5, 6 , 7ರಂದು ಸಕಲೇಶಪುರದಲ್ಲಿ ಕಾಪಿಟೆಕ್ ಎಕ್ಸ್ಪೋ
1 min readಚಿಕ್ಕಮಗಳೂರು: ಕರ್ನಾಟಕ ಗ್ರೋವರ್ಸ್ ಫೆಡರೇಷನ್(ಕೆ.ಜಿ.ಎಫ್) ವತಿಯಿಂದ ಮೇ. 5, 6 ಮತ್ತು 7ರಂದು ಹಾಸನ ಜಿಲ್ಲೆ ಸಕಲೇಶಪುರದ ಶ್ರೀನಿವಾಸ ಕನ್ವೆಂಷನ್ ಹಾಲ್ನಲ್ಲಿ ಕಾಪಿಟೆಕ್ ಎಕ್ಸ್ಪೋ ಆಯೋಜಿಸಲಾಗಿದೆ ಎಂದು ಕೆ.ಜಿ.ಎಫ್ ಅಧ್ಯಕ್ಷ ಡಾ|ಎಚ್. ಟಿ.ಮೋಹನ್ಕುಮಾರ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಕಾಪಿಟೆಕ್ ಎಕ್ಸ್ಪೋದಲ್ಲಿ ನೂತನ ಆವಿಷ್ಕಾರ, ಬೃಹತ್ ಪ್ರದರ್ಶನ ಮೇಳ, ಗೃಹಪಯೋಗಿ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮತ್ತು ವಿಚಾರ ಸಂಕಿರಣ, ಸಾಂಸ್ಕøತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾ ಗಿದೆ ಎಂದರು.
ಆಧುನಿಕತೆ ಬೆಳೆದಂತೆ ತಂತ್ರಜ್ಞಾನವು ಬೆಳೆಯುತ್ತಿದೆ. ಆದರೆ, ಕಾಫಿಬೆಳೆಗಾರರು ಯಂ ತ್ರೋಪಕರಣಗಳ ಬಳಕೆಯಲ್ಲಿ ಹಿಂದೆ ಬಿದ್ದಿದ್ದು, ಕಾಫಿಬೆಳೆಗಾರರು ಯಂತ್ರೋಪರಣ ಬಳಕೆ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಕಾಪಿಟೆಕ್ ಎಕ್ಸ್ಪೋ ಆಯೋಜಿಸಲಾ ಗಿದೆ ಎಂದು ತಿಳಿಸಿದರು.ಮೇ.5ರಂದು ಕಾಪಿಟೆಕ್ ಎಕ್ಸ್ಪೋ ಸಮಾರಂಭವನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇ ಗೌಡ ಅವರು ಉದ್ಘಾಟಿಸುವರು. ಕೇಂದ್ರ ವಾಣಿಜ್ಯ ಸಚಿವರಾದ ಪಿಯೂಷ್ ಗೋಯ ಲ್, ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಎಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆ ಸಭಾ ಕಾರ್ಯಕ್ರಮದ ಬಳಿಕ ತಾಂತ್ರಿಕ ಬಳಿಕೆ ಕುರಿತು ಕಾರ್ಯಾಗಾರ ನಡೆಯಲಿದೆ ಎಂದರು.
ಮೇ.6ರಂದು ಉನ್ನತ ಶಿಕ್ಷಣ, ಐಟಿ,ಬಿಟಿ ವಿಜ್ಞಾನ ತಂತ್ರಜ್ಞಾನ ಇಲಾಖೆ ಸಚಿವ ಡಾ| ಅಶ್ವಥ್ ನಾರಾಯಣ, ಅಬಕಾರಿ ಸಚಿವ ಹಾಗೂ ಹಾಸನ ಉಸ್ತುವಾರಿ ಸಚಿವ ಗೋ ಪಾಲಯ್ಯ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆ ಎಂದ ಅವರು ಸಭಾ ಕಾರ್ಯಕ್ರಮದ ಬಳಿಕ ಕಾರ್ಯಾಗಾರ ಮತ್ತು ಸಂಜೆ ಸಾಂಸ್ಕøತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.ಮೇ.7ರಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಮಾಜಿ ಸಭಾಪತಿ ಡಾ|ಬಿ.ಎಲ್. ಶಂಕರ್, ಮಾಜಿ ಸಚಿವೆ ಮೋಟಮ್ಮ, ಮಾಜಿ ಸಚಿವ ಬಿ.ಬಿ.ನಿಂಗಯ್ಯ ಭಾಗವಹಿಸಲಿ ದ್ದಾರೆ. ನಂತರ ಕಾರ್ಯಾಗಾರ ನಡೆಯಲಿದ್ದು, ಜಿಲ್ಲೆಯ ಕಾಫಿಬೆಳೆಗಾರರು ಹೆಚ್ಚಿನ ಸಂಖ್ಯೆ ಯಲ್ಲಿ ಪಾಲ್ಗೊಂಡು ಕಾರ್ಯಾಗಾರದ ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.
ಕೆಜಿಎಫ್ ಉಪಾಧ್ಯಕ್ಷ ವಸಂತೇಗೌಡ ಮಾತನಾಡಿ, ಕಾಫಿಬೆಳೆಗಾರರು ಮಾಹಿತಿ ಕೊರತೆ ಯಿಂದ ಯಂತ್ರೋಪಕರಣ ಬಳಕೆಯಲ್ಲಿ ಹಿಂದೆ ಬಿದ್ದಿದ್ದಾರೆ. ಈ ನಿಟ್ಟಿನಲ್ಲಿ ಬೆಳೆಗಾರರು ಈ ಕಾರ್ಯಾಗಾರದ ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಸುದ್ಧಿಗೋಷ್ಟಿಯಲ್ಲಿ ಕೆಜಿಎಫ್ ಮಾಜಿ ಅಧ್ಯಕ್ಷ ಜಯರಾಮ್, ಮಹೇಶ್ ಕೆರೆಮಕ್ಕಿ, ರತೀಶ್ ಇದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g