಅಧಿಕಾರಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಧಿಕಾರಿಗಳ ಸಮಯಪ್ರಜ್ಞೆಯಿಂದ ನೂರಾರು ಎಕರೆ ಅರಣ್ಯ ಹಾಗೂ ಜೀವಸಂಕುಲ ಅಪಾಯಕ್ಕೀಡಾಗುವುದು ತಪ್ಪಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g