ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ, ಎರಡು ಹಸುಗಳು ಸಜೀವ
1 min read
ಚಿಕ್ಕಮಗಳೂರು.ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಎರಡು ರಾಸುಗಳು ಜೀವಂತವಾಗಿ ಸುಟ್ಟು ಹೋಗಿರುವ ಕರುಣಾಜನಕ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಹಿರೇಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿವಪುರ ಗ್ರಾಮದಲ್ಲಿ ನಡೆದಿದೆ. ರೈತ ನಾಗೇಶ್ ಎಂಬುವರಿಗೆ ಸೇರಿದ ಎರಡು ಹಸುಗಳು ಸಜೀವ ದಹನವಾಗಿದೆ. ಶುಕ್ರವಾರ ರಾತ್ರಿ ಶನಿವಾರ ಬೆಳಗಿನ ಜಾವ ಈ ದುರ್ಘಟನೆ ಸಂಭವಿದೆ. ಶುಕ್ರವಾರ ರಾತ್ರಿ ಶಿವಪುರ ಗ್ರಾಮದ ನಾಗೇಶ್ ಮನೆಯಲ್ಲಿ ಯಾರೂ ಇರಲಿಲ್ಲ. ಮನೆ ಹಿಂಭಾಗದ ಕೊಟ್ಟಿಗೆಯಲ್ಲಿ ಎರಡು ರಾಸುಗಳನ್ನ ಕಟ್ಟಿದ್ದರು. ಮನೆಯಲ್ಲಿ ಯಾರು ಇಲ್ಲದ ವೇಳೆ ಆಕಸ್ಮಿಕ ಬೆಂಕಿ ತಗುಲಿದೆ ಎಂದು ಹೇಳಲಾಗಿದೆ.
ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಎರಡು ರಾಸುಗಳು ಸಜೀವ ದಹನವಾಗಿವೆ. ರಾಸುಗಳನ್ನ ಹಗ್ಗದಿಂದ ಕಟ್ಟಿ ಹಾಕಿದ್ದರಿಂದ ಅವು ತಪ್ಪಿಸಿಕೊಳ್ಳಲು ಸಾಧ್ಯವಾಗದೆ. ಬೆಂಕಿಯ ಕೆನ್ನಾಲಿಗೆಯಲ್ಲಿ ಉಸಿರು ಚೆಲ್ಲಿವೆ. ಮನೆ ಮೇಲೆ ಹಾಗೂ ಸುತ್ತಮುತ್ತ ದಟ್ಟ ಹೊಗೆ ಆವರಿಸಿದ್ದರಿಂದ ಅಕ್ಕಪಕ್ಕದ ಮನೆಯವರು ಸ್ಥಳಕ್ಕೆ ಧಾವಿಸಿದಾಗ ಬೆಂಕಿ ತಗುಲಿರುವುದು ತಿಳಿದು ಬಂದಿದೆ. ಸ್ಥಳಿಯರು ರಾಸುಗಳನ್ನ ರಕ್ಷಿಸಲು ಮುಂದಾದರೂ ಸಾಧ್ಯವಾಗಲಿಲ್ಲ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಆ ವೇಳೆಗಾಗಲೇ ರಾಸುಗಳು ಬೆಂಕಿಯಲ್ಲಿ ಬೆಂದು ಉಸಿರು ಚೆಲ್ಲಿದ್ದವು. ಸ್ಥಳಕ್ಕೆ ಗ್ರಾಮ ಪಂಚಾಯಿತಿ ಸದಸ್ಯ ಅಭಿಷೇಕ್, ಕೊಪ್ಪ ಪಿ.ಎಸ್.ಐ. ಶ್ರೀನಾಥ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g