May 17, 2024

MALNAD TV

HEART OF COFFEE CITY

ಸೂರಿಗಾಗಿ 30 ಕುಟುಂಬಗಳಿಂದ ಶಿಫ್ಟ್ ವೈಸ್‍ನಂತೆ 24 ದಿನದಿಂದ ನಿರಂತರ ಪ್ರತಿಭಟನೆ 

1 min read

 

 

ಚಿಕ್ಕಮಗಳೂರು. ಸೂಕ್ತ ಸೂರಿನ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಮಳೆಯನ್ನೂ ಲೆಕ್ಕಿಸದೆ ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖದ ದಿನಗೂಲಿ ನೌಕರರ ಪುನರ್ವಸತಿ ಹೋರಾಟ ಸಮಿತಿ ನಡೆಸುತ್ತಿರುವ ಹೋರಾಟ 24ನೇ ದಿನಕ್ಕೆ ಕಾಲಿಟ್ಟಿದೆ. ಕುದುರೆಮುಖ ಅದಿರು ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸುಮಾರು ನಲವತ್ತಕ್ಕೂ ಹೆಚ್ಚು ದಿನಗೂಲಿ ಕುಟುಂಬಗಳು ಕಂಪನಿ ಕ್ಲೋಸ್ ಆದ ಬಳಿಕ ಕಳಸ ಸುತ್ತಮುತ್ತ ವಿವಿಧ ಕೆಲಸ ಮಾಡಿಕೊಂಡು ಜೀವನ ನಿರ್ವಹಿಸುತ್ತಿದ್ದರು.

 

ಸುರಿಯುತ್ತಿರುವ ಮಳೆ ಮಧ್ಯೆಯೂ ಮಳೆಯನ್ನ ಲೆಕ್ಕಿಸದೆ ಬದುಕಿನ ಹಕ್ಕಿಗಾಗಿ ಮಳೆಯಲ್ಲೇ ಹೋರಾಟ ಮಾಡುತ್ತಿದ್ದಾರೆ. ಸುಮಾರು 40ಕ್ಕೂ ಹೆಚ್ಚು ಕುಟುಂಗಳು ಹೋರಾಡುತ್ತಿದ್ದು ದಿನಕ್ಕೆ 10 ಕುಟುಂಬಗಳಂತೆ ನಿರಂತರವಾಗಿ ಚಳುವಳಿ ನಡೆಸುತ್ತಿದ್ದಾರೆ. ನಿರಾಶ್ರಿತರಿಗಾಗಿ ಸರ್ಕಾರದಿಂದ ಭೂಮಿ ಕೂಡ ಮಂಜೂರಾಗಿದೆ. ಕಂದಾಯ ಇಲಾಖೆ, ಪಟ್ಟಣ ಪಂಚಾಯಿತಿ ವತಿಯಿಂದ ಜಾಗದ ಜಂಟಿ ಸರ್ವೇ ಕೂಡ ಮುಗಿದಿದೆ. ಆದರೆ, ಅಧಿಕಾರಿಗಳು ಕಾಮಗಾರಿಯನ್ನ ಇನ್ನೂ ಆರಂಭಿಸಿಲ್ಲ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈಗಾಗಲೇ ಕಳಸ ಭಾಗದಲ್ಲಿ ಮಳೆ ಆರಂಭವಾಗಿದೆ. ಆಗಾಗ್ಗೆ ಮಳೆ ಕೂಡ ಸುರಿಯುತ್ತಿದೆ. ಸರ್ಕಾರ ಶೀಘ್ರವೇ ಕಾಮಗಾರಿ ಕೆಲಸ ಕೈಗೊಳ್ಳಬೇಕೆಂದು ಆಗ್ರಹಿಸಿ, ಕಳೆದ 24 ದಿನಗಳಿಂದ ಸೂರಿಗಾಗಿ ಹೋರಾಡುತ್ತಿದ್ದೇವೆ. ಆದರೆ, ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ಆದರೆ, ನಮ್ಮ ಬೇಡಿಕೆ ಈಡೇರುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ತೀರ್ಮಾನಿಸಿ, ಬಿಸಿಲು-ಮಳೆ ಮಧ್ಯೆಯಲ್ಲೇ ಹೋರಾಟ ಮುಂದುವರೆಸಿದ್ದಾರೆ. ಸರ್ಕಾರ ಬಡವರ ಬಗ್ಗೆ ಕಾಳಜಿ ತೋರುತ್ತಿಲ್ಲ. ಅಧಿಕಾರಿಗಳ ಆಮೆಗತಿಯ ನಡೆ ಬಡವರನ್ನ ನಿರ್ಣಾಮ ಮಾಡಲು ಮುಂದಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!