ವಿಕ್ರಾಂತ್ ರೋಣ ಸಿನಿಮಾ ಪ್ರದರ್ಶನದ ವೇಳೆ ಗಲಾಟೆ, ಲಾಂಗ್ ನಿಂದ ಹಲ್ಲೆ
1 min read
ಚಿಕ್ಕಮಗಳೂರು : ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ಪ್ರದರ್ಶನ ವೇಳೆ ಕ್ಷುಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದು ಲಾಂಗ್-ಮಚ್ಚುಗಳಿಂದ ಹೊಡೆದಾಡಿರುವ ಘಟನೆ ನಗರದ ಮಿಲನ್ ಥಿಯೇಟರ್ನಲ್ಲಿ ನಡೆದಿದೆ. ಮಿಲನ್ ಥಿಯೇಟರ್ನಲ್ಲಿ ಮ್ಯಾಟ್ನಿ ಶೋ ಆರಂಭವಾಗುತ್ತಿದ್ದಂತೆ ಥಿಯೇಟರ್ ಒಳಗೆ ಬಾಗಿಲ ಪಕ್ಕದ ಸೀಟ್ನಲ್ಲಿ ಕೂತಿದ್ದ ಒಂದು ಯುವಕರ ಗುಂಪು ಮೇಲಿಂದ ಮೇಲೆ ಹೊರಗಡೆ ಹೋಗಿ ಬರುತ್ತಿದ್ದರು. ಈ ವೇಳೆ ಮತ್ತೊಂದು ಗುಂಪಿನ ಯುವಕರು ಎಷ್ಟು ಸಲ ಹೊರಗೆ ಬರ್ತಿರೋ ಎಂದು ಹೇಳಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ.
ಈ ವೇಳೆ ಲಾಂಗ್-ಮಚ್ಚುಗಳಿಂದ ಹಲ್ಲೆ ಮಾಡಿದ್ದಾರೆ. ಥಿಯೇಟರ್ ಒಳಗೆ ಆರಂಭವಾದ ಜಗಳ ಟಾಕೀಸ್ನ ಹೊರಾಂಗಣದಲ್ಲೂ ಮುಂದುವರೆದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ವೇಳೆ, ಕೆಳಕ್ಕೆ ಬಿದ್ದರೂ ಬಿಡದೆ ಹಲ್ಲೆ ಮಾಡಿ ಲಾಂಗ್ ಬೀಸಿದ್ದಾರೆ. ಈ ವೇಳೆ, ಭರತ್ ಎಂಬ ಯುವಕನಿಗೆ ತೀವ್ರ ಗಾಯವಾಗಿದ್ದು ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ರವಾನಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಭರತ್ ಕಡೆ ಹುಡುಗರು ಕೂಡ ಆಸ್ಪತ್ರೆ ಮುಂಭಾಗ ಸೇರಿ ಆಕ್ರೋಶ ಹೊರಹಾಕಿದ್ದಾರೆ. ಆಸ್ಪತ್ರೆ ಮುಂಭಾಗ ಯುವಕರ ಗುಂಪನ್ನ ಕಂಡ ಪೊಲೀಸರು ಲಾಠಿ ಬೀಸಲು ಬೆದರಿಸಿ ಎಲ್ಲರನ್ನೂ ಚದುರಿಸಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೆ ಹಳೇ ವೈಷಮ್ಯವೇ ಕಾರಣ ಎಂಬ ಮಾತುಗಳು ಕೇಳಿ ಬಂದಿವೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g