ಸೋಯಾಬೀನ್ ಬೆಳೆ ಉತ್ತೇಜಿಸಲು ಉಚಿತ ಬಿತ್ತನೆ ಬೀಜ: ಕೆ.ಕಿಶೋರ್ ಕುಮಾರ್ ಹೆಗ್ಡೆ
1 min readಚಿಕ್ಕಮಗಳೂರು: ಜಿಲ್ಲೆಯಲ್ಲಿ ಸೋಯಾಬೀನ್ ಬೆಳೆಯನ್ನು ಇತ್ತೇಜಿಸುವ ನಿಟ್ಟಿನಲ್ಲಿ ಲೈಫ್ ಲೈನ್ ಫೀಡ್ಸ್ ಸಂಸ್ಥೆ ೪೦ಲಕ್ಷ ರೂ. ವೆಚ್ಚದಲ್ಲಿ ಸೋಯಾಬೀನ್ ಬಿತ್ತನೆ ಬೀಜ ಖರೀದಿಸಿ, ರೈತರಿಗೆ ಉಚಿತವಾಗಿ ವಿತರಿಸಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಮತ್ತು ಆಡಳಿತ ಮಂಡಳಿ ನಿರ್ದೇಶಕ ಕೆ.ಕಿಶೋರ್ ಕುಮಾರ್ ಹೆಗ್ಡೆ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಯಾಬೀನ್ಗೆ ಉತ್ತಮ ಬೇಡಿಕೆ ಇದೆ. ರೈತರಿಗೆ ಈ ಬಗ್ಗೆ ಮಾಹಿತಿ ನೀಡಿ ಬೆಳೆ ಬೆಳೆಯಲು ಪ್ರೋತ್ಸಾಹಿಸಲು ೪೦ ಲಕ್ಷ ರೂ ವೆಚ್ಚದಲ್ಲಿ ೩೦ ಟನ್ ಬಿತ್ತನೆ ಬೀಜವನ್ನು ವಿತರಿಸ ಲಾಗುವುದು. ರೈತರು ಬೆಳೆಯುವ ಸೋಯಾಬೀನ್ ಬೆಳೆಯನ್ನು ಸಂಸ್ಥೆ ಮಾರುಕಟ್ಟೆ ಬೆಲೆಯಲ್ಲಿ ಖರೀದಿಸಲಿದೆ ಎಂದು ಹೇಳಿದರು.
ಸೋಯಾಬೀನ್ನನ್ನು ಮಹಾರಾಷ್ಟç, ಮಧ್ಯಪ್ರದೇಶ ಉತ್ತರ ಕರ್ನಾಟಕ ಜಿಲ್ಲೆಗಳಿಂದ ತರಿಸಿಕೊಳ್ಳಲಾಗುತ್ತಿದೆ. ಇಲ್ಲಿನ ರೈತರು ಸೋಯಾಬೀನ್ ಬೆಳೆದಲ್ಲಿ ಹೆಚ್ಚಿನ ಲಾಭಾಂಶ ದೊರೆಯಲಿದೆ. ಈ ನಿಟ್ಟಿನಲ್ಲಿ ರೈತರ ಆರ್ಥಿಕ ಸ್ಥಿತಿಯೂ ಸುಧಾರಿಸಲಿದೆ ಎಂದರು.
೫೦ ಕೋಟಿ ರೂ. ವೆಚ್ಚದಲ್ಲಿ ಸೋಯಾ ಹಿಂಡಿ ಮತ್ತು ಎಣ್ಣೆಯನ್ನು ಉತ್ಪಾದಿಸುವ ಅತ್ಯಾಧುನಿಕ ಯಂತ್ರೋಪಕರಣ ವನ್ನು ಹಳೇ ಲಕ್ಯಾದಲ್ಲಿ ಸ್ಥಾಪಿಸಲಾಗಿದೆ. ವಾರ್ಷಿಕ ೩೦ ಸಾವಿರ ಟನ್ ಸಂಸ್ಥೆಯೇ ಖರೀಸುತ್ತಿದೆ ಪ್ರತೀ ಟನ್ಗೆ ಪ್ರಸ್ತುತ ಮಾರುಕಟ್ಟೆ ಬೆಲೆ ೬೦ ರಿಂದ ೬೫ ಸಾವಿರ ರೂ. ಇದೆ. ಈ ಹಿನ್ನಲೆಯಲ್ಲಿ ಸುತ್ತಮುತ್ತಲ ರೈತರಿಗೆ ಪ್ರಾಯೋಗಿಕವಾಗಿ ಬಿತ್ತನೆ ಬೀಜಗಳನ್ನು ವಿತರಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ಡಾ|ಸುಬ್ರಮಣ್ಯ ಭಟ್, ನಿರ್ದೇಶಕರಾದ ಅರ್ಜುನ್ ಹೆಗ್ಡೆ, ನಂದನ್ ಹೆಗ್ಡೆ, ಗಣೇಶ್ ಕಾಮತ್, ಡೆಪ್ಯೂಟಿ ಜನರಲ್ ಮ್ಯಾನೇಜರ್ ನಂದನ್ ಹೆಗ್ಡೆ ಇದ್ದರು.
ಬಾಕ್ಸ್:
‘ರೈತರಿಗೆ ಉಚಿತ ಸೋಯಾಬೀನ್ ಬಿತ್ತನೆ ಬೀಜ ವಿತರಣೆ ಸಮಾರಂಭ ಜೂ.೨೬ರ ಭಾನುವಾರ ನಗರದ ಕೆ.ಎಂ.ರಸ್ತೆಯ ಕನಕಭವನದಲ್ಲಿ ನಡೆಯಲಿದೆ. ಬಿಜೆಪಿ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಡೂರು ಶಾಸಕ ಬೆಳ್ಳಿ ಪ್ರಕಾಶ್, ಜಿಲ್ಲಾಧಿಕಾರಿ ಕೆ.ಎನ್.ರಮೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಚ್.ಅಕ್ಷಯ್, ಜಿಲ್ಲಾ ಪಂಚಾಯತ್ ಸಿಇಓ ಜಿ.ಪ್ರಭು, ಕೃಷಿಇಲಾಖೆ ಜಂಟಿ ನಿರ್ದೇಶಕ ತಿರುಮಲೇಶ್ ಪಾಲ್ಗೊಳ್ಳಲಿದ್ದಾರೆ. ೧ ಸಾವಿರದಿಂದ ೨ ಸಾವಿರ ರೈತರು ಭಾಗವಹಿಸಲಿದ್ದು ಪ್ರತೀ ರೈತರಿಗೆ ೩೦ ಕೆ.ಜಿ ಸೋಯಾಬೀನ್ ಬಿತ್ತನೆ ಬೀಜ ವಿತರಿಸಲಾ ಗುತ್ತದೆ.’
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g