May 17, 2024

MALNAD TV

HEART OF COFFEE CITY

ಅಜ್ಜಂಪುರದಲ್ಲಿ ಸಿಡಿಲು ಬಡಿದು 18 ಕುರಿ ಸಾವು

1 min read

 

 

ಚಿಕ್ಕಮಗಳೂರು: ಸಿಡಿಲು ಬಡಿದು ರಸ್ತೆಯಲ್ಲಿ ನಡೆಯುತ್ತಿರುವಾಗ 18 ಕುರಿಗಳು ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಅಜ್ಜಂಪುರ ತಾಲೂಕಿನ ಶಿವನಿ ಸಮೀಪದ ಶಂಭೈನೂರು ಗ್ರಾಮದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಮಾರಿಕಣಿವೆ ಮೂಲದ ಕುರಿಗಾಯಿ ಮಾಲೀಕ ಸುಮಾರು 300ಕ್ಕೂ ಅಧಿಕ ಕುರಿಗಳೊಂದಿಗೆ ಚಿತ್ರದುರ್ಗ-ಚಿಕ್ಕಮಗಳೂರು ಜಿಲ್ಲೆಯ ಗಡಿ ತಾಲೂಕು ಅಜ್ಜಂಪುರಕ್ಕೆ ಬಂದಿದ್ದರು. ತೋಟದಲ್ಲಿ 1-2 ದಿನ ಕುರಿಗಳ ಮೇಯಿಸಿದರೆ ಕುರಿ ಗೊಬ್ಬರಕ್ಕಾಗಿ ಸಾವಿರಾರು ರೂಪಾಯಿ ಹಣ ನೀಡುತ್ತಾರೆ. ಹಾಗಾಗಿ, ತೋಟದಲ್ಲಿ ಕುರಿಗಳನ್ನ ಮೇಯಿಸಲು ಬಂದಿದ್ದರು. ಈ ವೇಳೆ ಕುರಿಗಳು ರಸ್ತೆಯಲ್ಲಿ ನಡೆದುಕೊಂಡು ಬರುವಾಗ ಸಿಡಿಲು ಬಡಿದು ಸುಮಾರು 18 ಕುರಿಗಳು ಸಾವನ್ನಪ್ಪಿವೆ. ಸಿಡಿಲಿನ ಶಬ್ಧಕ್ಕೆ ಬೆದರಿದ ಹತ್ತಾರು ಕುರಿಗಳು ಮನಸ್ಸೋ ಇಚ್ಛೆ ಓಡಿ ಹೋಗಿ ತಪ್ಪಿಸಿಕೊಂಡಿವೆ. ಕುರಿಯ ಸ್ಥಿತಿಯನ್ನ ಕಂಡು ಮಾಲೀಕ ಕಣ್ಣೀರಿಟ್ಟಿದ್ದಾನೆ. ಒಂದೆಡೆ ಮಳೆ, ಮತ್ತೊಂದೆಡೆ ಕಗ್ಗತ್ತಲು. ಈ ಮಧ್ಯೆಯೂ ಕುರಿ ಮಾಲೀಕ ತಪ್ಪಿಸಿಕೊಂಡಿರೋ ಕುರಿಗಳಿಗಾಗಿ ಹುಡುಕಾಟ ಕೂಡ ಆರಂಭಿಸಿದ್ದಾನೆ. ಸಿಡಿಲಿಗೆ ಬಲಿಯಾದ 18 ಕುರಿಗಳ ಅಂದಾಜು ಬೆಲೆ 3-4 ಲಕ್ಷ ಬೆಲೆ ಬಾಳುತ್ತಿದ್ದವು. ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲಿನ ನಡೆಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!