ಗಣರಾಜ್ಯೋತ್ಸ ಕಾರ್ಯಕ್ರಮದಲ್ಲಿ ವಾಗ್ವಾದ
1 min read
ಕಳಸ: ಪಟ್ಟಣದ ನಾಡಕಚೇರಿಯಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜೆಡಿಎಸ್, ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರ ನಡುವೆ ವಾಕ್ಸಮರಕ್ಕೆ ಕಾರಣವಾಯಿತು. ಕಳಸ ತಾಲೂಕು ರಚನೆಯಾದ ಬಳಿಕ ಇದೇ ಮೊದಲ ಗಣರಾಜ್ಯೋತ್ಸವ ಕಾರ್ಯಕ್ರಮವಾದುದರಿಂದ ಸಾಕಷ್ಟು ಮಹತ್ವ ಪಡೆದಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ಮುಖಂಡ ವೆಂಕಟಸುಬ್ಬಯ್ಯ, ಕಳಸವನ್ನು ತಾಲೂಕು ಕೇಂದ್ರವಾಗಿ ಮಾಡಿದ್ದು ಬಿಜೆಪಿ ನಾಯಕರು ಎಂದರಲ್ಲದೇ, ತಾಲೂಕಿನ ಅಭಿವೃದ್ಧಿಗೆ ಬಿಜೆಪಿ ನೀಡಿದ ಕೊಡುಗೆ, ಸಾಧನೆಗಳ ಕುರಿತಾಗಿ ಭಾಷಣದುದ್ದಕ್ಕೂ ಪ್ರಸ್ತಾಪಿಸಿದರು. ಇದರಿಂದ ಕೆರಳಿದ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ವೆಂಕಟಸುಬ್ಬಯ್ಯ ಅವರ ಭಾಷಣಕ್ಕೆ ಅಡ್ಡಿಪಡಿಸಿದರು.
ಗಣರಾಜ್ಯೋತ್ಸವ ಕಾರ್ಯಕ್ರಮ ಯಾವುದೇ ಪಕ್ಷದ ಅಭಿವೃದ್ಧಿ, ಸಾಧನೆ ಮೆರೆಸಲು ನಡೆಸುವ ಕಾರ್ಯಕ್ರಮವಲ್ಲ ಎಂದು ತೀವ್ರ ಆಕ್ರೋಶ ಹೊರಹಾಕಿದರು. ಈ ವೇಳೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಜಗಳ ತಾರಕಕ್ಕೇರಿ ಶಾಸಕ ಕುಮಾರ ಸ್ವಾಮಿ ಎದುರಿನಲ್ಲೇ ನಾಯಕರು ಪರಸ್ಪರ ಕಿತ್ತಾಟ, ತಳ್ಳಾಟ ನಡೆಸಿದರು. ಇದರಿಂದ ಕಾರ್ಯಕ್ರಮದಲ್ಲಿ ಕೆಲಕ್ಷಣಗಳ ಕಾಲ ಆತಂಕ ಸೃಷ್ಟಿಯಾಗಿತ್ತು.
ಸಂವಿಧಾನವು ಪ್ರಜಾಸತ್ತಾತ್ಮಕವಾಗಿ ತಮ್ಮ ಸರ್ಕಾರವನ್ನು ಆಯ್ಕೆ ಮಾಡಿಕೊಳ್ಳುವ ಶಕ್ತಿಯನ್ನು ನಾಗರಿಕರಿಗೆ ನೀಡಿದ ಸ್ಮರಣೀಯ ದಿನವಾದ ಗಣರಾಜ್ಯೋತ್ಸವದಂದೇ ತಮ್ಮ ಸ್ವಾರ್ಥ ಮೆರೆಸಲು ಕಿತ್ತಾಟ ನಡೆಸಿದ ರಾಜಕೀಯ ನಾಯಕರ ವರ್ತನೆ ಸಾರ್ವಜನಿಕರಿಂದ ಟೀಕೆಗೆ ಗುರಿಯಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g