May 20, 2024

MALNAD TV

HEART OF COFFEE CITY

ಕಾಫಿನಾಡಲ್ಲಿ ಮಳೆ ಅಬ್ಬರದ ಸೂಚನೆ, ಜಿಲ್ಲಾಡಳಿತದಿಂದ ಹೈ ಅಲರ್ಟ್

1 min read

ಕಾಫಿನಾಡಲ್ಲಿ ಕಳೆದ ಹದಿನೈದು ದಿನಗಳಿಂದ ಸಂಪೂರ್ಣ ಬಿಡುವು ನೀಡಿದ್ದ ವರುಣದೇವನ ಅಬ್ಬರ ಮತ್ತೆ ಮುಂದುವರೆಯುವ ಸಾಧ್ಯತೆ ಇದ್ದು, ಜಿಲ್ಲಾಡಳಿತ ಎಚ್ಚರಿಕೆಯಿಂದಿರಲು ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆಯ ಅನ್ವಯ ಚಿಕ್ಕಮಗಳೂರು ಜಿಲ್ಲಾಡಳಿತ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದ್ದು ಜನ ಎಚ್ಚರಿಕೆಯಿಂದಿರಲು ಸೂಚನೆ ನೀಡಿದೆ. ಚಿಕ್ಕಮಗಳೂರು ಅಪರ ಜಿಲ್ಲಾಧಿಕಾರಿ ರೂಪ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು ಪ್ರಕೃತಿ ವಿಕೋಪವನ್ನ ಎದುರಿಸಿಲು ಸೂಕ್ತಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ. 

ಚಿಕ್ಕಮಗಳೂರು ಜಿಲ್ಲಾದ್ಯಂತ ಆಗಸ್ಟ್ ಐದರಿಂದ ಏಳರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದಿನಾಂಕ ಐದು ಮತ್ತು ಏಳರಂದು ಆರೆಂಜ್ ಅಲರ್ಟ್ ಘೋಷಿಸಿದ್ದು, ದಿನಾಂಕ ಆರನೇ ತಾರೀಖು ಶನಿವಾರದಿಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಆರೆಂಜ್ ಅಲರ್ಟ್ ಇರುವ ದಿನಗಳಲ್ಲಿ 115 ರಿಂದ 204 ಮಿ.ಮೀ.ನಷ್ಟು ಮಳೆ ಬೀಳಲಿದೆ ಎಂದು ಎಚ್ಚರಿಕೆ ನೀಡಿದ್ದು, ಶನಿವಾರದ ರೆಡ್ ಅಲರ್ಟ್ ದಿನದಂದು 204 ಮಿ.ಮೀ.ನಷ್ಟು ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹಾಗಾಗಿ, ಪರಿಸ್ಥಿತಿ ನಿಭಾಯಿಸಲು ಸನ್ನದ್ಧವಾಗಿರುವ ಜಿಲ್ಲಾಡಳಿತ ಸಾರ್ವಜನಿಕರು ನದಿ ಅಥವ ತಗ್ಗುಪ್ರದೇಶಗಳಿಗೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಈ ಮೂರು ದಿನಗಳ ಕಾಲ ಮಕ್ಕಳು-ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರದ ಹತ್ತಿರ ಅಥವ ಕೆಳಗೆ ನಿಲ್ಲದೆ ಸುರಕ್ಷಿತ ಸ್ಥಳಗಲ್ಲಿ ನಿಲ್ಲುವಂತೆ ಸೂಚಿಸಿದೆ. ಜೊತೆಗೆ, ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ನಿಯೋಜನೆಗೊಂಡ ನೊಡೆಲ್ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು ಪರಿಸ್ಥಿತಿ ನಿಭಾಯಿಸಲು ತಯಾರಿ ಮಾಡಿಕೊಳ್ಳುವಂತೆಯೂ ನಿರ್ದೇಶನ ನೀಡಿದೆ. ಆದರೆ, ಜಿಲ್ಲೆಯ ಮಲೆನಾಡು ಭಾಗದ ರೈತರು ಹಾಗೂ ಕಾಫಿ ಬೆಳೆಗಾರರು ಮಾತ್ರ ಮಳೆ ಬೇಡವೇ ಬೇಡ ಅಂತಿದ್ದಾರೆ. ಏಕೆಂಂದರೆ, ಜುಲೈ 2ನೇ ವಾರದ ಮಳೆ ನಿರಂತರ ಮಳೆ ಶೇಕಡ 30-40ರಷ್ಟು ಕಾಫಿಯನ್ನ ನಾಶ ಮಾಡಿದ್ದು ಮಲೆನಾಡು ಮಳೆ ಅಂದ್ರೆ ಹೆದರುವಂತಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!