ಜೂ. 26 ರಂದು ಉಚಿತ ಆರೋಗ್ಯ ಶಿಬಿರ
1 min readಚಿಕ್ಕಮಗಳೂರು: ತಾಲ್ಲೂಕಿನ ಕಳಸಾಪುರ ವಿನಾಯಕ ಪ್ರೌಢಶಾಲೆ ಆವರಣದಲ್ಲಿ ಜೂ. 26 ರಂದು ಉಚಿತ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಮುಖಂಡ ಬಿ.ಎಂ.ತಿಮ್ಮಶೆಟ್ಟಿ ತಿಳಿಸಿದರು.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಶ್ವರಹಳ್ಳಿ, ಕಳಸಾಪುರ ಪಂಚಾ ಯತ್ ವ್ಯಾಪ್ತಿಯ 13 ಗ್ರಾಮಗಳ ಪ್ರತಿ ಮನೆಗೆಳಿಗೆ ತೆರಳಿ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಗಿದೆ ಎಂದು ಹೇಳಿದರು.
2 ಸಾವಿರ ಗ್ರಾಮಸ್ಥರು ಉಚಿತ ಆರೋಗ್ಯ ಶಿಬಿರದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಬೆಂಗ ಳೂರು ಸೇರಿದಂತೆ ಇತರೆಡೆಗಳಿಂದ 38 ತಜ್ಞ ವೈದ್ಯರು ಮತ್ತು 10 ಆರೋಗ್ಯ ಸಿಬ್ಬಂದಿಗಳು ಪಾಲ್ಗೊಳ್ಳುವರು ತಪಾಸಣೆ ಬಳಿಕ ಉಚಿತ ಔಷಧಿ ಮತ್ತು ಕನ್ನಡಕಗಳನ್ನು ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.
ಶಿಬಿರವನ್ನು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಉದ್ಘಾಟಿಸುವರು. ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್ಕುಮಾರ್, ಜಿಲ್ಲಾ ಉಪಾಧ್ಯಕ್ಷ ಡಿ.ಕೆ.ಚಂದ್ರೇಗೌಡ ಭಾಗವಹಿಸಲಿದ್ದಾರೆ. ಇದು 48ನೇ ಶಿಬಿರವಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಸಿ.ಕೆ.ಮೂರ್ತಿ, ನಗರಸಭೆ ಸದಸ್ಯ ಕುಮಾರಗೌಡ, ಆನಂದ ಇದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g