May 15, 2024

MALNAD TV

HEART OF COFFEE CITY

ಅಂಬೇಡ್ಕರ್ ಬಗ್ಗೆ ತಿಳಿಯದೆ ಸಂವಿಧಾನ ಅರ್ಥೈಸಿಕೊಳ್ಳುವುದು ಅಸಾಧ್ಯ

1 min read

 

ಚಿಕ್ಕಮಗಳೂರು: ದೇಶದಲ್ಲಿ ಅಂಬೇಡ್ಕರ್ ಅವರನ್ನು ಅರಿಯದೆ ಸಂವಿಧಾನವನ್ನು ಅರ್ಥೈಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ವಕೀಲರಾದ ದೇವೆಂದ್ರಕುಮಾರ್ ಅಭಿಪ್ರಾಯಿಸಿದರು.ನಗರದ ಉಂಡೇದಾಸರಹಳ್ಳಿಯಲ್ಲಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಬಿ.ಆರ್.ಅಂಬೇಡ್ಕರ್ ಸಮಾಜದ ಉದ್ಧಾರಕ್ಕೆ ಸಂವಿಧಾನ ರಚನೆ ಮಾಡುವ ಮೂಲಕ ಶೋಷಿತರು, ಹಿಂದುಳಿದವರು, ಮಹಿಳೆಯರು ಸೇರಿದಂತೆ ಸರ್ವ ವರ್ಗದವರಿಗೂ ಸಮಾನತೆಯನ್ನು ಕಲ್ಪಿಸಿದವರು ಎಂದು ಸ್ಮರಿಸಿದರು.

ಅಂಬೇಡ್ಕರ್ ಎಂಬುದು ಒಂದು ಶಕ್ತಿ. ಅವರನ್ನು ಅರಿಯದೇ ಸಂವಿಧಾನವನ್ನು ಎಂದಿಗೂ ಅರಿಯಲು ಸಾಧ್ಯವಿಲ್ಲ, ಎಷ್ಟೋ ಜನರು ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚನೆ ಮಾಡಿಲ್ಲ ಎಂದು ಟೀಕಿಸುತ್ತಾರೆ, ಅದು ಅವರ ತಪ್ಪು ಕಲ್ಪನೆ, ಕರಡು ಸಮಿತಿಯಲ್ಲಿದ್ದ ಅನೇಕ ಸದಸ್ಯರು ವಿದೇಶದಲ್ಲಿದ್ದರು, ಇನ್ನಿತರ ಕೆಲಸದಲ್ಲಿ ತೊಡಗಿಕೊಂಡಿದ್ದರು ಆದರೆ ವಿಶೇಷ ಅಧ್ಯಯನದ ಮೂಲಕ ಸಂವಿಧಾನ ರಚನೆಗೆ ಅಂಬೇಡ್ಕರ್ ಹೆಚ್ಚಿನ ವಿಶೇಷ ಒತ್ತು ನೀಡಿ ದೇಶಕ್ಕೆ ಕೊಡುಗೆ ನೀಡಿದ್ದಾರೆ. ಪ್ರತಿಯೊಬ್ಬರು ಸಂವಿಧಾನವನ್ನು ಓದಿ ಅರ್ಥೈಹಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಬಿಜೆಪಿ ನಗರ ಮಂಡಲ ಅಧ್ಯಕ್ಷ ಮಧುಕುಮಾರ್ ರಾಜ್ ಅರಸ್ ಮಾತನಾಡಿ ಸಮಾಜದಲ್ಲಿ ಪ್ರತಿ ಜೀವಿಗೂ ಬದುಕುವ ಹಕ್ಕು ಕಲ್ಪಿಸಿದವರು. ಅಂಬೇಡ್ಕರ್ ಅವರ ಹೋರಾಟದ ಹಾದಿ, ಸಾಧನೆಗಳು, ಚಿಂತನೆಯ ದಾರಿಯಲ್ಲಿ ನಾವೆಲ್ಲರೂ ಸಾಗಬೇಕಿದೆ ಎಂದರು.ಬೃಹತ್ ಸಂವಿದಾನ ರಚನೆ ಮಾಡುವ ಮೂಲಕ ದೇಶಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ ಅವರ ಜಯಂತಿಯಂದು ಅವರ ತತ್ವ, ಸಿದ್ದಾಂತ, ಚಿಂತನೆಗಳನ್ನು ಅರಿತು ಅನುಷ್ಠಾನಗೊಳಿಸಬೇಕಿದೆ ಎಂದು ಅಭಿಪ್ರಾಯಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ರೂಪಾಕುಮಾರ್, ಶಕ್ತಿ ಕೇಂದ್ರದ ಅಧ್ಯಕ್ಷ ನಟರಾಜ್, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಬಸವರಾಜ್, ನಗರ ಮಹಿಳಾ ಮಂಡಲದ ಅಧ್ಯಕ್ಷೆ ಶೋಭಾ, ಮುಖಂಡರಾದ ಸಂತೋಷ್‍ಜೈನ್, ಪ್ರಮೋದ್, ಶಿವಕುಮಾರ್, ಕುಮಾರ್, ಇಂಜಿನಿಯರ್ ಜಯಣ್ಣ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!