ಭದ್ರೆಯ ನೀರಿಗಾಗಿ ಕಾಫಿನಾಡು-ಕೋಟೆನಾಡಿಗರ ಕಲಹ
1 min readಬರಪೀಡಿತ ನಾಲ್ಕು ಜಿಲ್ಲೆಗಳಿಗೆ ಕುಡಿಯುವ ನೀರು ಮತ್ತು ಕರೆ ತುಂಬಿ ಸುವ ಭ್ರದಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ಜಿಲ್ಲೆಯ ಅಜ್ಜಂಪುರ ತಾಲ್ಲೂಕು ರೈತರು ತಡೆ ಮಾಡುತ್ತಿದ್ದು, ಇದರಿಂದ ಕಾಮಗಾರಿ ವಿಳಂಬವಾಗುತ್ತಿದೆ. ಕಾಮಗಾರಿ ಪೂರ್ಣ ಗೊಳಿಸಲು ಸಹಕಾರ ನೀಡಬೇಕೆಂದು ಚಿತ್ರದುರ್ಗ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಸಂಚಾಲಕ ಹಾಗೂ ಪತ್ರಕರ್ತ ಚಿಕ್ಕಪ್ಪನಹಳ್ಳಿ ಷಣ್ಮುಖ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭದ್ರಾ ಮೇಲ್ದಂಡೆ ಯೋಜನೆ ಚಿತ್ರದುರ್ಗ, ದಾವಣಗೆರೆ, ತುಮಕೂರು ಚಿಕ್ಕಮಗಳೂರು ಜಿಲ್ಲೆಯ ಬಯಲು ಸೀಮೆ ಭಾಗದ ಕೆರೆ ತುಂಬಿಸುವ ಯೋಜನೆಯಾಗಿದೆ. ಇದರಿಂದ ಜಿಲ್ಲೆಯ ರೈತರಿಗೂ ಅನು ಕೂಲವಾಗಲಿದೆ ಎಂದು ತಿಳಿಸಿದರು.ಕಾಮಗಾರಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕಾಮಗಾರಿಯೂ ನಡೆಯುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲ್ಲೂಕು ಅಬ್ಬಿನಹೊಳೆ ಕಾಲುವೆ ಕಾಮಗಾರಿಗೆ ಸ್ಥಳೀಯ ರೈತರು ಪರಿಹಾರ ವಿಷಯ ಮುಂದಿಟ್ಟುಕೊoಡು ತಡೆಯೊಡ್ಡಿದ್ದಾರೆ ಇದರಿಂದ ಕಾಮಗಾರಿ ವಿಳಂಬವಾಗುತ್ತಿದೆ. ೬ಸಾವಿರ ಕೋಟಿ ವೆಚ್ಚದ ಕಾಮಗಾರಿ ೨೦ಸಾವಿರಕೋಟಿ ರೂ.ಗೆ ಏರಿಕೆಯಾಗಿದೆ ಎಂದರು.
ನೂರಾರು ರೈತರಿಂದ ಭೂಸ್ವಾಧೀನ ಮಾಡಿಕೊಳ್ಳಲಾಗಿದೆ. ಪರಿಹಾರವನ್ನು ಪಡೆದುಕೊಂಡಿ ದ್ದಾರೆ. ಜಮೀನು ಜಲಸಂಪನ್ಮೂಲ ಇಲಾಖೆಗೆ ಒಳಪಟ್ಟಿದೆ. ಕೆಲವು ರೈತರು ಹೆಚ್ಚಿನ ಪರಿಹಾರ ಕ್ಕೆ ಬೇಡಿಕೆ ಇಟ್ಟು ಪಟ್ಟು ಹಿಡಿದು ಕಾಮಗಾರಿಗೆ ಅಡ್ಡಿಪಡಿಸುತ್ತಿದ್ದಾರೆ. ಅಜ್ಜಂಪುರ ತಾಲ್ಲೂಕು ಅಬ್ಬಿನಹೊಳೆ ಎಂಬಲ್ಲಿ ೧.೯ ಕಿ.ಮೀ. ಕಾಲುವೆ ನಿರ್ಮಿಸಲು ಭೂಮಿ ನೀಡಿದ ರೈತರು ಪರಿ ಹಾರ ಕಡಿಮೆ ಎಂದು ಆರೋಪಿಸಿದ್ದಾರೆ. ಅವರ ಬೇಡಿಕೆಯನ್ನು ನೀರಾವರಿ ಹೋರಾಟ ಸಮಿತಿ ಬೆಂಬಲಿಸುತ್ತದೆ ಎಂದು ತಿಳಿಸಿದರು.
ಅಜ್ಜಂಪುರ ರೈತರ ನ್ಯಾಯಯುತ ಬೇಡಿಕೆಗೆ ಧ್ವನಿಯಾಗಿರುತ್ತೇವೆ. ಆದರೆ ಅಲ್ಲಿನ ಕಾಮ ಗಾರಿಗೆ ಅಡ್ಡಿಪಡಿಸುವುದರಿಂದ ಕಾಮಗಾರಿಗೆ ವಿಳಂಬವಾಗುತ್ತಿದೆ. ರೈತರು ನ್ಯಾಯಾಲ ಯದ ಮೆಟ್ಟಿಲೇರಿದ್ದರಿಂದ ಕಾಮಗಾರಿ ೩ವರ್ಷಗಳಿಂದ ನೆನಗುದಿಗೆ ಬಿದ್ದಿದೆ. ಈ ಸಂಬoಧ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಗೆ ಮನವಿ ಸಲ್ಲಿಸಿದ್ದು, ಕಾಮಗಾರಿ ಆರಂಭಿಸಲು ಸೂಚನೆ ನೀಡಿದ್ದರು. ರೈತರು ಕಾಮಗಾರಿ ನಡೆಸದಂತೆ ಅಡ್ಡಿಪಡಿಸಿ ಜೆಸಿಬಿ ಗಳನ್ನು ಹಿಂದಕ್ಕೆ ಕಳುಹಿಸಿದ್ದಾರೆ ಎಂದು ದೂರಿದರು.
ಬಯಲುಸೀಮೆ ಜಿಲ್ಲೆಗಳಿಗೆ ಈ ಯೋಜನೆಯಿಂದ ಅನುಕೂಲವಾಗಲಿದ್ದು, ರೈತರು ತಮ್ಮ ಪಟ್ಟು ಸಡಿಲಿಸಿ ಕಾಲುವೆ ಕಾಮಗಾರಿಗೆ ಸಹಕಾರ ನೀಡಬೇಕು. ರೈತರ ಬೇಡಿಕೆ ಸಂಬAಧ ನ್ಯಾಯಾಲಯದಲ್ಲಿ ನ್ಯಾಯ ಪಡೆಯಲು ಅವಕಾಶ ಇದ್ದು ಬಯಲು ಭಾಗದ ಜನರ ಮಹತ್ವಾಕಾಂಕ್ಷಿ ಯೋಜನೆ ಜಾರಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿ ಅಧ್ಯಕ್ಷ ಮಲೇನೂರು ಶಂಕರಪ್ಪ, ಕಾರ್ಯಾಧ್ಯಕ್ಷ ಲಿಂಗಾರೆಡ್ಡಿ, ಪ್ರಧಾನ ಕಾರ್ಯದರ್ಶಿ ದಯಾನಂದ, ಮುಖಂಡ ಸುರೇಶ್ಬಾಬು, ಎಐಕೆಎಸ್ ಸಂಘದ ಕರಿಯಪ್ಪ ಇದ್ದರು
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g