ನಾಡಗೀತೆಗೆ ಅಪಮಾನ ಜೆಡಿಎಸ್ ಪ್ರತಿಭಟನೆ
1 min readಚಿಕ್ಕಮಗಳೂರು: ರಾಷ್ಟ್ರಕವಿ ಕುವೆಂಪು ರಚಿತ ನಾಡಗೀತೆಗೆ ಅಪಮಾನ ಮಾಡಿರುವ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರ ವಿರುದ್ಧ ಪ್ರಕರಣ ದಾಖ ಲಿಸಿ ಬಂಧಿಸಬೇಕು ಮತ್ತು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸ ಬೇಕೆಂದು ಆಗ್ರಹಿಸಿ ಜಿಲ್ಲಾ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಗಾಂಧಿ ಮೈದಾನದ ಗಾಂಧಿಪ್ರತಿಮೆ ಮುಂಭಾಗ ಸಮಾವೇಶಗೊಂಡ ಮುಖಂಡರು ಮತ್ತು ಕಾರ್ಯಕರ್ತರು ರೋಹಿತ್ ಚಕ್ರತೀರ್ಥ ಮತ್ತು ರಾಜ್ಯ ಸರ್ಕಾರದ ವಿ ರುದ್ಧ ಆಕ್ರೋಶ ವ್ಯಕ್ತಪಡಿಸಿದರು.ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಮಾತನಾಡಿ, ಪಠ್ಯಪುಸ್ತಕ ಪರಿಷ್ಕರ ಣಾ ಸಮಿತಿಗೆ ಮಾನದಂಡವಿದೆ. ರೋಹಿತ್ ಚಕ್ರತೀರ್ಥ ಅವರಿಗೆ ಯಾವ ಮಾನದಂಡ ಆಧಾರದ ಮೇಲೆ ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ಪ್ರಶ್ನಿಸಿದರು.
ರೋಹಿತ್ ಚಕ್ರತೀರ್ಥ ಶಿಕ್ಷಣ ಕ್ಷೇತ್ರದಲ್ಲಿ ಯಾವ ಅನುಭವ ಹೊಂದಿದ್ದಾರೆ. ಯಾವ ಅನ್ವೇ ಷಣೆ ಮಾಡಿದ್ದಾರೆ. ಇವರು ಬರೆದಿರುವ ಪುಸ್ತಕ ವಿಶ್ವವಿದ್ಯಾಲಯದಲ್ಲಿ ಪಠ್ಯವಾಗಿದೆ. ಯಾವ ಸಾಧನೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಪಠ್ಯಪುಸ್ತಕ ಪರಿಷ್ಕರಣೆ ಇಂದು ನಿನ್ನೆಯದಲ್ಲ. ಪಠ್ಯದಲ್ಲಿ ಮಕ್ಕಳ ಭವಿಷ್ಯ ಅಡಗಿದ್ದು, ತರ್ಕ ಬದ್ಧ ಸಮಿತಿ ಇದರಬೇಕು. ಅನಾನುಭವಿ ರೋಹಿತ್ ಚಕ್ರತೀರ್ಥ ಅವರನ್ನು ಪಠ್ಯ ಪರಿಷ್ಕರಣೆ ಅಧ್ಯಕ್ಷರನ್ನಾಗಿ ಮಾಡಿರುವುದು ಎಷ್ಟು ಸರಿ ಎಂದರು.ಕುವೆಂಪು ರಚಿತ ನಾಡಗೀತೆಗೆ ಈ ನಾಡಿನ ಜನರು ಗೌರವಪೂರ್ವಕವಾಗಿ ಕಾಣುತ್ತಾರೆ. ರಾಷ್ಟçಗೀತೆಗೆ ನೀಡುವಷ್ಟು ಗೌರವವನ್ನು ನಾಡಗೀತೆಗೂ ನೀಡಲಾಗುತ್ತಿದೆ ಅಂತಹ ನಾಡ ಗೀತೆಗೆ ರೋಹಿತ್ ಚಕ್ರತೀರ್ಥ ಅಪಮಾನ ಮಾಡಿದ್ದು, ಆತನ ವಿರುದ್ಧ ದ್ರೇಶದ್ರೋಹ ಪ್ರಕ ರಣ ದಾಖಲಿಸಿ ಬಂಧಿಸಬೇಕು. ಹಾಗೂ ಪಠ್ಯ ಪರಿಷ್ಕರಣಾ ಸಮಿತಿ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ನಾರಾಯಣ ಗುರುಗಳು ಶ್ರೇಷ್ಟ ದಾರ್ಶನಿಕರಾಗಿದ್ದು, ಸಮಾಜ ಸುಧಾರಕರಾಗಿದ್ದಾರೆ. ಅವರ ತತ್ವ ಸಿದ್ಧಾಂತಗಳನ್ನು ಯುವ ಪೀಳಿಗೆಗೆ ತಿಳಿಸುವ ಅಗತ್ಯವಿದೆ. ಆದರೆ, ನಾರಾಯಣ ಗುರು
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g