ಮಲೆನಾಡಲ್ಲಿ ಮುಂದುವರೆದ ಮಳೆ, ಐದು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ
1 min read
ಚಿಕ್ಕಮಗಳೂರು. ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂಜಾಗೃತ ಕ್ರಮವಾಗಿ ಶೃಂಗೇರಿ, ಎನ್.ಆರ್.ಪುರ, ಮೂಡಿಗೆರೆ, ಕಳಸ ಹಾಗೂ ಕೊಪ್ಪ ತಾಲೂಕಿನ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಚಿಕ್ಕಮಗಳೂರಿನ ತಾಲೂಕಿನ ಮಲೆನಾಡು ಭಾಗಕ್ಕೂ ರಜೆ ಘೋಷಿಸಲಾಗಿದೆ. ತಾಲೂಕಿನ ಲಕ್ಯಾ ಹಾಗೂ ಅಂಬಳೆ ಹೋಬಳಿಯನ್ನ ಹೊರತುಪಡಿಸಿ ಉಳಿದ ಭಾಗಕ್ಕೆ ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆ ಇಂದು ಮುಂದುವರೆದಿದ್ದು ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆಯಿಂದ ಕಳಸ ತಾಲೂಕಿನ ಹೆಮ್ಮಕ್ಕಿ ಗ್ರಾಮದಲ್ಲಿ ಮನೆ ಮೇಲೆ ಮರ ಬಿದ್ದು ಮನೆಯಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಳೆ ಶಬ್ಧ ಕೇಳಿ ಎದ್ದಾಗ ಮರ ಮುರಿಯುವ ಶಬ್ಧ ಕೇಳಿ ಹೊರಬಂದು ದಂಪತಿ ಹಾಗೂ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೊಪ್ಪ ತಾಲೂಕಿನ ಜಯಪುರ ಸಮೀಪದ ಬಸರೀಕಟ್ಟೆ ಮಾರ್ಗದಲ್ಲೂ ರಸ್ತೆ ಕುಸಿದಿದ್ದು ಜನರ ಓಡಾಟ ಕಡಿತಗೊಂಡಿದೆ. ಶೃಂಗೇರಿಯಲ್ಲಿ ವರುಣನ ಅಬ್ಬರಕ್ಕೆ ಶಾರದಾಂಭೆ ದೇವಸ್ಥಾನದ ಗಾಂಧಿ ಮೈದಾನ ಜಲಾವೃತಗೊಂಡಿತ್ತು. ಇನ್ನೂ ಕೆರೆಕೆಟ್ಟೆ ಹಾಗೂ ಕುದುರೆಮುಖ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು ತುಂಗಾ-ಭದ್ರಾ ನದಿಗಳು ಮೈದುಂಬಿ ಹರಿಯುತ್ತಿವೆ. ತುಂಗೆಯ ಅಬ್ಬರಕ್ಕೆ ಶೃಂಗೇರಿ ಶಾರದಾಂಭೆ ದೇಗುಲದ ಪಾರ್ಕಿಂಗ್ ಜಾಗ ಸಂಪೂರ್ಣ ಮುಳುಗಡೆಯಾಗಿತ್ತು. ಜಿಲ್ಲೆಯಲ್ಲಿ ಮಳೆ ಅಬ್ಬರ ಕಡಿಮೆಯಾಗದ ಹಿನ್ನೆಲೆ ಜಿಲ್ಲಾಡಳಿತ ಚಿಕ್ಕಮಗಳೂರು ತಾಲೂಕಿನ ಮಲೆನಾಡು ಭಾಗದ ಐದು ತಾಲೂಕುಗಳಿಗೆ ನಾಲ್ಕು ದಿನ ರಜೆ ನೀಡಿದೆ
“ಮಲೆನಾಡ ಮಳೆಯಲ್ಲಿ ಸಿಕ್ಕಿ 15 ನಿಮಿಷ ನಿಂತಲ್ಲೇ ನಿಂತ ಡಿಸಿ-ಎಸ್ಪಿ”
ಜಿಲ್ಲೆಯ ಮಳೆ ಅಬ್ಬರಕ್ಕೆ ಅಬ್ಬರಕ್ಕೆ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಅವರು ಕೂಡ ಮಳೆಯಲ್ಲಿ ಸಿಲುಕು ಬಳಲಿದ್ದಾರೆ. ತಾಲೂಕಿನ ಹೊಸಪೇಟೆ ಹಳ್ಳದಲ್ಲಿ ಬಾಲಕಿ ಕೊಚ್ಚಿ ಹೋದ ಸ್ಥಳಕ್ಕೆ ಭೇಟಿ ನೀಡಲು ಹೋಗುವಾಗ ಮಾರ್ಗ ಮಧ್ಯೆ ಮಳೆ-ಗಾಳಿಗೆ ವಿದ್ಯುತ್ ಕಂಬ ರಸ್ತೆಗೆ ಉರುಳಿ ಬಿದ್ದು ಡಿಸಿ ಹಾಗೂ ಎಸ್ಪಿ ಮುಂದೆ ಬರಲಾರದೆ ಸ್ಥಳದಲ್ಲೇ ಜಾಮ್ ಆಗಿದ್ದರು. ಸುಮಾರು 15 ನಿಮಿಷಗಳ ಕಾಲ ನಿಂತಲ್ಲೇ ನಿಂತು ಬಳಿಕ ಬಾಲಕಿ ಹಳ್ಳದಲ್ಲಿ ಕೊಚ್ಚಿ ಹೋದ ಸ್ಥಳಕ್ಕೆ ಭೇಟಿ ನೀಡಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g