ಹಿಂದುಳಿದ ವರ್ಗದವರ ಶ್ರೇಯೋಭಿವೃದ್ಧಿಗೆ ಪ್ರಧಾನಮಂತ್ರಿ ಯೋಜನೆಗಳನ್ನು ರೂಪಿಸಿ ದ್ದಾರೆ. ನರೇಂದ್ರ ಬಾಬು.
1 min readಚಿಕ್ಕಮಗಳೂರು: ದೇಶವನ್ನು ಸದೃಢ ಮತ್ತು ಸ್ವಾವಲಂಭಿಯಾಗಿಸಲು ಪ್ರಧಾನಮಂತ್ರಿ ನರೇಂ ದ್ರ ಮೋದಿ ಅವರು ಎಲ್ಲಾ ವರ್ಗದ ಜನತೆಗೆ ಅನೇಕ ಯೋಜನೆಗಳನ್ನು ರೂಪಿಸಿದ್ದಾರೆ ಎಂದು ಬಿಜೆಪಿ ಹಿಂದುಳಿದ ವರ್ಗ ಮೋರ್ಚಾದ ರಾಜ್ಯಾಧ್ಯಕ್ಷ ನೆ.ಲ.ನರೇಂದ್ರ ಬಾಬು ತಿಳಿಸಿ ದರು. ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಹಿಂದುಳಿದ ವರ್ಗ ಮೋರ್ಚಾ ವತಿ ಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.ನರೇಂದ್ರ ಮೋದಿ ಅವರ 8ವರ್ಷ ಆಡಳಿತದಲ್ಲಿ ದೇಶದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಈ ಹಿಂದಿನ ಆಡಳಿತ, ಅಭಿವೃದ್ಧಿ ಹಾಗೂ ಇಂದಿನ ವ್ಯವಸ್ಥೆಯನ್ನು ತುಲನೆ ಮಾಡಿದಾಗ ದೇಶ ಅಭಿವೃದ್ಧಿ ಪಥದತ್ತ ಹೋಗುತ್ತಿದೆ ಎಂದರು.ದೇಶವನ್ನು ಸದೃಢ ಮತ್ತು ಸ್ವಾಲಂಭಿಯಾಗಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಎಲ್ಲಾ ವರ್ಗದ ಜನತೆಗೆ ಅನೇಕ ಯೋಜನೆಗಳನ್ನು ರೂಪಿಸಿದ್ದಾರೆ. ಹಿಂದುಳಿದ ವರ್ಗಗಳ ಪ್ರತಿನಿಧಿಗಳಿಗೆ ಸಾಕಷ್ಟು ಅವಕಾಶ, ಸ್ಥಾನಮಾನ ನೀಡಿದ್ದಾರೆ. ಹಿಂದುಳಿದ ವರ್ಗ ದ ಸಮುದಾಯದ ಪದಾಧಿಕಾರಿಗಳು ತಾಯಿಬೇರುಗಳಿದ್ದಂತೆ ಸರ್ಕಾರದ ಯೋಜನೆಗಳನ್ನು ಜನತೆಗೆ ಮುಟ್ಟಿಸುವ ಕೆಲಸವಾಗಬೇಕು ಎಂದರು.
ಶಾಸಕ ಸಿ.ಟಿ.ರವಿ ಪ್ರತೀ ತಳಸಮುದಾಯದ ನಾಯಕರನ್ನು ಗುರುತಿಸಿ ಸ್ಥಾನಮಾನ ಕಲ್ಪಿಸಿರು ವುದು ಸಂತಸ ತಂದಿದೆ. ಈ ಮೂಲಕ ಚಿಕ್ಕಮಗಳೂರನ್ನು ಮಾದರಿಯನ್ನಾಗಿಸಲು ಶ್ರಮಿಸಿ ದ್ದಾರೆ. ಕೇಂದ್ರ ಸರ್ಕಾರವು ಅಂತ್ಯೋದಯ ಜಾರಿಗೆ ತಂದಿದೆ. ನರೇಂದ್ರ ಮೋದಿಯವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಮುಂದಾಗಬೇಕು ಎಂದು ಕರೆ ನೀಡಿದರು.
ವಿಧಾನ ಪರಿಷತ್ ಶಾಸಕ ಎಂ.ಕೆ.ಪ್ರಾಣೇಶ್ ಮಾತನಾಡಿ, ಸಮಾಜದ ಕೆಳಹಂತದ ಎಲ್ಲಾ ಸಮುದಾಯವನ್ನು ಗುರುತಿಸಿ ಸ್ಥಾನಮಾನ ಕಲ್ಪಿಸುವ ಮೂಲಕ ಅವರ ಏಳಿಗೆಗೆ ಬಿಜೆಪಿ ಪಕ್ಷ ಶ್ರಮಿಸಿದೆ ಎಂದು ಅಭಿಪ್ರಾಯಿಸಿದರು.ನರೇಂದ್ರ ಮೋದಿಯವರ ಆಡಳಿತ ಸರ್ಕಾರ ಸಮಾಜದ ಹಿಂದುಳಿದ ವರ್ಗವನ್ನು ಗುರುತಿಸಿ ಕಟ್ಟಕಡೆಯ ವ್ಯಕ್ತಿಗೂ ಸ್ಥಾನಮಾನ ಕಲ್ಪಿಸಿದೆ. ಹಲವಾರು ಯೋಜನೆಗಳನ್ನು ರೂಪಿಸಿ ಅನು ಷ್ಠಾನಗೊಳಿಸಿದೆ ಎಂದರು.
ಜಿಲ್ಲಾಧ್ಯಕ್ಷ ಎಚ್.ಸಿ.ಕಲ್ಮರುಡಪ್ಪ ಮಾತನಾಡಿ, ಪಕ್ಷದ ಕಾರ್ಯ ಚಟುವಟಿಕೆಯಲ್ಲಿ ಒಬಿಸಿ ಸಮುದಾಯದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಕೊಂಡು ಪಕ್ಷದ ಸಂಘಟನೆಗೆ ಶ್ರಮಿಸಬೇಕು. ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಜನತೆಗೆ ಮುಟ್ಟಿಸುವುದರ ಜತೆಗೆ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು ಎಂದರು.
ಸಭೆಯಲ್ಲಿ ಒಬಿಸಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಅಶೋಕ್ಮೂರ್ತಿ, ಒಬಿಸಿ ಮೋರ್ಚಾ ದ ಜಿಲ್ಲಾಧ್ಯಕ್ಷ ವೆನ್ನಿಲ್ಲಾ ಭಾಸ್ಕರ್, ಒಬಿಸಿ ಮೋರ್ಚಾದ ರಾಜ್ಯ ಕಾರ್ಯಕಾರಣಿ ಸದಸ್ಯ ಕನಕರಾಜ್ ಅರಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾರಾಯಣ ಚಾರ್ಯ, ಪುಷ್ಪರಾಜ್, ಪ್ರೇಮ್ಕುಮಾರ್, ರಾಜಪ್ಪ, ಬೆಳವಾಡಿ ರವೀಂದ್ರ ಸೇರಿದಂತೆ ಅನೇಕರು ಇದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g