May 17, 2024

MALNAD TV

HEART OF COFFEE CITY

ಭ್ರಷ್ಟಾಚಾರ ಬಯಲಾಗಿಸಲು ಬಿಜೆಪಿ ಹಿಂದೇಟು: ಸಿದ್ದರಾಮಯ್ಯ

1 min read

 

ಚಿಕ್ಕಮಗಳೂರು: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷವಾಯಿತು.ಅಧಿಕಾರದಲ್ಲಿ ಅವರೇ ಇದ್ದಾರೆ, ಏನು ಬಯಲು ಮಾಡಿದ್ದಾರೆಂದು ಸಿಎಂ ಬೊಮ್ಮಾಯಿ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದರು.ಗುತ್ತಿಗೆದಾರ ಸಂತೋಷಪಾಟೀಲ ಆತ್ಮಹತ್ಯೆ ರೂವಾರಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಬಂಧಿಸಬೇಕು. ದಿನನಿತ್ಯ ವಸ್ತುಗಳ ಬೆಲೆ ಏರಿಕೆಯನ್ನು ಇಳಿಸಬೇಕೆಂದು ಒತ್ತಾಯಿಸಿ ಜಿಲ್ಲಾಕಾಂಗ್ರೆಸ್ ಶನಿವಾರ ನಗರದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆ ಮತ್ತು ಬಹಿರಂಗಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರದಲ್ಲಿ ನಡೆದಿರುವ ಹಗರಣವನ್ನು ಜನರ ಮುಂದೆ ಇಡಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿಕೆಗೆ ಮೇಲಿನಂತೆ ಪ್ರತಿಕ್ರಿಯಿಸಿದರು.

ರಾಜ್ಯ ಮತ್ತು ಕೇಂದ್ರದಲ್ಲೂ ಬಿಜೆಪಿ ಸರ್ಕಾರ ಅಧಿಕಾರ ಚುಕ್ಕಾಣಿ ಹಿಡಿದಿದೆ. ಕಾಂಗ್ರೆಸ್ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದ್ದರೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಮೂರು ವರ್ಷದಲ್ಲಿ ಏಕೆ ಸಾಧ್ಯವಾಗಿಲ್ಲ ವೆಂದು ಪ್ರಶ್ನಿಸಿ, ಸುಮ್ಮನೆ ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆಂದರು.ಬಿಜೆಪಿಯವರಿಗೆ ಸಮರ್ಥನೆ ಮಾಡಿಕೊಳ್ಳಕ್ಕೆ ಯಾವುದೇ ವಿಚಾರಗಳಿಲ್ಲ, ಈಶ್ವರಪ್ಪ 40 ಪರ್ಸೆಂಟ್ ಡಿಮ್ಯಾಂಡ್ ಮಾಡದಿದ್ದರೆ ರಾಜೀನಾಮೆ ಏಕೆ ಕೊಡುತ್ತಿದ್ದರು. ಹೈಕಮಾಂಡ್ ಯಾಕೆ ಈಶ್ವರಪ್ಪನವರ ರಾಜೀನಾಮೆ ಪಡೆಯುತ್ತಿತ್ತು ಎಂದು ಪ್ರಶ್ನಿಸಿದರು.ಈಶ್ವರಪ್ಪನೇ ನನ್ನ ಸಾವಿಗೆ ಕಾರಣವೆಂದು ಗುತ್ತಿಗೆದಾರ ಸಂತೋಷ್‍ಪಾಟೀಲ್ ಡೆತ್ ನೋಟ್‍ಟೈಪ್‍ಮಾಡಿ, ವಾಟ್ಸಪ್ ಮೂಲಕ ಎಲ್ಲರಿಗೂ ಮೆಸೇಜ್ ಮಾಡಿದ್ದಾರೆಂದು ತಿಳಿಸಿ, ಡಿವೈಎಸ್ಪಿ ಗಣಪತಿ-ಗುತ್ತಿಗೆದಾರ ಸಂತೋಷ್ ಪಾಟೀಲ್ ಪ್ರಕರಣವನ್ನು ಹೋಲಿಕೆ ಮಾಡಲು ಆಗುವುದಿಲ್ಲವೆಂದು ಉತ್ತರಿಸಿದರು.ಡಿವೈಎಸ್ಪಿ ಗಣಪತಿ ಪ್ರಕರಣದಲ್ಲಿ ಜಾರ್ಜ್‍ಗೆ ಸಿಬಿಐನಿಂದ ಕ್ಲೀನ್‍ಚಿಟ್ ಸಿಕ್ಕಿದೆ
ಸಿಬಿಐ ಕೇಂದ್ರ ಸರ್ಕಾರದ ಅಧೀನದಲ್ಲಿದ್ದು, ಈ ವಿಷಯ ಬಿಜೆಪಿಗೆ ಗೊತ್ತಿದ್ದು-ಗೊತ್ತಿದ್ದು ಸುಳ್ಳು ಹೇಳುತ್ತಿದ್ದಾರೆಂದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!