ಕೇಂದ್ರಸರ್ಕಾರ-ಸರ್ವೋಚ್ಚ ನ್ಯಾಯಾಲಯಕ್ಕೆ ಪತ್ರ ಶಾಸಕ ಎಂ.ಪಿ.ಕುಮಾರಸ್ವಾಮಿ
1 min readಚಿಕ್ಕಮಗಳೂರು: ರಾಯಚೂರಿನಲ್ಲಿ ನ್ಯಾಯಧೀಶರೊಬ್ಬರು ಗಣರಾಜ್ಯೋತ್ಸವ ಸಮಾರಂಭದಲ್ಲಿ ಅಂಬೇಡ್ಕರ್ ಭಾವಚಿತ್ರವನ್ನು ತೆರವುಗೊಳಿಸುವ ಮೂಲಕ ಸಂವಿಧಾನ ಶಿಲ್ಪಿಗೆ ಅಪಮಾನಮಾಡಿದ್ದು,ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕೇಂದ್ರಕಾನೂನು ಸಚಿವರು ಹಾಗೂ ಸರ್ವೋಚ್ಚ ನ್ಯಾಯಾಲಯದ ಮುಖ್ಯನ್ಯಾಯಾಧೀಶರಿಗೆ ಪತ್ರ ಬರೆಯಲಾಗುವುದು ಎಂದು ಪರಿಶಿಷ್ಟಜಾತಿ ಮತ್ತು ಪಂಗಡದ ಹಿತರಕ್ಷಣಾ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಎಂ.ಪಿ.ಕುಮಾರಸ್ವಾಮಿ ತಿಳಿಸಿದರು.
ನಗರದಲ್ಲಿ ನಡೆದ ಪ್ರತಿಭಟನೆಗೆ ನೈತಿಕ ಬೆಂಬಲ ವ್ಯಕ್ತಪಡಿಸಲು ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿ,ಅಂಬೇಡ್ಕರ್ ಪ್ರಜಾಪ್ರಭುತ್ವದ ಮೂಲ ಪುರುಷ ಮತ್ತು ಕತೃ. ಶೋಷಿತ ಸಮುದಾಯ ಅವರ ಬಗ್ಗೆ ಅಪಾರ ಗೌರವನ್ನು ಹೊಂದಿದಂತೆಯೇ ಕಾನೂನಿನ ಬಗ್ಗೆ ಗೌರವ ಹೊಂದಿದ್ದಾರೆ ಆದರೆ, ನ್ಯಾಯಾಧೀಶರೊಬ್ಬರ ನಡವಳಿಕೆಯಿಂದ ಶೋಷಿತ ವರ್ಗ ನ್ಯಾಯಾಲಯದ ಮೇಲೆ ಇಟ್ಟಿದ್ದ ನಂಬಿಕೆಯನ್ನು ಕಳೆದುಕೊಳ್ಳುವಂತಾಗಿದೆ ಎಂದು ಅಭಿಪ್ರಾಯಿಸಿದರು
ಪ್ರಜಾಪ್ರಭುತ್ವ ಗಟ್ಟಿಯಾಗಿರಲು ಅಂಬೇಡ್ಕರ್ ಬರೆದಿರುವ ಸಂವಿಧಾನ ಕಾರಣವಾಗಿದೆ. ಅಂತಹ ವ್ಯಕ್ತಿಯ ಭಾವಚಿತ್ರಕ್ಕೆ ಅಪಮಾನಮಾಡಿರುವುದು ನ್ಯಾಯಾಲಯದ ಬಗ್ಗೆ ವಿಶ್ವಾಸ ಹೋಗುವಂತಾಗಿದೆ ಎಂದು ಹೇಳಿದರು.
ಆ ಸ್ಥಾನಕ್ಕೆ ನ್ಯಾಯಾಧೀಶರು ಯೋಗ್ಯರಲ್ಲ ಎನ್ನುವಂತಾಗಿದ್ದು, ಅವರನ್ನು ಅನುಮಾನದಿಂದ ಜನರು ನೋಡುವಂತಾಗಿದೆ. ಅವರ ವಿರುದ್ಧ ಕರ್ನಾಟಕದ ರಾಜ್ಯಪಾಲರಿಗೆ ಈಗಾಗಲೇ ದೂರು ನೀಡಲಾಗಿದೆ. ಕಾನೂನಿನ ಇತಿಮಿತಿಯೊಳಗೆ ಕ್ರಮ ಆಗೇ ಆಗುತ್ತದೆ ಎಂಬ ನಂಬಿಕೆ ಇದೆ ಎಂದರು.
ಚಿಕ್ಕಮಗಳೂರು: ರಾಯಚೂರಿನಲ್ಲಿ ನ್ಯಾಯಧೀಶರೊಬ್ಬರು ಗಣರಾಜ್ಯೋತ್ಸವ ಸಮಾರಂಭದಲ್ಲಿ ಅಂಬೇಡ್ಕರ್ ಭಾವಚಿತ್ರವನ್ನು ತೆರವುಗೊಳಿಸುವ ಮೂಲಕ ಸಂವಿಧಾನ ಶಿಲ್ಪಿಗೆ ಅಪಮಾನಮಾಡಿದ್ದು,ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕೇಂದ್ರಕಾನೂನು ಸಚಿವರು ಹಾಗೂ ಸರ್ವೋಚ್ಚ ನ್ಯಾಯಾಲಯದ ಮುಖ್ಯನ್ಯಾಯಾಧೀಶರಿಗೆ ಪತ್ರ ಬರೆಯಲಾಗುವುದು ಎಂದು ಪರಿಶಿಷ್ಟಜಾತಿ ಮತ್ತು ಪಂಗಡದ ಹಿತರಕ್ಷಣಾ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಎಂ.ಪಿ.ಕುಮಾರಸ್ವಾಮಿ ತಿಳಿಸಿದರು.
ನಗರದಲ್ಲಿ ನಡೆದ ಪ್ರತಿಭಟನೆಗೆ ನೈತಿಕ ಬೆಂಬಲ ವ್ಯಕ್ತಪಡಿಸಲು ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿ,ಅಂಬೇಡ್ಕರ್ ಪ್ರಜಾಪ್ರಭುತ್ವದ ಮೂಲ ಪುರುಷ ಮತ್ತು ಕತೃ. ಶೋಷಿತ ಸಮುದಾಯ ಅವರ ಬಗ್ಗೆ ಅಪಾರ ಗೌರವನ್ನು ಹೊಂದಿದಂತೆಯೇ ಕಾನೂನಿನ ಬಗ್ಗೆ ಗೌರವ ಹೊಂದಿದ್ದಾರೆ ಆದರೆ, ನ್ಯಾಯಾಧೀಶರೊಬ್ಬರ ನಡವಳಿಕೆಯಿಂದ ಶೋಷಿತ ವರ್ಗ ನ್ಯಾಯಾಲಯದ ಮೇಲೆ ಇಟ್ಟಿದ್ದ ನಂಬಿಕೆಯನ್ನು ಕಳೆದುಕೊಳ್ಳುವಂತಾಗಿದೆ ಎಂದು ಅಭಿಪ್ರಾಯಿಸಿದರು.
ಪ್ರಜಾಪ್ರಭುತ್ವ ಗಟ್ಟಿಯಾಗಿರಲು ಅಂಬೇಡ್ಕರ್ ಬರೆದಿರುವ ಸಂವಿಧಾನ ಕಾರಣವಾಗಿದೆ. ಅಂತಹ ವ್ಯಕ್ತಿಯ ಭಾವಚಿತ್ರಕ್ಕೆ ಅಪಮಾನಮಾಡಿರುವುದು ನ್ಯಾಯಾಲಯದ ಬಗ್ಗೆ ವಿಶ್ವಾಸ ಹೋಗುವಂತಾಗಿದೆ ಎಂದು ಹೇಳಿದರು.
ಆ ಸ್ಥಾನಕ್ಕೆ ನ್ಯಾಯಾಧೀಶರು ಯೋಗ್ಯರಲ್ಲ ಎನ್ನುವಂತಾಗಿದ್ದು, ಅವರನ್ನು ಅನುಮಾನದಿಂದ ಜನರು ನೋಡುವಂತಾಗಿದೆ. ಅವರ ವಿರುದ್ಧ ಕರ್ನಾಟಕದ ರಾಜ್ಯಪಾಲರಿಗೆ ಈಗಾಗಲೇ ದೂರು ನೀಡಲಾಗಿದೆ. ಕಾನೂನಿನ ಇತಿಮಿತಿಯೊಳಗೆ ಕ್ರಮ ಆಗೇ ಆಗುತ್ತದೆ ಎಂಬ ನಂಬಿಕೆ ಇದೆ ಎಂದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g