ಹಣಕಾಸಿನ ವ್ಯವಹಾರ, ದುಡ್ಡು ಕೊಡುತ್ತೇವೆಂದು ಕರೆಸಿ ಮಾರಣಾಂತಿಕ ಹಲ್ಲೆ ಆರೋಪ
1 min readಚಿಕ್ಕಮಗಳೂರು: ದುಡ್ಡುಕಾಸಿನ ವ್ಯವಹಾರದಲ್ಲಿ ಹಣ ಕೊಡುತ್ತೇವೆಂದು ಕರೆಸಿ ಯುವಕನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರೋ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಸಮೀಪದ ಆನೆದಿಬ್ಬ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಮೇಕನಗದ್ದೆ ಕಿರಣ್ ಎಂಬಾತನ ಮೇಲೆ ದಾಳಿ ನಡೆದಿದೆ. ಗೋಣಿಬೀಡು ಕಾರ್ತಿಕ್ ಎಂಬುವರು ನನಗೆ ಹಣ ನೀಡಬೇಕಿತ್ತು. ಹಣ ಕೊಡುತ್ತೇವೆಂದು ಕರೆಸಿ ನನ್ನ ಕೊಲೆ ಮಾಡಿಸಲು ಯತ್ನಿಸಿದ್ದಾರೆ ಎಂದು ಹಲ್ಲೆಗೊಳಗಾದ ಮೇಕನಗದ್ದೆ ಕಿರಣ್ ಆರೋಪಿಸಿದ್ದಾರೆ. ಹಲ್ಲೆಗೊಳಗಾದ ಮೇಕನಗದ್ದೆ ಕಿರಣ ಹಣ ಪಡೆಯಲು ಹೋಗುವಾಗ ಗೋಣಿಬೀಡು ಸಮೀಪದ ಆನೆದಿಬ್ಬ ಬಳಿ ಎರಡು ಬೈಕಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಕಿರಣ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು ಕೈ ಹಾಗೂ ಕಾಲನ್ನ ಕಡಿದಿದ್ದಾರೆ. ಹಳೆಯ ದ್ವೇಷದ ಹಿನ್ನೆಲೆಯೂ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಹಲ್ಲೆಗೊಳಗಾದ ಕಿರಣ್ನನ್ನ ಮೂಡಿಗೆರೆ ಸರ್ಕಾರ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ರವಾನಿಸಲಾಗಿದೆ. ಸ್ಥಳಕ್ಕೆ ಗೋಣಿಬೀಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರೋ ಗೋಣಿಬೀಡು ಪೊಲೀಸರಿಂದ ಹಲ್ಲೆ ನಿಖರ ಕಾರಣ ತಿಳಿಯಬೇಕಿದೆ. ಹಾಡಹಗಲೇ ಈ ರೀತಿ ಮಚ್ಚಿನಿಂದ ಕೊಚ್ಚಿ ಹಲ್ಲೆಗೆ ಮುಂದಾಗಿರುವುದರಿಂದ ಮಲೆನಾಡಿಗರು ಆತಂಕಕ್ಕೀಡಾಗಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g