ಎಟಿಎಂ ಕಾರ್ಡ್ ಬದಲಾಯಿಸಿ ವಂಚಿಸುತ್ತಿದ್ದ ಆರೋಪಿ ಬಂಧನ
1 min readಚಿಕ್ಕಮಗಳೂರು: ಎಂಟಿಎಂನಿಂದ ಹಣ ತೆಗೆಯಲು ಸಹಾಯ ಮಾಡುವ ನೆಪದಲ್ಲಿ ಎಟಿಎಂ ಕಾರ್ಡ್ ಬದಲಾಯಿಸಿ ವಂಚಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಚಿಕ್ಕಮಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.ತಮಿಳುನಾಡು ರಾಜ್ಯದ ತೇನಿ ಜಿಲ್ಲೆಯ ತಂಬಿರಜು ಬಂಧಿತ ಆರೋಪಿ, ಇತ್ತೀಚೆಗೆ ಮೂಡಿ ಗೆರೆ ಪಟ್ಟಣದ ಕಾಫಿಬೆಳೆಗಾರ ಉದಯಕುಮಾರ್ ಎಂಬುವರು ಕರ್ನಾಟಕ ಎಟಿಎಂನಲ್ಲಿ ಹಣ ಡ್ರಾ ಮಾಡಿಕೊಡುವ ನೆಪದಲ್ಲಿ ಆರೋಪಿ ತಂಬಿರಜು ಎಟಿಎಂ ಕಾರ್ಡ್ನ್ನು ಬದಲಾ ಯಿಸಿ ವಂಚಿಸಿದ್ದ.
ಚಿಕ್ಕಮಗಳೂರು ನಗರದಲ್ಲಿ 25ಸಾವಿರ ರೂ. ಡ್ರಾ ಮಾಡಿ ಬಳಿಕ ಜ್ಯೂವೆಲರಿ ಶಾಪ್ ವೊಂದರಲ್ಲಿ 75ಸಾವಿರ ರೂ. ಸ್ವೈಪ್ ಮಾಡಿ ಚಿನ್ನ ಖರೀದಿಸಿದ್ದ ಈ ಸಂಬಂಧ ಉದ ಯಕುಮಾರ್ ಅವರು ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ವಂಚನೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ ಆರೋಪಿ ಬಂಧ ನಕ್ಕಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಚ್.ಅಕ್ಷಯ್ ಹಾಗೂ ಉಪ ಅಧೀಕ್ಷಕರ ಮಾರ್ಗದರ್ಶನದಲ್ಲಿ ಮೂಡಿಗೆರೆ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಆದರ್ಶ, ಗೋಣಿಬೀಡು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಧನಂಜಯ್ ಸಿಬ್ಬಂದಿ ಗಿರೀಶ್, ಲೋಹಿತ್, ವಸಂತಕುಮಾರ್, ಲೋಕೇಶ್, ಸುನೀಲ್, ಪ್ರದೀಪ್, ಉಮೇಶ್ ಒಳಗೊಂಡ ತಂಡವನ್ನು ರಚಿಸಲಾಗಿತ್ತು.
ತಕ್ಷಣ ಕಾರ್ಯಾಪ್ರವೃತ್ತವಾದ ಈ ತಂಡ ಆರೋಪಿ ಬಂಧನಕ್ಕೆ ಬಲೆ ಬೀಸಿದ್ದು, ಮಡಕೇರಿ ಯಲ್ಲಿ ಆರೋಪಿ ತಂಬಿರಜು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಹೆಚ್ಚಿನ ವಿಚಾರಣೆಗೆ ಆರೋಪಿಯನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದಾಗ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ತರೀಕೆರೆ, ಮಂಡ್ಯ ಜಿಲ್ಲೆಯ ಮಳವಳ್ಳಿ, ಕೆ.ಆರ್.ಪೇಟೆ, ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರಿ ಹಾಗೂ ಬೆಂಗಳೂರಿನಲ್ಲಿ ಎಟಿಎಂನಲ್ಲಿ ಹಣ ಡ್ರಾ ಮಾಡಲು ಸಹಾ ಯ ಮಾಡುವ ನೆಪದಲ್ಲಿ ಎಟಿಎಂ ಕಾರ್ಡ್ ಬದಲಾಯಿಸಿ ಮೋಸ ಮಾಡಿರುವ ಕೃತ್ಯ ಬೆಳಕಿಗೆ ಬಂದಿದೆ.
ಎಟಿಎಂ ಕಾರ್ಡ್ ಬದಲಾಯಿಸಿ ಹಣ ಡ್ರಾ ಮಾಡಿಕೊಳ್ಳುತ್ತಿದ್ದ ಈತ ನಂತರ ಜ್ಯೂವೆಲೆರಿ ಶಾಪ್ಗಳಲ್ಲಿ ತೆರಳಿ ಕಾರ್ಡ್ ಸ್ವೈಪ್ ಮಾಡಿ ಚಿನ್ನವನ್ನು ಖರೀದಿಸುತ್ತಿದ್ದನೆಂಬುದು ತನಿಖೆ ವೇಳೆ ತಿಳಿದು ಬಂದಿದೆ. ಈತನ ಮೇಲೆ ತಮಿಳುನಾಡಿನಲ್ಲಿ 11ಪ್ರಕರಣಗಳು ದಾಖಲಾಗಿದ್ದು, ವಿಚಾರಣೆ ಹಂತದಲ್ಲಿದೆ. ಬಂಧಿತ ಆರೋಪಿಯಿಂದ 70ವಿವಿಧ ಬ್ಯಾಂಕ್ಗಳ ಎಟಿಎಂ ಕಾರ್ಡ್, 60ಗ್ರಾಂ. ಚಿನ್ನ, 35ಸಾವಿರ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ 7 ಪ್ರಕರಣಗಳು ದಾಖಲಾಗಿದ್ದು ತನಿಖೆ ಮುಂದೂವರೆಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಚ್.ಅಕ್ಷಯ್ ತಿಳಿಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g