May 5, 2024

MALNAD TV

HEART OF COFFEE CITY

ಹಾಂದಿಯಿಂದ ಆಲ್ದೂರುವರೆಗೆ ಕಾಂಗ್ರೆಸ್ಸಿನಿಂದ ಸ್ವಾತಂತ್ರ್ಯ ಸಂಭ್ರಮದ ಪಾದಯಾತ್ರೆ

1 min read

 

ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಪೂರೈಸಿದೆ ಹಿನ್ನೆಲೆ ಕಾಂಗ್ರೆಸ್ ನಡೆಸುತ್ತಿರೋ ಅಮೃತ ಮಹೋತ್ಸವದ ಪಾದಯಾತ್ರೆ ಇಂದು ಚಿಕ್ಕಮಗಳೂರು ಜಿಲ್ಲೆಗೆ ಆಗಮಿಸಿತ್ತು. ಕಾಂಗ್ರೆಸ್ ನಾಯಕರೊಂದಿಗೆ ಕಾರ್ಯಕರ್ತರು ಮೂಡಿಗೆರೆ ತಾಲೂಕಿನ ಹಾಂದಿಯಿಂದ ಭೂತನಕಾಡು ಮಾರ್ಗವಾಗಿ ಗುಲ್ಲನ್‍ಪೇಟೆಯಿಂದ ಆಲ್ದೂರಿನವರೆಗೂ ಪಾದಯಾತ್ರೆ ಕೈಗೊಂಡಿದ್ದರು. ಸುಮಾರು 12 ಕಿ.ಮೀ. ಉದ್ದದ ಈ ಮಾರ್ಗದಲ್ಲಿ ನೂರಾರು ಕಾರ್ಯಕರ್ತರು ಕಾಂಗ್ರೆಸ್ ನಾಯಕರಿಗೆ ಕೈ ಜೋಡಿಸಿದ್ದರು. ಪಾದಯಾತ್ರೆಯಲ್ಲಿ ಮುಂಬರೋ ವಿಧಾಸನಭಾ ಚುನಾವಣೆಯ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಪೈಪೋಟಿ ಕೂಡ ಏರ್ಪಟ್ಟಿತ್ತು. ಈ ಬಾರಿ ಅತ್ತ ಮಾಜಿ ಸಚಿವೆ ಮೋಟಮ್ಮ ಪುತ್ರಿ ನಯನಾ ಮೋಟಮ್ಮ ಕೂಡ ಟಿಕೆಟ್‍ಗಾಗಿ ಪಟ್ಟು ಹಿಡಿದಿದ್ದಾರೆ. ಇತ್ತ ಕಾಂಗ್ರೆಸ್ ಮುಖಂಡೆ ನಾಗರತ್ನ ಕೂಡ ಟಿಕೆಟ್‍ಗಾಗಿ ಲಾಬಿ ನಡೆಸುತ್ತಿದ್ದಾರೆ.

 

ಇಬ್ಬರೂ ನಾಯಕಿಯರು ತಮ್ಮ ಬೆಂಬಲದೊಂದಿಗೆ ಪ್ರತ್ಯೇಕವಾಗಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಇಬ್ಬರೂ ನಾಯಕಿಯರ ಬೆಂಬಲಿಗರು ಕೂಡ ಪಾದಯಾತ್ರೆಯುದ್ಧಕ್ಕೂ ಕಾಂಗ್ರೆಸ್ ಹಾಗೂ ತಮ್ಮ ನಾಯಕಿಯರಿಗೆ ಜೈಕಾರ ಕೂಗಿದರು.

ಪಾದಯಾತ್ರೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ ರಮಾನಾಥ್ ರೈ, ಯು.ಟಿ.ಖಾದರ್, ಮೋಟಮ್ಮ, ಟಿ.ಡಿ.ರಾಜೇಗೌಡ ಸೇರಿ ಹಲವು ಸ್ಥಳಿಯ ಮುಖಂಡರು ಕೂಡ ಪಾಲ್ಗೊಂಡಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!