May 2, 2024

MALNAD TV

HEART OF COFFEE CITY

ಸದಸ್ಯರ ವಿರುದ್ಧ ಜಾತಿನಿಂದನೆ ಆರೋಪ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಡಿಸಿಗೆ ಮನವಿ

1 min read

ಚಿಕ್ಕಮಗಳೂರು: ನಗರಸಭೆ ಪೌರಾಯುಕ್ತರು ಮತ್ತು ಅಧ್ಯಕ್ಷರು ದಿನಗೂಲಿ ನೌಕರರಿಂದ ನಗರಸಭೆ ಸದಸ್ಯರ ಮೇಲೆ ಸುಳ್ಳು ದೂರು ದಾಖಲಿಸಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಮುಖಂಡುರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಈ ಸಂಬoಧ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರಿಗೆ ಮನವಿ ಸಲ್ಲಿಸಿ, ನಗರಸಭೆ ಸದಸ್ಯರ ಮೇಲೆ ಸುಳ್ಳುದೂರು ದಾಖಲಿಸಿದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳ ಬೇಕೆಂದು ಒತ್ತಾಯಿಸಿದರು.ನಗರಸಭೆ ಸದಸ್ಯ ಎ.ಸಿ.ಕುಮಾರಗೌಡ ಮಾತನಾಡಿ, ಜೆಡಿಎಸ್ ಪಕ್ಷದ ಚುನಾಯಿತ ಸದಸ್ಯ ನಾಗಿದ್ದು, ನಗರಸಭೆ ಪೌರಾಯುಕ್ತರ ಸರ್ಕಾರಿ ನೇಮಕಾತಿ ಬಗ್ಗೆ ದಾಖಲೆಗಳನ್ನು ಮಾಹಿತಿ ಹಕ್ಕು ಹಾಗೂ ನಗರಸಭೆ ಅಧ್ಯಕ್ಷರ ಕೆಲವು ಆದೇಶಗಳನ್ನು ಪ್ರತಿಪಕ್ಷದ ಸದಸ್ಯನಾಗಿ ಆಕ್ಷೇ ಪಣೆ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ನಗರಸಭೆ ಕಚೇರಿಯನ್ನು ಪ್ರವೇಶಿಸದಂತೆ ಕೆಲವು ವ್ಯಕ್ತಿ ಗಳನ್ನು ನೇರನೇಮಕಾತಿ ಮಾಡಿಕೊಂಡು ಸುಳ್ಳುದೂರು ನೀಡಿದ್ದಾರೆ ಎಂದು ಆರೋಪಿಸಿ ದರು.

ಇದರಿಂದ ಆಕ್ರೋಶಗೊಂಡ ನಗರಸಭೆ ಪೌರಕಾರ್ಮಿಕನಿಂದ ಸುಳ್ಳು ದೂರನ್ನು ದಾಖಲಿಸಿ, ಜಾತಿನಿಂದನೆ ಆರೋಪ ಹೊರಿಸಿರುವ ಪೌರಾಯುಕ್ತರು ಹಾಗೂ ಅಧ್ಯಕ್ಷರು ಒಳಸಂಚು ರೂ ಪಿಸಿ, ನಗರಠಾಣೆಯಲ್ಲಿ ಪ್ರಕರಣ ದಾಖಲಿಸುವ ಮೂಲಕ ಸದಸ್ಯ ಹಕ್ಕುಗಳನ್ನು ಮೊಟಕು ಗೊಳಿಸಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತಂದಿದ್ದಾರೆ ಎಂದು ದೂರಿದರು.
ಈ ಪ್ರಕರಣವನ್ನು ಕೂಲಂಕುಶವಾಗಿ ತನಿಖೆ ನಡೆಸಿ ಪ್ರತಿಪಕ್ಷ ಸದಸ್ಯರ ಹಕ್ಕುಗಳನ್ನು ಮೊಟಕುಗೊಳಿಸದಂತೆ ಮತ್ತು ಚುನಾಯಿತ ಪ್ರತಿನಿಧಿಗಳನ್ನು ಅನುಚಿತ ಪ್ರಭಾವ ಬೀರಿ ಬೆದರಿಸುವುದನ್ನು ಬಿಲ್ಲಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಬೇಕೆಂದು ಒತ್ತಾಯಿಸಿದರು.ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಗೋಪಿ, ಜೆಡಿಎಸ್ ಜಿಲ್ಲಾ ಮಹಾಪ್ರಧಾನ ಕಾರ್ಯ ದರ್ಶಿ ಜಿ.ಎಸ್.ಚಂದ್ರಪ್ಪ, ನಗರ ಮಹಾಪ್ರಧಾನ ಕಾರ್ಯದರ್ಶಿ ಸಿ.ಕೆ.ಮೂರ್ತಿ, ಮುಖಂಡ ರಾದ ಶಿವು, ವೆಂಕಟೇಶ್, ಚಿದಾನಂದ್, ನಂದನ್, ಪ್ರದೀಪ್, ದಿಲೀಪ್, ಜಯಂತಿ, ಮಂಜಣ್ಣ ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!