ಮಲೆನಾಡಲ್ಲಿ ಮಿತಿ ಮೀರಿದ ಹುಲಿ ಹಾವಳಿ, ವ್ಯಾಘ್ರನ ಸೆರೆಗೆ ಹೆಚ್ಚಿದ ಒತ್ತಡ
1 min read
ಮೇಯಲು ಹೋಗಿದ್ದ ಹಸುವಿನ ಮೇಲೆ ಹುಲಿ ದಾಳಿ ಮಾಡಿದ್ದು, ಹುಲಿ ದಾಳಿಗೆ ಹಸು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾನಳ್ಳಿ ಗ್ರಾಮದಲ್ಲಿ ನಡೆದಿದೆ. ಬಾನಳ್ಳಿ ಗ್ರಾಮದ ಸುಂದರೇಶ್ ಎಂಬುವರ ಹಸು ವ್ಯಾಘ್ಯನ ಬಾಯಿಗೆ ಬಲಿಯಾಗಿದೆ. ಮೂಡಿಗೆರೆ ತಾಲೂಕಿನ ಹಲವೆಡೆ ಇತ್ತೀಚೆಗೆ ಹುಲಿ ದಾಳಿ ಪ್ರಕರಣ ಹೆಚ್ಚಾಗುತ್ತಿದ್ದು ದಿನಕ್ಕೊಂದು ಹಸು ಹುಲಿ ಬಾಯಿಗೆ ತುತ್ತಾಗುತ್ತಿದೆ. ಬಾನಳ್ಳಿ, ಮತ್ತಿಕಟ್ಟೆ, ಹೊಸಳ್ಳಿ, ಭಾರತೀಬೈಲು, ಸುತ್ತಮುತ್ತ ಹುಲಿ ಸಂಚಾರ ಮಾಡುತ್ತಿದ್ದು ಸ್ಥಳಿಯರು ಆತಂಕದಿಂದ ಬದುಕುತ್ತಿದ್ದಾರೆ. ಗ್ರಾಮಗಳಲ್ಲಿ ಅಲ್ಲಲ್ಲೇ ಹುಲಿ ಹೆಜ್ಜೆಯನ್ನ ನೋಡ್ತಿರೋ ಸ್ಥಳಿಯರು ಹುಲಿಗೆ ಹೆದರಿ ಮನೆಯಿಂದ ಆಚೆ ಬರಲು ಹೆದರುತ್ತಿದ್ದಾರೆ.
ಜನಸಾಮಾನ್ಯರು ತೋಟಗಳಿಗೆ ಕೆಲಸಕ್ಕೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಅರಣ್ಯ ಇಲಾಖೆ ಕೂಡಲೇ ಹುಲಿಯನ್ನ ಸೆರೆ ಹಿಡಿದು ಸ್ಥಳಾಂತರಿಸಬೇಕೆಂದು ಸ್ಥಳಿಯರು ಆಗ್ರಹಿಸಿದ್ದಾರೆ. ಈಗಾಗಲೇ 30ಕ್ಕೂ ಹೆಚ್ಚು ರಾಸುಗಳು ಹುಲಿ ದಾಳಿಗೆ ಬಲಿಯಾಗಿವೆ. ಜನ ಮನೆಯಿಂದ ಹೊರಬರೋದಕ್ಕೂ ಆತಂಕಪಡುವ ಸನ್ನಿವೇಶ ನಿರ್ಮಾಣವಾಗಿದೆ. ಹಾಗಾಗಿ, ಸ್ಥಳಿಯರು ಹುಲಿಯನ್ನ ಸೆರೆ ಹಿಡಿಯುವಂತೆ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g