20 ಜನ ಸರ್ಕಾರಿ ನೌಕರರಿಗೆ ಜಿಲ್ಲಾ ಸರ್ವೋತ್ತಮ ಪ್ರಶಸ್ತಿ ಪ್ರಧಾನ
1 min read
2020-21ನೇ ಅವಧಿಯಲ್ಲಿ ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಚಿಕ್ಕಮಗಳೂರು ಉಪವಿಭಾಗದ ಹಿರಿಯ ಉಪವಿಭಾಗಾಧಿಕಾರಿ ಡಾ.ಎಚ್.ಎಲ್.ನಾಗರಾಜ್, ಜಿಲ್ಲಾ ಸರ್ಜನ್ ಡಾ.ಮೋಹನ್ ಕುಮಾರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮಂಜುನಾಥ್ ಹೆಚ್.ಕೆ, ಜಿಲ್ಲಾ ವಿಜ್ಞಾನ ಸೂಚನಾಧಿಕಾರಿ ಸರಸ ಕೃಷ್ಣ ಕಿರಣ್, ಹಿರಿಯ ಭೂ ವಿಜ್ಞಾನಿ ವಿಂಧ್ಯಾ, ಮೂಡಿಗೆರೆ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ವೆಂಕಟೇಶ್, ಕೃಷಿ ಅಧಿಕಾರಿ ಸಿ.ಸುಜಾತ, ಶಿರಸ್ತೇದಾರ್ ಎಸ್.ಶೈಲಶ್ರೀ, ಬೆರಳಚ್ಚುಗಾರರ ಪಾರ್ವತಿ. ಎಸ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಛೇರಿ ಅಧೀಕ್ಷಕ ಎಂ.ಪಿ.ದೇವಾನಂದ ಜಿಲ್ಲಾ ಸರ್ವೋತ್ತಮ ನಾಗರಿಕ ಸೇವಾ ಪ್ರಶಸ್ತಿಗೆ ಭಾಜನರಾದರು.
2021-22ನೇ ಅವಧಿಯಲ್ಲಿ, ಜಿ.ಪಂ ಉಪಕಾರ್ಯದರ್ಶಿ ಎಂ.ಕಿಶೋರ್, ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕಿ ಡಾ.ಮೀರಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ವೈ. ಸೋಮಶೇಖರ್, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಂಗನಾಥ.ಸಿ, ಶೃಂಗೇರಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ನಟರಾಜ್, ಕಸಬಾ ರಾಜಸ್ವ ನಿರೀಕ್ಷಕ ಸತ್ಯನಾರಾಯಣ, ಹಿರಿಯ ನರ್ಸಿಂಗ್ ಅಧಿಕಾರಿ ಎ.ಕೆ.ಅಣ್ಣಮ್ಮ, ಹರಿಹರದಹಳ್ಳಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಲಕ್ಷ್ಮಣ್.ಪಿ, ಅಮೃತಾಪುರ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪವಿತ್ರ ಹಾಗೂ ಉಪವಿಭಾಗಾಧಿಕಾರಿ ಕಛೇರಿ ಶೀಘ್ರಲಿಪಿಗಾರ ಯಶೋಧ.ಡಿ.ಎಸ್ ಪ್ರಶಸ್ತಿಗೆ ಭಾಜನರಾದರು
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g