May 7, 2024

MALNAD TV

HEART OF COFFEE CITY

ಮದುವೆಯಲ್ಲಿ ಅಜಾತಶತ್ರು ಅಪ್ಪುವಿಗೆ ಮೊದಲ ಪೂಜೆ, ಬಳಿಕ ಮಾಂಗಲ್ಯಧಾರಣೆ

1 min read

 

ಚಿಕ್ಕಮಗಳೂರು. ನಗುವಿನ ಮಾಲೀಕ, ಕನ್ನಡಿಗರ ಮನೆ-ಮನಗಳ ಅಜಾತಶುತ್ರು ಅಪ್ಪು ನಮ್ಮನ್ನ ಅಗಲಿ ತಿಂಗಳುಗಳೇ ಕಳೆದಿದೆ. ಆದರೆ, ಅಪ್ಪು ಮಾತ್ರ ಅಭಿಮಾನಿಗಳ ಮನದಲ್ಲಿ ಚಿರಸ್ಥಾಯಿಯಾಗಿ ನೆಲೆ ನಿಂತಿದ್ದಾರೆ. ಇದಕ್ಕೆ ನಗರದಲ್ಲಿ ನಡೆದ ಮದುವೆಯೇ ಜೀವಂತ ಸಾಕ್ಷಿಯಾಗಿದ್ದು, ಅಭಿಮಾನಿಗಳು ಅಪ್ಪುವನ್ನ ಜೀವನ ಪ್ರತಿಕ್ಷಣವೂ ನೆನಪು ಮಾಡಿಕೊಳ್ಳುತ್ತಿದ್ದಾರೆ. ಅಗಲಿದ ನಟನನ್ನ ಹುಟ್ಟುಹಬ್ಬದಂದೋ ಅಥವ ಪುಣ್ಯ ಸ್ಮರಣೆಯ ದಿನವೋ ನೆನೆಪು ಮಾಡಿಕೊಳ್ಳುವುದು ಸಾಮಾನ್ಯ. ಆದರೆ, ಚಿಕ್ಕಮಗಳೂರಿನ ಅಪ್ಪು ಅಭಿಮಾನಿಯೋರ್ವ ತನ್ನ ಮದುವೆಯ ದಿನ ಮಾಂಗಲ್ಯಧಾರಣೆಗೂ ಮುನ್ನ ಅಪ್ಪುವಿನ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ನಮಸ್ಕರಿಸಿ ಬಳಿಕ ಮಾಂಗಲ್ಯಧಾರಣೆ ಮಾಡಿದ್ದಾರೆ. ನಗರದ ಅಂಬೇಡ್ಕರ್ ಭವನದಲ್ಲಿ  ನಿಲಯ್ ಹಾಗೂ ಸುಪ್ರೀಯಾ ಎಂಬುವರ ಮದುವೆ ಸಂದರ್ಭದಲ್ಲಿ ಅಪ್ಪುವನ್ನ ನೆನೆದು ಕಣ್ಣೀರಿಟ್ಟಿದ್ದಾರೆ. ಮದುವೆ ಮನೆಯಲ್ಲೂ ಅಪ್ಪುವಿನ ಭಾವಚಿತ್ರ ಹಾಕಲಾಗಿತ್ತು. ವೇದಿಕೆ ಮುಂಭಾಗದಲ್ಲಿ ಅಪ್ಪು ಭಾವಚಿತ್ರಕ್ಕೆ ನವದಂಪತಿಗಳು ಹೂವಿನ ಮಾಲೆ ಹಾಕಿ ಪೂಜೆ ಸಲ್ಲಿಸಿ ನಂತರ ಮಾಂಗಲ್ಯ ಧಾರಣೆ ಮಾಡಿದ್ದಾರೆ.

ಮದುವೆ ಮಂಟಪದ ಎಲ್‍ಇಡಿ ವಾಲ್‍ನಲ್ಲೂ ಸಹ ಅಪ್ಪು ಅಜಾತಶತ್ರುವಾಗಿದ್ದರು. ನವದಂಪತಿಗಳಿಬ್ಬರು ಅಪ್ಪುವಿನ ಅಭಿಮಾನಿಗಳಾಗಿದ್ದರು. ವಿವಾಹದ ಲಗ್ನಪತ್ರಿಕೆಯಲ್ಲೂ ಕೂಡ ತಮ್ಮ ಹೆಸರಿನ ಮುಂದೆ ಅಪ್ಪು ಎಂದು ನಮೂದಿಸುವ ಮೂಲಕ ಅಭಿಮಾನ ಮೆರೆದಿದ್ದಾರೆ. ಮಧುಮಗ ನಿಲಯ್ ಅಪ್ಪುವಿನ ಅಪ್ಪಟ ಅಭಿಮಾನಿ. ಅವರ ಹುಟ್ಟುಹಬ್ಬ, ಸಿನಿಮಾ ಬಿಡುಗಡೆ ವೇಳೆ ಬಡವರು, ರೋಗಿಗಳಿಗೆ ಸಹಾಯ ಮಾಡುವ ಸಮಾಜಮುಖಿ ಕಾರ್ಯಗಳನ್ನ ಮಾಡುತ್ತಿದ್ದರು. ಜೊತೆಗೆ ಜಿಲ್ಲೆಯಲ್ಲಿ ಅಪ್ಪು ಯೂತ್ ಬ್ರಿಗೇಡ್ ರಚನೆಯನ್ನೂ ಮಾಡಿದ್ದರು. ಜೊತೆಗಿರದ ಜೀವ ಎಂದೆಂದಿಗೂ ಜೀವಂತ ಎಂಬಂತೆ ಅಪ್ಪು ದೈಹಿಕವಾಗಿ ನಮ್ಮಗಳ ಜೊತೆ ಇಲ್ಲದಿದ್ದರೂ ಮಾನಸಿಕವಾಗಿ ಅಪ್ಪು ಎಂಬ ಪವರ್ ನಾಡಿನ ಮನೆ-ಮನಗಳಲ್ಲಿ ಅಜರಾಮರ. ಚಿರಸ್ಥಾಯಿ. ಮರೆಯದ ಮರೆಯಲಾಗದ ಚೇತನವಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!