ತಿಪ್ಪೆ ಸಾರಿಸುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು_ಸಿ.ಟಿ ರವಿ
1 min read
ಚಿಕ್ಕಮಗಳೂರು: ತಿಪ್ಪೆ ಸಾರಿಸುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು, ಬಿಜೆಪಿಯೂ ಹಾಗೆ ಎಂದು ಭಾವಿಸಿದ್ದರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ ರವಿ ಹೇಳಿದರು.
ನಗರದಲ್ಲಿ ಪಿಎಸ್ಐ ನೇಮಕಾತಿ ಹಗರಣದ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ತಾನು ಕಳ್ಳ ಪರರ ನಂಬ ಎಂಬ ಮಾತು ಕಾಂಗ್ರೆಸ್ಸಿಗರಿಗೆ ಅನ್ವಯವಾಗುತ್ತದೆ. ಬಿಜೆಪಿ ತಿಪ್ಪೆಸಾರಿಸುವುದಾಗಿದ್ದರೆ ದಿವು ಹಾಗರಗಿ ಮೇಲೆ ಎಫ್ಐಆರ್ ಆಗ್ತಿರಲಿಲ್ಲ ಎಂದರು.ಪ್ರಕರಣ ಸಂಬಂಧ ಎಫ್ಐಆರ್ ಹಾಕಿದ್ದು, ಸಿಐಡಿಗೆ ವಹಿಸಿದ್ದು, ಆಕೆ ಗಂಡನನ್ನು ಬಂಧಿಸಿದ್ದು ಬಿಜೆಪಿ ಸರ್ಕಾರ ಹಾಗೆಯೇ ಪ್ರಕರಣದಲ್ಲಿ ಇರುವ ಎಲ್ಲರನ್ನು ಸಹ ಬಂಧಿಸುತ್ತಿರುವುದು ಹಾಗೂ ಬಂಧನವಾಗದಿದ್ದರೆ ಆಸ್ತಿ ಮುಟ್ಟಗೋಲು ಹಾಕಿಕೊಳ್ಳುತ್ತೇವೆ ಎಂದು ಪೇಪರ್ ನೋಟಿಫಿಕೇಶನ್ ನೀಡಿದ್ದು ಸಹ ಬಿಜೆಪಿ ಸರ್ಕಾರ ಎಂದು ಕಾಂಗ್ರೆಸ್ಗೆ ತಿರುಗೇಟು ನೀಡಿದ್ರು.
ಈ ಹಿಂದೆ ಮುಖ್ಯಮಂತ್ರಿಗಳ ಮೇಲೆ ವಾಚ್ ಪ್ರಕರಣ ಬಂತು, ಕಳ್ಳತನದ ವಾಚು, ಅಕ್ರಮದ ವಾಚು ಸಿಎಂ ಕೈಗೆ ಹೇಗೆ ಬಂತು ಎಂದು ತನಿಖೆಯಾಗಲಿಲ್ಲ, ರಿಡ್ಯೂ ಹೆಸರಿನಲ್ಲಿ ಅರ್ಕಾವತಿ ಭೂಹಗರಣದಲ್ಲಿ ಸಾವಿರಾರು ಎಕರೆ ಡಿನೋಟಿಫೈ ಮಾಡಿದ್ರು, 10_20 ಲಕ್ಷ, ಕೆಲವೆಡೆ 50 ಲಕ್ಷ ಪಡೆದರು ನಂತರ ತನ್ನ ಕುತ್ತಿಗೆಗೆ ಬರುತ್ತದೆ ಎಂದು ಹಾಗೆ ತಿಪ್ಪೆ ಸಾರಿಸಿದರು ಎಂದು ಅಸಮಾಧಾನ ವ್ಯಕ್ತಪಡಿಸಿದರು.ಪ್ರಶಂಸೆ ಹೇಳುವ ಮನಸ್ಥಿತಿ ಅವರಿಗಿಲ್ಲ, ಕಾಂಗ್ರೆಸ್ನಂತೆ ಬಿಜೆಪಿ ಅಲ್ಲ ಈ ವಿಷಯದಲ್ಲಿ ಯಾರೇ ಎಷ್ಟು ಪ್ರಭಾವಿಯಾಗಿದ್ದರು ಶಿಕ್ಷೆಯಾಗುತ್ತದೆ ಮುಚ್ಚಾಕುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ಇನ್ನು ಇದೇ ವೇಳೆ ಹುಬ್ಬಳ್ಳಿ ಗಲಭೆಕೋರರಿಗೆ ಜಮೀರ್ ಅಹಮದ್ ರಂಜಾನ್ ಕಿಟ್ ವಿತರಣೆ ಸಂಬಂಧ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಡಿಜೆ ಹಳ್ಳಿ_ಕೆಜೆ ಹಳ್ಳಿ, ಪಾದರಾಯನಪುರದಲ್ಲಿ ಕಾಂಗ್ರೆಸ್ ಪಾತ್ರ ಹೀಗೆಯೇ ಇತ್ತು. ಅವರಿಗೆ ಹಣ, ವಕೀಲರ ನೇಮಕ ಎಲ್ಲ ಮಾಡಿದ್ದು ಕಾಂಗ್ರೆಸ್ ಆ ಸಂದರ್ಭದಲ್ಲಿಯೂ ಸಹ ಜಮೀರ್ ಹೆಸರು ಕೇಳಿ ಬಂದಿತ್ತು ಈಗ ಹುಬ್ಬಳ್ಳಿ ಪ್ರಕರಣದಲ್ಲಿಯೂ ಸಹ ಅವರ ಹೆಸರು ಕೇಳಿ ಬಂದಿದೆಮಗು ಚಿವುಟಿ ತೊಟ್ಟಿಲು ತೂಗುವ ಕೆಲಸ ಮಾಡುತ್ತಿದ್ದಾರೆ ಎಂದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g