ಮನೆಗೆ ಕನ್ನಹಾಕಿ ಚಿನ್ನಾಭರಣ ಹಾಗೂ ಹಣ ದೋಚಿದ್ದ ಆರೋಪಿ ಬಂಧನ
1 min read
ಅಜ್ಜಂಪುರ: ಮನೆಗೆ ಕನ್ನ ಹಾಕಿ ಬಾಗಿಲು ಒಡೆದು ಹಣ, ಆಭರಣಗಳನ್ನು ದೋಚಿದ್ದ ಆರೋಪಿಯನ್ನು ಅಜ್ಜಂಪುರ ಪೊಲೀಸರು ಬಂಧಿಸುವಲ್ಲಿ ಯಶಸ್ಬಿಯಾಗಿದ್ದಾರೆ
ಜನವರಿ 7 ರಂದು ಅಜ್ಜಂಪುರ ತಾಲೂಕಿನ ಮಲ್ಲೇನಹಳ್ಳಿ ಗ್ರಾಮದ ಮನೆಯೊಂದರಲ್ಲಿ ಯಾರೂ ಇಲ್ಲದ ವೇಳೆ ಮುಂಬಾಗಿಲಿನ ಬೀಗ ಒಡೆದು ಮನೆಯೊಳಗೆ ನುಗ್ಗಿದ್ದ ಕಳ್ಳ ಬೀರುವಿನೊಳಗೆ ಇಟ್ಟಿದ್ದ 5 ಲಕ್ಷದ 9 ಸಾವಿರ ರು.ಮೌಲ್ಯದ 129 ಗ್ರಾಂ ತೂಕದ ಚಿನ್ನಾಭರಣ ಹಾಗೂ 55,000 ರು. ನಗದನ್ನು ಕಳವು ಮಾಡಿರುವ ಕುರಿತಾಗಿ ಅಜ್ಜಂಪುರ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಮನೆಯ ಮಾಲೀಕ ಸುರೇಶ್ ನೀಡಿದ ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ತಮ್ಮಟದಳ್ಳಿ ಪೆಟ್ರೋಲ್ ಬಂಕ್ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಗರಗದ ಹಳ್ಳಿಯ ಪ್ರವೀಣ ಎಂಬ ವ್ಯಕ್ತಿಯನ್ನು ಠಾಣೆಗೆ ಕರೆತಂದು ವಿಚಾರಿಸಿದಾಗ ಕಳ್ಳತನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ.
ಬಂಧಿತನಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ 4 ಲಕ್ಷದ 84 ರು. ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಆರೋಪಿ ಬೇರೊಂದು ಪ್ರಕರಣದಲ್ಲಿ ವ್ಯಕ್ತಿಯೊಬ್ಬರಿಂದ ಕಳವು ಮಾಡಿದ್ದ ಸ್ಪ್ಲೆಂಡರ್ ಬೈಕ್ ಅನ್ನು ಜಫ್ತಿ ಮಾಡಲಾಗಿದೆ.
ಅಜ್ಜಂಪುರ ಠಾಣೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಶೃತಿ, ಉಪ ಅಧೀಕ್ಷಕ ಏಗನಗೌಡರ್, ಇನ್ಸ್ ಪೆಕ್ಟರ್ ಲಿಂಗರಾಜು ಅವರಿದ್ದ ತಂಡ ಈ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g