ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಓರ್ವ ಸ್ಥಳದಲ್ಲೇ ಸಾವು
1 min read
ಚಿಕ್ಕಮಗಳೂರು.ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಗಾಂಧಿಘರ್ ಬಳಿ ನಡೆದಿದೆ. ಮೂಡಿಗೆರೆಯಿಂದ ಹಳ್ಳಿಗೆ ಹೋಗುತ್ತಿದ್ದ ಕಾರು ಹಾಗೂ ಬೆಂಗಳೂರಿನಿಂದ ಮೂಡಿಗೆರೆಗೆ ಬರುತ್ತಿದ್ದ ಕಾರುಗಳ ನಡುವೆ ಮುಖಾಮುಖಿ ಚಾಲಕನ ನಿಯಂತ್ರಣ ತಪ್ಪಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಮೂಡಿಗೆರೆ ಪಟ್ಟಣದಿಂದ ಬೆಟ್ಟದಮನೆ ಗ್ರಾಮಕ್ಕೆ ಹೋಗುತ್ತಿದ್ದ ಕಾರಿನಲ್ಲಿದ್ದ 64 ವರ್ಷದ ಲಕ್ಷ್ಮಣಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅದೇ ಕಾರಿನಲ್ಲಿ ಲಕ್ಷ್ಮಣಗೌಡ ಜೊತೆಗಿದ್ದ ಮತ್ತೋರ್ವನಿಗೆ ಗಂಭೀರ ಗಾಯವಾಗಿದ್ದು ಸ್ಥಳಿಯರು ಅವರನ್ನ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇದೇ ಮಾರ್ಗದಲ್ಲಿ ಬೆಂಗಳೂರಿನಿಂದ ಮೂಡಿಗೆರೆ ಬರುತ್ತಿದ್ದ ಮತ್ತೊಂದು ಕಾರಿನಲ್ಲಿದ್ದವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಡಿಗೆರೆ ತಾಲೂಕಿನಲ್ಲಿ ಆಗಿದ್ದಾಂಗೆ ಅಲ್ಲಲ್ಲೇ ಸಾಕಷ್ಟು ಅಪಘಾತ ಪ್ರಕರಣಗಳು ನಡೆಯುತ್ತಿವೆ. ಮೂಡಿಗೆರೆಯ ಮಾರ್ಗವಾಗಿ ಚಾರ್ಮಾಡಿ ಮೂಲಕ ಧರ್ಮಸ್ಥಳ, ಮಂಗಳೂರಿಗೆ ಹೋಗುವ ವಾಹನಗಳೇ ಹೆಚ್ಚು. ಹಾವುಬಳುಕಿನ ಮೈಕಟ್ಟಿನ ರಸ್ತೆಯ ಈ ರಸ್ತೆ ಹಲವರಿಗೆ ಪರಿಚಯ ಇರುವುದಿಲ್ಲ. ಹಾಗಾಗಿ, ಸ್ಥಳೀಯರು ಪ್ರವಾಸಿ ವಾಹನಗಳಿಗೆ ನಿಧಾನವಾಗಿ ಚಲಿಸುವಂತೆ ಮನವಿ ಮಾಡುತ್ತಿದ್ದಾರೆ. ಜೊತೆಗೆ, ಕೆಲ ರಸ್ತೆಗಳಲ್ಲಿ ತೀವ್ರ ತಿರುವುಗಳಿರುವುದರಿಂದ ಅಪಘಾತ ಪ್ರಕರಣಗಳು ಹೆಚ್ಚು ಇರುವ ಕಡೆ ರಸ್ತೆಗೆ ಹಂಪ್ ಹಾಕಿ ಲೋಕೋಪಯೋಗಿ ಇಲಾಖೆ ಪ್ರವಾಸಿಗರಲ್ಲಿ ಜಾಗೃತಿ ಮೂಡಿಸಬೇಕೆಂದು ಸ್ಥಳಿಯರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g