May 18, 2024

MALNAD TV

HEART OF COFFEE CITY

ಚಾರ್ಮಾಡಿ ಘಾಟಿಯ ಗುಳಿಗಮ್ಮ ದೇವಿ ಹೇಳಿದ ಜಾಗದಲ್ಲೇ ಮೂಲ ವಿಗ್ರಹ ಪತ್ತೆ

1 min read

 

 

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಆಲೇಖಾನ್ ಹೊರಟ್ಟಿ ಸಮೀಪದ ಇತಿಹಾಸ ಪ್ರಸಿದ್ಧ ಗುಳಿಗಮ್ಮ ದೇವಿಯ ಮೂಲ ವಿಗ್ರಹ ಆ ದೇವಿ ಹೇಳಿದ ಜಾಗದಲ್ಲೇ ಪತ್ತೆಯಾಗಿದ್ದು, ಸ್ಥಳಿಯರು ಹಾಗೂ ಈ ಭಾಗದ ಪ್ರವಾಸಿಗರಿಗೆ ಗುಳಿಗಮ್ಮ ದೇವಿಯ ಮೇಲಿದ್ದ ದೈವದ ನಂಬಿಕೆ ಮತ್ತಷ್ಟು ಹೆಚ್ಚಾಗಿದೆ. ಕಳೆದ ಏಪ್ರಿಲ್ 24ರಂದು ಗುಳಿಗಮ್ಮ ದೇವಿಯ ವಾರ್ಷಿಕ ಪೂಜಾ ಮಹೋತ್ಸವ ನಡೆಯಿತು. ಈ ಸಂದರ್ಭದಲ್ಲಿ ಗುಳಿಗಮ್ಮ ದೇವಿಯ ದೈವದ ದರ್ಶನದಲ್ಲಿ ಕ್ಷೇತ್ರದ ನಾಲ್ಕು ಕಿ.ಮೀ. ದೂರದ ಮರವೊಂದರ ಕೆಳಗೆ ಗುಳಿಗಮ್ಮ ದೇವಿಯ ಮೂಲ ವಿಗ್ರಹ ಇದೆ, ಹುಡುಕಿದರೆ ವಿಗ್ರಹ ಸಿಗಲಿದೆ ಎಂದು ದೈವದ ದರ್ಶನದಲ್ಲಿ ದೇವಿಯೇ ಹೇಳಿದ್ದಳು. ಹಾಗಾಗಿ, ಗುಳಿಗಮ್ಮ ದೇವಿಯ ಕ್ಷೇತ್ರ ಅಭಿವೃದ್ಧಿಯ ಪದಾಧಿಕಾರಿಗಳು ಗುಳಿಗಮ್ಮ ದೇವಿಯ ದೇವಸ್ಥಾನದಿಂದ ಮೂರು-ನಾಲ್ಕು ಕಿ.ಮೀ. ದೂರದಲ್ಲಿ ಹುಡುಕಾಟ ನಡೆಸಿದ್ದಾರೆ.

 

 

ಆಗ ಆಲೇಖಾನ್ ಎಸ್ಟೇಟ್ ಒಂದರ ಮರದ ಬುಡದಲ್ಲಿ ದೇವಿಯ ಮೂಲವಿಗ್ರಹ ಪತ್ತೆಯಾಗಿದೆ. ದೇವಿನ ಕಂಚಿನಮೂರ್ತಿ, ಗಂಟೆ ಹಾಗೂ ಕತ್ತಿ ಪತ್ತೆಯಾಗಿವೆ. ನೂರಾರು ವರ್ಷಗಳ ಹಿಂದೆ ಈ ಜಾಗದಲ್ಲಿ ಚಾಮುಂಡೇಶ್ವರಿ, ಗುಳಿಗಮ್ಮ, ಬಬ್ಬುಸ್ವಾಮಿಗೆ ಅತ್ಯಂತ ಭಯ-ಭಕ್ತಿಯಿಂದ ವಿಜೃಂಭಣೆಯಿಂದ ಪೂಜಾ-ವಿಧಿ-ವಿಧಾನಗಳು ನಡೆಯುತ್ತಿದ್ದವು. ಈಗ ಗುಳಿಗಮ್ಮ ದೇವಿ ಹೇಳಿರೋ ಜಾಗದಲ್ಲೇ ಪುರಾತನ ಮೂರ್ತಿಗಳು ಸಿಕ್ಕಿರೋದು ಕ್ಷೇತ್ರ ಹಾಗೂ ದೇವಿಯ ಮಹಿಮೆಯನ್ನ ಇಮ್ಮಡಿಗೊಳಿಸಿದೆ. ಈಗ ಭಕ್ತರು ದೇವಾಲಯವನ್ನ ಮತ್ತಷ್ಟು ಅಭಿವೃದ್ಧಿಪಡಿಸಿ ಈಗ ಸಿಕ್ಕಿರೋ ಪುರಾತನ ಮೂರ್ತಿಗಳನ್ನ ಅದೇ ಜಾಗದಲ್ಲಿ ಪುನರ್ ಪ್ರತಿಷ್ಠಾಪಿಸಿ ದೇವಿಯ ಹಿಂದಿನ ಗತಕಾಲದ ವೈಭವನ್ನ ಮತ್ತೆ ಮರುಕಳಿಸಲು ಯೋಚಿಸಿದ್ದಾರೆ. ಮುಂದಿನ ದಿನಗಳಲ್ಲಿ ದೈವ ದರ್ಶನದ ಹೇಳಿಕೆಯಂತೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಯೋಚಿಸಿದೆ.

 

 

ಈ ಗುಳಿಗಮ್ಮ ದೇವಿ ಮಹಿಮೆ ಅಪಾರ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಚಾರ್ಮಾಡಿ ಘಾಟ್ ಯಾರಿಗ್ ತಾನೇ ಗೊತ್ತಿಲ್ಲ. ಕರ್ನಾಟಕದ ಊಟಿ ಎಂದೇ ಖ್ಯಾತಿಯಾಗಿರೋ ಬದುಕಿನ ಅನಿವಾರ್ಯತೆಯ ಹಾಸುಹೊಕ್ಕಿರೋ ಮಾರ್ಗ. ಈ ಮಾರ್ಗದಲ್ಲಿ ನೆಲೆ ನಿಂತಿರುವವಳೇ ಗುಳಿಗಮ್ಮ ದೇವಿ. ನಿತ್ಯ ಸಾವಿರಾರು ವಾಹನಗಳು ಓಡಾಡುವ ಈ ದಟ್ಟಾರಣ್ಯದ ಹಾವುಬಳುಕಿನ ಮೈಕಟ್ಟಿನ ರಸ್ತೆಯಲ್ಲಿ ಚಲಿಸಲು ಗಟ್ಟಿ ಗುಂಡಿಗೆ ಬೇಕು. ಈ ಮಾರ್ಗ ಎಷ್ಟು ಸೌಂದರ್ಯ-ಅನಿವಾರ್ಯವೋ ಅಷ್ಟೆ ಅಪಾಯ ಕೂಡ. ಆದರೆ, ಈಕೆ ಬಗ್ಗೆ ಗೊತ್ತಿರುವವರು ಈ ಮಾರ್ಗದಲ್ಲಿ ಸಂಚರಿಸುವಾಗ ಈ ದೇವಿಗೆ ಕೈಮುಗಿಯದೆ ಮುಂದೆ ಹೋಗಲ್ಲ. ಚಾರ್ಮಾಡಿ ರಸ್ತೆಯ ಅಲೇಖಾನ್ ಹೊರಟ್ಟಿ ಗ್ರಾಮದ ಆರಂಭದಲ್ಲೇ ಈ ದೇವಿ ವಿರಾಜಮಾನವಾಗಿ ನೆಲೆ ನಿಂತಿದ್ದಾಳೆ. ಅಂದು ಈಕೆಗೆ ಮೂರ್ತಿ ಇರಲಿಲ್ಲ. ಇಂದು ಈಕೆಯ ಪುರಾತನ ವಿಗ್ರಹ ಸಿಕ್ಕಿದೆ. ಅಂದು ಕಲ್ಲಿನ ಮೂರ್ತಿಗೆ ಕೈಮುಗಿಯುತ್ತಿದ್ದರು. ಇನ್ಮುಂದೆ ಮೂರ್ತಿ ರೂಪದಲ್ಲಿ ನೆಲೆ ನಿಲ್ಲುತ್ತಾಳೆ. ಈಕೆಯದ್ದು ಅಪಾರ ಶಕ್ತಿ ಅನ್ನೋದು ಭಕ್ತರ ನಂಬಿಕೆ. ವರ್ಷ ಪೂರ್ತಿ ಈ ಮಾರ್ಗದಲ್ಲಿ ಸಂಚರಿಸುವವರನ್ನ ಈಕೆಯೇ ಕಾಯುತ್ತಾಳೆ ಅನ್ನೋದು ಸಾವಿರಾರು ಜನರ ನಂಬಿಕೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!