May 9, 2024

MALNAD TV

HEART OF COFFEE CITY

ಅಕ್ರಮ ಗೋಮಾಂಸ ಅಡ್ಡೆ ಮೇಲೆ ಪೊಲೀಸರ ದಾಳಿ, ಗೋಮಾಂಸ ವಶ

1 min read

ಗೋವುಗಳನ್ನು ಕಡಿದು ಅಕ್ರಮವಾಗಿ ಗೋ ಮಾಂಸ ತಯಾರು ಮಾಡುತ್ತಿದ್ದ ಎಸ್ಟೇಟ್ ಮೇಲೆ ಪೊಲೀಸರು ದಾಳಿ ನಡೆಸಿ ಅಪಾರ ಪ್ರಮಾಣದ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ.
ನರಸಿಂಹರಾಜಪುರ ತಾಲೂಕಿನ ಹೇರೂರು ಸ್ಥಿರೂರು ಗ್ರಾಮದ ಕುಕ್ಕುಡಿಗೆ ರಾಮೇಗೌಡ ಎಂಬುವವರ ತೋಟದ ಕೂಲಿ ಲೈನ್‌ನಲ್ಲಿ ಕೆಲ ಅಪರಿಚಿತರು ಗೋವುಗಳನ್ನು ಹತ್ಯೆ ಮಾಡಿ ಮಾಂಸ ತಯಾರಿಸುತ್ತಿರುವ ಕುರಿತಾಗಿ ಖಚಿತ ಮಾಹಿತಿ ಪಡೆದ ಬಾಳೆಹೊನ್ನೂರು ಠಾಣೆಯ ಪಿಎಸ್ಐ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

ಪೊಲೀಸರ ದಾಳಿ ವೇಳೆ ಎಸ್ಟೇಟ್ ನ ಕೂಲಿಲೈನ್‌ ನ ಮನೆಯೊಂದರಲ್ಲಿ ಐದು ಮಂದಿ ದುಷ್ಕರ್ಮಿಗಳು ಹಸುವನ್ನು ಕಡಿದು ಮಾಂಸ ತಯಾರಿಸುತ್ತಿದ್ದರು.ಪೊಲೀಸರನ್ನು ಕಂಡಕೂಡಲೇ ಮಾಂಸ ಕಡಿಯುತ್ತಿದ್ದವರು ಸ್ಥಳದಿಂದ ಪರಾರಿಯಾಗಿದ್ದಾರೆ.
ಸ್ಥಳದಲ್ಲಿ ಒಂದು ಕ್ವಿಂಟಾಲ್ ಗೋ ಮಾಂಸ, ದನದ ಕತ್ತರಿಸಿದ ಒಂದು ಕಾಲು ಪತ್ತೆಯಾಗಿದೆ.ಆರೋಪಿಗಳು ಮಾಂಸ ಮಾರಾಟದ ಉದ್ದೇಶದಿಂದ ದನಗಳನ್ನು ಹಲವೆಡೆಗಳಿಂದ ಕಳವು ಮಾಡಿಕೊಂಡು ಬಂದು ಮಾಂಸ ತಯಾರಿಸುತ್ತಿದ್ದರು ಎಂದು ತಿಳಿದುಬಂದಿದೆ.ಪರಾರಿಯಾದ ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮಕೈಗೊಂಡಿದ್ದಾರೆ.

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!