ಕಾರು ಅಪಘಾತ ಚಾಲಕ ಸಾವು
1 min readಚಿಕ್ಕಮಗಳೂರು: ಅತೀವೇಗ ಮತ್ತು ಅಜಾಗರುಕತೆ ಚಾಲನೆಯಿಂದ ಕಾರು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ನುಜ್ಜುಗುಜ್ಜಾಗಿದ್ದು, ಕಾರು ಚಾಲಕ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಹಿರೇಗೌಜ ಸಮೀಪ ಹೊಂಗೆಕಟ್ಟೆ ತಿರುವಿನಲ್ಲಿ ನಡೆದಿದೆ.
ಕಾರು ಕಡೂರು ಕಡೆಯಿಂದ ಚಿಕ್ಕಮಗಳೂರು ಕಡೆಗೆ ಆಗಮಿಸುತ್ತಿದ್ದಾಗ ಘಟನೆ ಸಂಭವಿ ಸಿದ್ದು, ಅತೀ ವೇಗ ಮತ್ತು ಅಜಾಗರುಕತೆ ಚಾಲನೆಯಿಂದ ಘಟನೆ ಸಂಭವಿಸಿದೆ ಎನ್ನಲಾಗು ತ್ತಿದೆ.
ಕಾರು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಚಾಲಕ ವೇಣುಗೋಪಾಲ್ ತೀವ್ರತರವಾದ ಪೆಟ್ಟಾಗಿದ್ದು, ತಕ್ಷಣ ಚಾಲಕನನ್ನು ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಚಾಲಕ ವೇಣುಗೋಪಾಲ್ ಮೃತಪಟ್ಟಿದ್ದಾನೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g