ಎರಡು ತಿಂಗಳ ಹಿಂದೆ ಮಾಡಿದ್ದ ರಸ್ತೆ ರೊಟ್ಟಿಯಂತೆ ಮೇಲೇಳುತ್ತಿದೆ, ಕೈಯಲ್ಲಿ ಟಾರ್ ಹಿಡಿದು ಸ್ಥಳಿಯರ ಆಕ್ರೋಶ
1 min readಚಿಕ್ಕಮಗಳೂರು. ಎರಡು ತಿಂಗಳ ಹಿಂದಷ್ಟೆ ನಿರ್ಮಿಸಿದ್ದ ಡಾಂಬರ್ ರಸ್ತೆ ಕಿತ್ತು ಬರುತ್ತಿದ್ದು ಗ್ರಾಮಸ್ಥರು ಗುತ್ತಿಗೆದಾರ ಮತ್ತು ಇಂಜಿನಿಯರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ತಾಲೂಕಿನ ತಿರುಗುಣ ಗ್ರಾಮದಲ್ಲಿ ನಡೆದಿದೆ. ತಿರುಗಣ ಗ್ರಾಮದಲ್ಲಿ ಎರಡು ತಿಂಗಳ ಹಿಂದಷ್ಟೇ 1 ಕೋಟಿ ರೂ. ವೆಚ್ಚದಲ್ಲಿ ಡಾಂಬರ್ ರಸ್ತೆ ನಿರ್ಮಾಣ ಮಾಡಲಾಗಿತ್ತು. ರಸ್ತೆ ನಿರ್ಮಾಣಕ್ಕೆ ಗ್ರಾಮದ ಕೆಲವರು ಜಮೀನು ಬಿಟ್ಟುಕೊಟ್ಟಿದ್ದರು. ಗುತ್ತಿಗೆದಾರ ಹುಲಿಯಪ್ಪ ಗೌಡ ಎಂಬುವರು ಗುತ್ತಿಗೆ ಪಡೆದು ರಸ್ತೆ ನಿರ್ಮಾಣ ಮಾಡಿದ್ದು ರಸ್ತೆ ಕಾಮಗಾರಿ ಸಂಪೂರ್ಣವಾಗಿ ಕಳಪೆಯಾಗಿದೆ. ರಸ್ತೆ ನಿರ್ಮಾಣವಾಗಿ ಎರಡು ತಿಂಗಳು ಮಾತ್ರ ಕಳೆದಿದ್ದು, ತುಂತುರು ಮಳೆಗೆ ಡಾಂಬರ್ ರಸ್ತೆ ಹೆಂಚಿನ ಮೇಲೆ ರೊಟ್ಟಿ ಏಳುವಂತೆ ಕಿತ್ತು ಬರುತ್ತಿದೆ. ಕಳಪೆ ರಸ್ತೆ ಕಾಮಗಾರಿಯ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು ಗುತ್ತಿಗೆದಾರ ಮತ್ತು ಸಂಬಂಧಪಟ್ಟ ಇಂಜಿನಿಯರ್ಗಳನ್ನ ತರಾಟೆಗೆ ತಗೆದುಕೊಂಡಿದ್ದಾರೆ. ಕಳಪೆ ರಸ್ತೆ ನಿರ್ಮಾಣ ಮಾಡಿರುವ ಗುತ್ತಿಗೆದಾರ ಮತ್ತು ಇಂಜಿನಿಯರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಈ ಬಗ್ಗೆ ಮಾತಾನಾಡಿದ ಗ್ರಾಮಸ್ಥ ಸಂದೀಪ್ ಗ್ರಾಮದಲ್ಲಿ ಎರಡು ತಿಂಗಳ ಹಿಂದೆ ನಿರ್ಮಿಸಿದ್ದ ರಸ್ತೆ ಕಿತ್ತು ಬರುತ್ತಿದೆ. ಯಾವ ರೀತಿ ಕಾಮಗಾರಿ ಮಾಡಿದ್ದಾರೋ ಗೊತ್ತಿಲ್ಲ. ಈ ರಸ್ತೆ ಮಾಡುವ ಬದಲು ಹಾಗೇ ಬಿಟ್ಟಿದ್ದರೆ ಚೆನ್ನಾಗಿರುತ್ತಿತ್ತು ಎಂದು ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿದ್ದಾರೆ. ಕಳಪೆ ಕಾಮಗಾರಿ ಮಾಡಿ ಗುತ್ತಿಗೆದಾರ ಎಸ್ಕೇಫ್ ಆಗಿದ್ದಾರೆ. ಈ ಕೂಡಲೇ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ರಸ್ತೆ ಸರಿಪಡಿಸದಿದ್ದರೇ ನಾವು ಉಗ್ರ ಹೋರಾಟ ಮಾಡುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ಹೊಸ ಡಾಂಬರ್ ರೊಟ್ಟಿಯಂತೆ ಮೇಲೆ ಏಳುತ್ತಿದ್ದು
ಕೆಳಗಡೆ ಇದ್ದ ಹಳೇ ಡಾಂಬರ್ ಕೂಡ ಹಾಗೇ ಇದೆ. ಇದನ್ನ ಕಂಡ ಸ್ಥಳಿಯರು ಅಭಿವೃದ್ಧಿಗಾಗಿ ರಸ್ತೆ ಅಲ್ಲ. ದುಡ್ಡಿಗಾಗಿ ರಸ್ತೆ ನಿರ್ಮಿಸಿದ್ದಾರೆ ಎಂದು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g