ಎಂಟು ತಿಂಗಳಲ್ಲಿ ಕುರ್ಚಿ ಬಿಸಿಯೂ ಆಗಲ್ಲ, ಮಂತ್ರಿ ಆಸೆ ಕೈಬಿಟ್ಟ ಮೂಡಿಗೆರೆ ಶಾಸಕ
1 min read
ಚಿಕ್ಕಮಗಳೂರು: ಬಿಜೆಪಿ ಸರ್ಕಾರಕ್ಕೆ ಅಧಿಕಾರಕ್ಕೆ ಬಂದಾಗಿನಿಂದಲೂ ಮಂತ್ರಿಗಿರಿಗಾಗಿ ಹೋರಾಡ್ತಿದ್ದ ಜಿಲ್ಲೆಯ ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಸಚಿವ ಸ್ಥಾನದ ಆಸೆಯನ್ನ ಕೈಬಿಟ್ಟಿದ್ದಾರೆ. ಈಗ ಸಚಿವ ಸ್ಥಾನ ಸಿಕ್ಕರೆ ಏನು ಮಾಡೋದು. ಕುರ್ಚಿ ಬಿಸಿ ಮಾಡಬಹುದು ಅಷ್ಟೆ. ಕುರ್ಚಿಯೂ ಬಿಸಿ ಆಗಲ್ಲ ಎಂದು ಸಚಿವನಾಗುವ ಆಸೆಯನ್ನ ಕೈಬಿಟ್ಟಿದ್ದಾರೆ. ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಮಾತನಾಡಿದ ಅವರು, ಈಗ ಸಚಿವ ಸ್ಥಾನ ಸಿಕ್ಕರೂ ಸಿಗೋದು ಕೇವಲ ಎಂಟು ತಿಂಗಳು ಅಷ್ಟೆ. ಈ ಎಂಟು ತಿಂಗಳಲ್ಲಿ ಯಾವ ಕ್ರಾಂತಿಕಾರಿ ಅಭಿವೃದ್ಧಿಯನ್ನೂ ಮಾಡಲು ಆಗುವುದಿಲ್ಲ ಎಂದು ಬೇಸರದ ನುಡಿ ಹೊರಹಾಕಿದ್ದು, ಸಚಿವ ಸಂಪುಟ ವಿಸ್ತರಣೆ ವೇಸ್ಟ್. ಇದರಿಂದ ಆಸೆ ಇರುವವರಿಗಷ್ಟೆ ಅನುಕೂಲವಾಗುತ್ತೆ ಎಂದು ಹೇಳಿದ್ದಾರೆ. ಮೂರು ಬಾರಿ ಶಾಸಕರಾಗಿರುವ ಕುಮಾರಸ್ವಾಮಿ ಮಂತ್ರಿಗಿರಿಗಾಗಿ ಭಾರೀ ಹೋರಾಡಿದ್ದರು. ಲಾಬಿ ನಡೆಸಿದ್ದರು. ಬಲಗೈ ಸಮುದಾಯಕ್ಕೆ ಸೇರಿದ ನಮಗೂ ಮಂತ್ರಿಗಿರಿ ಕೊಡಬೇಕೆಂದು ಮನವಿ ಮಾಡಿದ್ದರು. ಬಿಜೆಪಿ ಸರ್ಕಾರ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆಯಾದ ಮೂರು ಬಾರಿ ಮಿನಿಸ್ಟರ್ ಪೋಸ್ಟ್ಗಾಗಿ ಲಾಬಿ ನಡೆಸಿದ್ದರು. ಆದರೆ, ಈಗ ಯಾಕೋ ಮಿನಿಸ್ಟರ್ ಆಗುವ ಆಸೆಯನ್ನ ಕೈಬಿಟ್ಟಿದ್ದಾರೆ. ಸಚಿವ ಸ್ಥಾನ ನೀಡಿ ಎಂದು ಕೇಳಲ್ಲ. ಆಸೆ ಇರುವವರಿಗೆ ಕೊಡಲಿ. ಯಾವುದೇ ಒತ್ತಡವನ್ನೂ ಹಾಕಲ್ಲ. ಕ್ಷೇತ್ರದಲ್ಲಿ ತುಂಬಾ ಕೆಲಸ ಇದೆ. ಸಚಿವ ಸ್ಥಾನ ನೀಡೋದು ವರಿಷ್ಠರಿಗೆ ಬಿಟ್ಟ ವಿಚಾರ ಎಂದು ಹತಾಶ ನುಡಿಯನ್ನ ಹೊರಹಾಕಿದ್ದಾರೆ. ಪ್ರತಿಬಾರಿಯೂ ಸಚಿವ ಸ್ಥಾನದ ಕಸರತ್ತು ನಡೆಯುವಾಗ ನಾನೂ ಆಕಾಂಕ್ಷಿ ಎಂದು ಕಲ್ಲು ಹೊಗೆಯುತ್ತಿದ್ದ ಎಂ.ಪಿ. ಕುಮಾರಸ್ವಾಮಿ ಈ ಬಾರಿ ಹೋರಾಟಕ್ಕೂ ಮುನ್ನವೇ ಶಸ್ತ್ರ ತ್ಯಾಗ ಮಾಡಿದ್ದಾರೆ. ನಾನು ಮಂತ್ರಿಗಿರಿಗೆ ಲಾಬಿ ಮಾಡಲು ದೆಹಲಿಗೆ ಹೋಗಿಲ್ಲ. ಬೇರೆ ಕೆಲಸದ ನಿಮಿತ್ತ ಗಡ್ಕರಿ ಅವರನ್ನ ಭೇಟಿ ಮಾಡಬೇಕಿತ್ತು ಅದಕ್ಕೆ ಹೋಗಿದ್ದೆ ಎಂದಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g