ಸ್ವಸಾಹಯ ಸಂಘಗಳಿಗೆ ನಗರಸಭೆಯಿಂದ ನೆರವು: ವರಸಿದ್ಧಿ ವೇಣುಗೋಪಾಲ್
1 min readಚಿಕ್ಕಮಗಳೂರು: ಮಹಿಳಾ ಸ್ವಸಹಾಯ ಸಂಘಗಳಿಂದ ಕೈಗೊಳ್ಳುವ ಉತ್ಪನ್ನಗಳಿಗೆ ಆರ್ಥಿಕ ನೆರವು ನೀಡಲು ನಗರಸಭೆ ಮುಂದಾಗಿದೆ ಎಂದು ನಗರಸಭೆ ಅಧ್ಯಕ್ಷ ವರಸಿದ್ದಿ ವೇಣು ಗೋಪಾಲ್ ತಿಳಿಸಿದರು.ಗುರುವಾರ ನಗರದ ಖಾಸಗಿ ಹೋಟೆಲ್ನಲ್ಲಿ ನಗರಸಭೆ ಆಯೋಜಿಸಿದ್ದ ದೀನ್ ದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಎಸ್ಎಂಐಡಿ ಉಪಘಟಕ ಪ್ರದೇಶ ಮಟ್ಟದ ಒಕ್ಕೂಟ ಸದಸ್ಯರುಗಳಿಗೆ ಸಾಮಥ್ಯ ಅಭಿವೃದ್ಧಿ 2 ದಿನಗಳ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.
ಮಹಿಳೆಯರು ಸ್ವಾಲಭಿಗಳನ್ನಾಗಿಸುವ ದೃಷ್ಟಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ಕೈಗೊಳ್ಳುತ್ತಿದೆ. ಅದರಂತೆ ನಗರದಲ್ಲಿ ನೂರು ಸ್ವಸಹಾಯ ಸಂಘ ರಚನೆ ಮಾಡುವಂತೆ ಸರ್ಕಾರದ ಆದೇಶದ ಮೇರೆಗೆ ಈ ತರಬೇತಿ ಕಾರ್ಯಾಗಾರವನ್ನು ಹಮ್ಮಿ ಕೊಳ್ಳಲಾಗಿದೆ ಎಂದರು.
ಸ್ವಸಹಾಯದ ಸಂಘದ ಮೂಲಕ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡಿದಲ್ಲಿ ಹೆಚ್ಚಿನ ಲಾಭಗಳಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಬ್ಯಾಂಕ್ಗಳಲ್ಲಿ ಸಾಲಸೌಲಭ್ಯವನ್ನು ಕೊಡಿಸು ವಂತಹ ಕೆಲಸವನ್ನು ನಗರಸಭೆ ಮಾಡಲಿದೆ ಎಂದು ತಿಳಿಸಿದರು.
ನಗರಸಭೆ ಪೌರಾಯುಕ್ತ ಬಸವರಾಜ್ ಮಾತನಾಡಿ, ಹಿಂದೇ ಪುರುಷ ಪ್ರಧಾನ ಕುಟುಂಬ ವಾಗಿತ್ತು. ಕಾಲ ಬದಲಾದಂತೆ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲು ದುಡಿಯುತ್ತಿದ್ದು ಕುಟುಂಬ ಕ್ಕೆ ನೆರವಾಗುತ್ತಿದ್ದಾರೆ ಎಂದರು.
ನಗರದಲ್ಲಿ ನೂರು ಸ್ವಸಹಾಯ ಸಂಘವನ್ನು ರಚಿಸುವ ಉದ್ದೇಶವನ್ನು ಹೊಂದಲಾಗಿದೆ. ಸ್ವಸಹಾಯ ಸಂಘಗಳಿಗೆ 10 ಸಾವಿರ ರೂ. ನಿಂದ 15ರಿಂದ 20 ಲಕ್ಷದ ವರೆಗೂ ಬ್ಯಾಂಕ್ ಸಾಲ ದೊರೆಯಲಿದೆ. ಈ ನಿಟ್ಟಿನಲ್ಲಿ ಚಿಕ್ಕಮಗಳೂರು ನಗರವನ್ನು ರಾಜ್ಯದಲ್ಲಿ ಮಾದರಿ ಯನ್ನಾಗಿ ಮಾಡಲಾಗುವುದು ಎಂದರು.
ಸ್ವಸಹಾಯ ಸಂಘದ ರಚನೆಗೆ ತಂಡಗಳನ್ನು ರಚಿಸಲಾಗಿದೆ. ಸ್ವಸಹಾಯ ಸಂಘಗಳಲ್ಲಿ ಮಹಿಳೆಯರು ಸಕ್ರೀಯರಾಗುವ ಮೂಲಕ ಆರ್ಥಿಕವಾಗಿ ಸದೃಢರಾಗಬೇಕು ಎಂದು ತಿಳಿಸಿದ ಅವರು, ನಗರದ ಸ್ವಚ್ಛತೆಗೆ ನಗರಸಭೆಯೊಂದಿಗೆ ಪ್ರತಿಯೊಬ್ಬರು ಕೈಜೋಡಿಸ ಬೇಕೆಂದು ಮನವಿ ಮಾಡಿದರು.
ಕಲಾವತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಪ್ರಕಾಶ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ.ಆನಂದ್ ಸೇರಿದಂತೆ ಅನೇಕರು ಇದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g