ಸಬ್ ರಿಜಿಸ್ಟ್ರಾರ್ ಕಚೇರಿಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ
1 min readಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರು ನಗರದ ಉಪ ನೋಂದ ಣಾಧಿಕಾರಿ ಕಚೇರಿಗೆ ಭೇಟಿನೀಡಿ ಪರಿಶೀಲನೆ ನಡೆಸಿದರು.ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ದೂರು ಕೇಳಿಬಂದ ಹಿನ್ನಲೆಯಲ್ಲಿ ದಿಢೀರ್ ಭೇಟಿನೀಡಿ ಪರಿಶೀಲನೆ ನಡೆಸಲಾಗಿದೆ. ಸಿಬ್ಬಂದಿಗಳು ಕಚೇರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ ಎಂದರು.
ಕಚೇರಿಗೆ ಬರುವ ಸಾರ್ವಜನಿಕರಿಗೆ ಶೌಚಾಲಯದ ಸಮಸ್ಯೆ ಇರುವುದು ಕಂಡು ಬಂದಿದೆ. ಕಚೇರಿಗೆ ಎಷ್ಟು ಜಾಗ ಬೇಕಾಗುತ್ತದೆ ಎಂಬುದನ್ನು ಪರಿಶೀಲಿಸುತ್ತೇನೆ. ತಾಲ್ಲೂಕು ಕಚೇರಿಗೂ ಭೇಟಿನೀಡಿ ಕಚೇರಿ ನಡೆಸುವಷ್ಟು ಸ್ಥಳವಕಾಶ ದೊರೆತಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿಯನ್ನು ಅಲ್ಲಿಗೆ ಸ್ಥಳಾಂತರಿಸಲಾಗುವುದು ಎಂದು ಹೇಳಿದರು.
ಕಚೇರಿಯಲ್ಲಿ ಭ್ರಷ್ಟಾಚಾರ ಕುರಿತು ಯಾರೇ ಸಾರ್ವಜನಿಕರು ಲಿಖಿತವಾಗಿ ದೂರು ನೀಡಿದರೆ, ಪರಿಶೀಲಿಸಿ, ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಸಾರ್ವಜನಿಕರು ತಮ್ಮ ಕೆಲಸದ ನಿಮಿತ್ತ ಕಚೇರಿಗೆ ಬಂದಾಗ ದಲ್ಲಾಳಿಗಳಿಂದ ಅಥವಾ ಅಧಿಕಾರಿಗಳಿಂದ ಸಮಸ್ಯೆ ಯಾದರೇ ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಲಿಖಿತ ಅಥವಾ ಮೌಖಿಕವಾಗಿ ದೂರು ಸಲ್ಲಿ ಸುವಂತೆ ತಿಳಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g