May 18, 2024

MALNAD TV

HEART OF COFFEE CITY

ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಜನಜೀವನ ಅಸ್ತವ್ಯಸ್ತ

1 min read

 

ಚಿಕ್ಕಮಗಳೂರು ಜಿಲ್ಲೆ ಮಲೆನಾಡು ಭಾಗದಲ್ಲಿ ಕಳೆದ ಎಂಟತ್ತು ದಿನಗಳಿಂದ ಬಿಡುವ ನೀಡಿದ್ದ ವರುಣದೇವ ಇಂದು ಮತ್ತೆ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಬಣಕಲ್, ಬಾಳೂರು ಸುತ್ತಮುತ್ತ ಧಾರಾಕಾರ ಮಳೆ ಸುರಿದಿದೆ. ಇಳಿಸಂಜೆಯಲ್ಲಿ ಆರಂಭವಾದ ಮಳೆ ಸುಮಾರು ಒಂದು ಗಂಟೆಗಳ ಕಾಲ ಧಾರಾಕಾರವಾಗಿ ಸುರಿದಿದೆ.  ಸುರಿದ ಭಾರೀ ಮಳೆಗೆ ವಾಹನ ಸವಾರರು ವಾಹನಗಳನ್ನ ಚಲಾಯಿಸಲು ಪರದಾಟ ನಡೆಸಿದ್ದಾರೆ.

ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಗ್ರಾಮೀಣ ಭಾಗದಲ್ಲಿ ಅಲ್ಲಲ್ಲೇ ಮರಗಳು ಧರೆಗುರುಳಿದ್ದು, ರಸ್ತೆ ಸಂಪರ್ಕ ಕೂಡ ಜಖಂಗೊಂಡಿದೆ. ವಿದ್ಯುತ್ ತಂತಿಗಳ ಮೇಲೆ ಮರಗಳು ಬಿದ್ದು ವಿದ್ಯುತ್ ಸಂಪರ್ಕ ಕೂಡ ಕಡಿತಗೊಂಡಿದ್ದು ಜನ ಕತ್ತಲಲ್ಲಿ ಕಳೆಯುವಂತಾಗಿದೆ. ಭಾರೀ ಗಾಳಿಗೆ ಕೆಲ ಅಂಗಡಿಗಳ ಅಕ್ಕಪಕ್ಕದಲ್ಲಿ ಕಟ್ಟಿದ್ದ ಟಾರ್ಪಲ್ ಕೂಡ ಹಾರಿ ಹೋಗಿವೆ. ಕಳೆದ 15 ದಿನಗಳ ಹಿಂದೆಯೇ ಉತ್ತಮ ಮಳೆ ಸುರಿದ ಪರಿಣಾಮ ಕಾಫಿ-ಅಡಿಕೆ-ಮೆಣಸಿಗೆ ಈಗ ನೀರಿನ ಅಗತ್ಯವಿರಲಿಲ್ಲ. ಕಾಫಿ ಹೂವಾಗಿ ಕಾಯಾಗುವ ಸಮಯ ಈಗ ಮಳೆ ಬೇಡವಾಗಿತ್ತು. ಆದರೆ, ಎಂಟತ್ತು ದಿನದಿಂದ ಬಿಡುವ ನೀಡಿದ್ದ ಮಳೆರಾಯ ಮತ್ತೆ ಧಾರಾಕಾರವಾಗಿ ಸುರಿದಿದ್ದಾನೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!