ನನಗೆ ಗನ್ಮ್ಯಾನ್ ನೀಡಿ, ನಗರಸಭೆ ಅಧ್ಯಕ್ಷ ವೇಣುಗೋಪಾಲ್ ಎಸ್ಪಿಗೆ ಮನವಿ
1 min read
ಚಿಕ್ಕಮಗಳೂರು.ನಾನು ಅಧ್ಯಕ್ಷನಾದಾಗಿನಿಂದಲೂ ಕಿಡಿಗೇಡಿಗಳು ನನ್ನನ್ನ ಹಿಂಬಾಲಿಸಿ ತೊಂದರೆ ಕೊಡುತ್ತಿದ್ದಾರೆ. ಹಾಗಾಗಿ, ನನಗೆ ಅಂಗರಕ್ಷಕನನ್ನ ನೀಡಿ ಎಂದು ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಅವರಿಗೆ ಪತ್ರ ಬರೆದಿದ್ದಾರೆ. ನಾನು ಕುಟುಂಬಸ್ಥರ ಜೊತೆ ಧರ್ಮಸ್ಥಳಕ್ಕೆ ಹೋದಾಗಲೂ ನನ್ನ ಫಾಲೋ ಮಾಡಿ ನನ್ನ ಕುಟುಂಬದ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದಾರೆ. ಹಾಗಾಗಿ, ನನಗೆ ಅಂಗರಕ್ಷಕನನ್ನ ನೀಡಿ ಎಂದು ಮನವಿ ಮಾಡಿದ್ದಾರೆ. ನಾನು ಚಿಕ್ಕಮಗಳೂರು ನಗರದ ಪ್ರಥಮ ಪ್ರಜೆಯಾಗಿದ್ದೇನೆ. ಕಿಡಿಗೇಡಿಗಳು ನನ್ನನ್ನ ಫಾಲೋ ಮಾಡುತ್ತಾ ನನಗೆ ತೊಂದರೆ ನೀಡುತ್ತಿದ್ದಾರೆ. ಹಾಗಾಗಿ, ನನ್ನ ಸುರಕ್ಷತೆ ಹಾಗೂ ಭದ್ರತೆಯ ದೃಷ್ಠಿಯಿಂದ ನನಗೆ ಗನ್ ಮ್ಯಾನ್ ನೀಡಬೇಕೆಂದು ಮನವಿ ಮಾಡಿದ್ದಾರೆ. ಚಿಕ್ಕಮಗಳೂರು ನಗರಸಭೆಯಲ್ಲಿ ದ್ವಾರಪಾಲಕರ ನೇಮಕದಲ್ಲಿ ಆರಂಭವಾಗಿರುವ ಜೆಡಿಎಸ್-ಬಿಜೆಪಿ ನಡುವಿನ ಕೋಲ್ಡ್ ವಾರ್ ಆರಂಭವಾಗಿದೆ.
ಈಗಾಗಲೇ ಒಬ್ಬರ ಮೇಲೋಬ್ಬರು ದೂರು ನೀಡಿದ ಪರಿಣಾಮ ನಗರಸಭೆ ಅಧ್ಯಕ್ಷ ವೇಣುಗೋಪಾಲ್, ಆಯುಕ್ತ ಬಸವರಾಜ್ ಹಾಗೂ ನಗರಸಭೆ ಸದಸ್ಯ ಕುಮಾರ್ ಗೌಡ ವಿರುದ್ಧ ದೂರು ದಾಖಲಾಗಿದೆ. ನಗರಸಭೆಯ ಸದಸ್ಯರೊಳಗಿನ ರಾಜಕೀಯ ಬೇಗುದಿಗೆ ಸದಸ್ಯರ ಮನಸ್ಥಿತಿ ದಿನಕ್ಕೊಂದು ರೂಪ ಪಡೆಯುತ್ತಿದೆ. ನಗರಸಭೆ ಅಧ್ಯಕ್ಷರು ನಮ್ಮದು ಭ್ರಷ್ಟಾಚಾರ ರಹಿತ ಅಭಿವೃದ್ಧಿ ಆಡಳಿತ ಅಂತಾರೆ. ಯಾವುದೇ ದಾಖಲೆ ನೀಡುವುದಿಲ್ಲ. ಆದರೆ, ನಗರಸಭೆ ಅಧ್ಯಕ್ಷ ವೇಣುಗೋಪಾಲ್ ಸರ್ಕಾರದ ಕಾರಿನಲ್ಲಿ ಧರ್ಮಸ್ಥಳ-ಕುಕ್ಕೆ ಸುಬ್ರಹ್ಮಣ್ಯಕ್ಕೆ ಟ್ರಿಪ್ ಹೋಗಿದ್ದಾರೆ ಎಂದು ಆ ಫೋಟೋಗಳನ್ನಟ್ಟುಕೊಂಡು ನಗರಸಭೆ ಸದಸ್ಯರು ಇದ್ಯಾವ ರೀತಿ ಅಭಿವೃದ್ಧಿ ಆಡಳಿತ ಎಂದು ಪ್ರಶ್ನಿಸಿದ್ದರು. ಹಾಗಾಗಿ, ನಗರಸಭೆ ಅಧ್ಯಕ್ಷ ವೇಣುಗೋಪಾಲ್, ನನ್ನನ್ನ ಕಿಡಿಗೇಡಿಗಳು ಫಾಲೋ ಮಾಡುತ್ತಿದ್ದಾರೆ. ಹಾಗಾಗಿ, ನನಗೆ ಗನ್ ಮ್ಯಾನ್ ನೀಡಿ ಎಂದು ಎಸ್ಪಿಗೆ ಮನವಿ ಮಾಡಿದ್ದಾರೆ
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g