May 15, 2024

MALNAD TV

HEART OF COFFEE CITY

ಅಭಿಮಾನಿಗಳಿಂದ ಅದ್ದೂರಿಯಾಗಿ ಸಿದ್ದು ಹುಟ್ಟು ಹಬ್ಬ ಆಚರಣೆ

1 min read

 

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹುಟ್ಟುಹಬ್ಬದ ಅಂಗವಾಗಿ ಸಿದ್ದು ಅಭಿಮಾನಿಗಳು 75 ಕೆ.ಜಿ.ತೂಕದ ಕೇಕ್ ಕತ್ತರಿಸಿ ಸಿದ್ದರಾಮಯ್ಯನವರಿಗೆ ಶುಭ ಕೋರಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ನಡೆದಿದೆ. ತರೀಕೆರೆ ಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ ಗೋಪಿಕುಮಾರ್ ಇಂದು ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಬರುವ ತರೀಕೆರೆ ಪಟ್ಟಣದ ಗಾಂಧಿ ವೃತ್ತದಲ್ಲಿ 75 ಕೆ.ಜಿ. ತೂಕದ ಕೇಕ್ ಕತ್ತರಿಸಿ ಸಿದ್ದುಗೆ ಶುಭಕೋರಿದ್ದಾರೆ. ಇದೇ ವೇಳೆ, ಸಿದ್ದು ಹುಟ್ಟುಹಬ್ಬದ ಅಂಗವಾಗಿ ತರೀಕೆರೆ ಪಟ್ಟಣದ ಪಟ್ಟಣ ಪಂಚಾಯಿತಿಯ 23 ಜನ ಸದಸ್ಯರಿಗೂ ಪಕ್ಷಾತೀತವಾಗಿ ಸನ್ಮಾನಿಸಿದ್ದಾರೆ. ಜೊತೆಗೆ ನಾಳೆ ಸಿದ್ದರಾಮಯ್ಯನವರ ಹುಟ್ಟುಹಬ್ಬದ ಅಂಗವಾಗಿ ದಾವಣಗೆರೆಯಲ್ಲಿ ನಡೆಯುವ ಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೂ ಗೋಪಿಕುಮಾರ್ ಸಾವಿರಕ್ಕೂ ಅಧಿಕ ಜನರನ್ನ ದಾವಣಗೆರೆಗೆ ಕರೆದೊಯ್ಯುತ್ತಿದ್ದಾರೆ. ಈಗಾಗಲೇ ಎರಡು ಬಸ್ ಹಾಗೂ ಎರಡು ಟಿಟಿ ವಾಹನಗಳಲ್ಲಿ ಸಿದ್ದು ಅಭಿಮಾನಿಗಳು ತುಂಬಿದ್ದು ಮತ್ತಷ್ಟು ಜನ ತಮ್ಮ ಸ್ವಂತ ವಾಹನದಲ್ಲಿ ದಾವಣಗೆರೆಗೆ ತೆರಳಲಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಮುಖಂಡರಾದ ಉಮ್ಮರ್ ಫಾರುಕ್, ಮಿರ್ಜಾ ಇಸ್ಮಾಯಿಲ್, ಧರ್ಮರಾಜ್, ಪ್ರಕಾಶ್ ವರ್ಮಾ ಸೇರಿದಂತೆ 250ಕ್ಕೂ ಅಧಿಕ ಜನ ರಸ್ತೆ ಮಧ್ಯೆ ಜಮಾಯಿಸಿ ಸಿದ್ದು ಹುಟ್ಟುಹಬ್ಬ ಆಚರಿಸಿದ್ದಾರೆ. ಇದೇ ವೇಳೆ, ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವೇ ಎಂದು ಘೋಷಣೆ ಕೂಗಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!