ಜಿಲ್ಲೆಯಾದ್ಯಂತ ಹಲವೆಡೆ ಅಬ್ಬರಿಸಿದ ವರುಣ ಗಣೇಶೋತ್ಸವಕ್ಕೆ ಅಡ್ಡಿ
1 min read
ಎರಡೇ ಎರಡು ಗಂಟೆ ಸುರಿದ ರಣಮಳೆಗೆ ಮಲೆನಾಡು ಅಲ್ಲೋಲ-ಕಲ್ಲೋಲವಾಗಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ, ಕೊಪ್ಪ, ಶೃಂಗೇರಿಯಲ್ಲಿ ಮಳೆಯ ಅಬ್ಬರಕ್ಕೆ ಜನಜೀವನ ಜಲಾವೃತಗೊಂಡಿದೆ. ಮಧ್ಯಾಹ್ನ ಮೂರು ಗಂಟೆಯ ಬಳಿಕ ಆರಂಭವಾದ ಮಳೆ ಎರಡೇ ಎರಡು ಗಂಟೆಯಲ್ಲಿ ಸುರಿದ ಸುಮಾರು ಏಳು ಇಂಚಿನಷ್ಟು ಮಳೆ ಮಲೆನಾಡಿಗರನ್ನ ಹೈರಾಣಾಗಿಸಿದೆ. ಕೊಪ್ಪ ತಾಲೂಕಿನ ಜಯಪುರ ಸುತ್ತಮುತ್ತ ಸುರಿದ ಮಳೆಗೆ ನೀರು ರಸ್ತೆಯಲ್ಲಿ ಎರಡ್ಮೂರು ಅಡಿ ಎತ್ತರದಲ್ಲಿ ನದಿಯಂತೆ ಹರಿದಿದೆ. ಗುಡ್ಡಗಾಡು ಪ್ರದೇಶದಲ್ಲಿ ಧಾರಾಕಾರವಾಗಿ ಸುರಿದ ಮಳೆ ನೀರು ಮಣ್ಣಿನ ಜೊತೆ ನುಗ್ಗಿದ ಪರಿಣಾಮ ಜಯಪುರ ಪಟ್ಟಣದ ಅಕ್ಷರಶಃ ಜಲಾವೃತಗೊಂಡಿದೆ.
- ಕೊಪ್ಪ ತಾಲೂಕಿನ ದಯಂಬಳ್ಳಿ ಗ್ರಾಮದ ಬಳಿ ಭಾರೀ ಮಳೆಗೆ ಕಳೆದ ನಾಲ್ಕು ದಿನಗಳ ಹಿಂದಷ್ಟೆ ನಾಟಿ ಮಾಡಿದ್ದ ಬತ್ತದ ಗದ್ದೆ ಮಳೆ ನೀರಲ್ಲಿ ಕೊಚ್ಚಿ ಹೋಗಿವೆ. ಹತ್ತಾರು ಎಕರೆ ಕಾಫಿ-ಅಡಿಕೆ ತೋಟ ಕೂಡ ಮಳೆ ನೀರಿನಲ್ಲಿ ಜಲಾವೃತಗೊಂಡಿದೆ. ಭಾರೀ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಅಡಿಗಟ್ಟಲೇ ನೀರು ನಿಂತ ಪರಿಣಾಮ ವಾಹನ ಸವಾರರು ಗಂಟೆಗಟ್ಟಲೇ ಪರದಾಡಿದ್ದಾರೆ. ಕಳೆದ 15 ದಿನಗಳಿಂದ ಬಿಡುವ ನೀಡಿದ್ದ ವರುಣದೇವ ಇಂದು ಎರಡೇ ಎರಡು ಗಂಟೆ ಅಬ್ಬರಿಸಿ ಬೊಬ್ಬಿರಿದ ಪರಿಣಾಮ ಮಲೆನಾಡು ಅಕ್ಷರಶಃ ಕಂಗಾಲಾಗಿದೆ. ಕೊಪ್ಪ ತಾಲೂಕಿನ ಜಯಪುರ ಸುತ್ತಮುತ್ತ ಮಳೆ ನೀರು ತಗ್ಗುಪ್ರದೇಶಗಳಿಗೆ ನುಗ್ಗಿದ ಪರಿಣಾಮ ನೀರನ್ನ ಹೊರಹಾಕಲು ಸ್ಥಳಿಯರು ಹರಸಾಹಸ ಪಟ್ಟಿದ್ದಾರೆ. ಭಾರೀ ಗಾಳಿ-ಮಳೆಯ ಪರಿಣಾಮ ಗ್ರಾಮೀಣ ಭಾಗದಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯುತ್ ಸಂಪರ್ಕವನ್ನ ಸ್ಥಗಿತಗೊಳಿಸಲಾಗಿದೆ. ಜಯಪುರದಲ್ಲಿ ಎರಡೇ ಎರಡು ಗಂಟೆಗೆ ಅಂದಾಜು 88 ಮಿ.ಮೀ. ಮಳೆಯಾಗಿದೆ. ಕಳೆದ ಎರಡು ದಶಕಗಳಲ್ಲೇ ಈ ಮಳೆ ದಾಖಲೆ ಮಳೆಯಾಗಿದೆ. ಧಾರಾಕಾರ ಮಳೆಯಿಂದ ಬೆಟ್ಟಗುಡ್ಡಗಳ ಅಂಚಿನ ಗ್ರಾಮಗಳಲ್ಲಿ ಆತಂಕ ಮನೆ ಮಾಡಿದೆ. ಮೂಡಿಗೆರೆಯಲ್ಲೂ ಭಾರೀ ಮಳೆ ಸುರಿದು ಮೇಗಲ್ಪೇಟೆಯಲ್ಲಿ ನಾಲ್ಕು ಮನೆಗಳಿಗೆ ನೀರು ನುಗ್ಗಿದೆ. ನೀರು ನುಗ್ಗಿದ ಪರಿಣಾಮ ಮನೆಯವರು ನೀರನ್ನ ಹೊರಹಾಕಲು ಹರಸಾಹನ ಪಟ್ಟಿದ್ದಾರೆ. ಮೆಸ್ಕಾಂ ಇಲಾಖೆಯಿಂದ ನೀರನ್ನ ನುಗ್ಗಿದ ನೀರು ಮನೆಗಳಿಗೆ ನುಗ್ಗಿದ್ದರಿಂದ ಸ್ಥಳಿಯರು ಮೆಸ್ಕಾಂ ಇಲಾಖೆ ವಿರುದ್ಧ ಅಸಮಾಧಾಣ ಹೊರಹಾಕಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g