May 7, 2024

MALNAD TV

HEART OF COFFEE CITY

ಮಧುಕುಮಾರ್ ರಾಜ್ ಅರಸ್ ನಗರಸಭೆ ಅಧ್ಯಕ್ಷರಾಗುವಂತೆ ವಿಶೇಷ ಪೂಜೆ

1 min read

ಚಿಕ್ಕಮಗಳೂರು-ನಗರಸಭೆ ಚುನಾವಣೆಯ 5ನೇ ವಾರ್ಡ್‍ನಲ್ಲಿ ಗೆಲುವು ಸಾಧಿಸಿರುವ ಮಧುಕುಮಾರ್ ರಾಜ್ ಅರಸು ಅವರು ಈ ಬಾರಿಯ ನಗರಸಭೆ ಅಧ್ಯಕ್ಷರಾಗಿ ಆಯ್ಕೆಯಾಗಲಿ ಎಂದು ಆಶಿಸಿ ಜಿಲ್ಲಾ ಅರಸು ಸಂಘದ ಸದಸ್ಯರು, ಪದಾಧಿಕಾರಿಗಳು ಬುಧವಾರ ತೇಗೂರಿನ ವೀರಾಂಜನೆಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಜಿಲ್ಲಾ ಅರಸು ಸಂಘದ ಉಪಾಧ್ಯಕ್ಷ ದಶರಥರಾಜ್ ಅರಸ್ ಮಾತನಾಡಿ ಈ ಬಾರಿಯ ನಗರಸಭೆ ಚುನಾವಣೆಯಲ್ಲಿ 5ನೇ ವಾರ್ಡಿನಿಂದ ಬಿಜೆಪಿ ಅಭ್ಯರ್ಥಿಯಾಗಿ ಮಧುಕುಮಾರ್ ರಾಜ್ ಅವರು ಸ್ಪರ್ಧಿಸಿ ಜನರ ಆರ್ಶೀವಾದದಿಂದ ಗೆಲುವು ಸಾಧಿಸಿದ್ದಾರೆ. ಅದರಂತೆ ಈ ಬಾರಿ ನಗರಸಭೆ ಅಧ್ಯಕ್ಷ ಸ್ಥಾನ ಬಿಸಿಎ(ಎ) ವರ್ಗಕ್ಕೆ ಮೀಸಲಾಗಿದ್ದು ಆಕಾಂಕ್ಷಿಗಳಲ್ಲಿ ಇವರು ಕೂಡ ಒಬ್ಬರಾಗಿದ್ದು ಅಧ್ಯಕ್ಷ ಸ್ಥಾನಕ್ಕೆ ಅರಸು ಸಮಾಜದ ನಾಯಕರೊಬ್ಬರು ಆಯ್ಕೆಯಾಗಲಿ ಎಂದು ಪ್ರಾರ್ಥಿಸಿ ದೇವರಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಮಧುಕುಮಾರ್ ಅವರು ಅರಸು ಜನಾಂಗದ ಪ್ರಬಲ ನಾಯಕರಾಗಿ ಗುರುತಿಸಿಕೊಂಡಿದ್ದು ಬಿಜೆಪಿ ಪಕ್ಷದಲ್ಲ್ಲಿ ನಗರಮಂಡಲ ಅಧ್ಯಕ್ಷರಾಗಿ, ಪಕ್ಷ ಸಂಘಟನೆ ಮಾಡುವ ಮೂಲಕ ಅಪಾರ ರಾಜಕೀಯ ಅನುಭವ ಉಳ್ಳವರಾಗಿದ್ದು ಇವರು ನಗರಸಭೆಗೆ ಅಧ್ಯಕ್ಷರಾಗಿ ಆಯ್ಕೆಗೊಂಡಲ್ಲಿ ನಗರವನ್ನು ಮತ್ತಷ್ಟು ಅಭಿವೃದ್ಧಿಗೊಳಿಸುವಲ್ಲಿ ಶ್ರಮಿಸಲಿದ್ದಾರೆ ಎಂದು ಆಶಯ ವ್ಯಕ್ತಪಡಿಸಿದರು.
ಗ್ರಾಮಪಂಚಾಯಿತಿ ಅಧ್ಯಕ್ಷ ಗಜೇಂದ್ರರಾಜ್‍ಅರಸ್ ಮಾತನಾಡಿ ಕಳೆದ ಸುಮಾರು 20 ವರ್ಷಗಳಿಂದ ಮಧುಕುಮಾರ್ ರಾಜ್‍ಅರಸ್ ಅವರು ಬಿಜೆಪಿ ಪಕ್ಷದಲ್ಲಿ ತೊಡಗಿಕೊಂಡು ಸಮಾಜಮುಖಿ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ಈ ಬಾರಿಯ ನಗರಸಭೆ ಚುನಾವಣೆಯಲ್ಲಿ ಜನರ ಆರ್ಶಿವಾದದಿಂದ ಗೆಲುವು ಸಾಧಿಸಿದ್ದು ನಗರಸಭೆ ಅಧ್ಯಕ್ಷರಾಗಿ ಆಯ್ಕೆಯಾಗಲಿ ಎಂದು ಆಶಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಹರೀಶ್ ರಾಜ್ ಅರಸ್, ನಾಗೇಶ್ ರಾಜ್ ಅರಸ್, ಭೀಮರಾಜ್ ಅರಸ್, ನಾಗರಾಜ್ ಅರಸ್, ಮಂಜುನಾಥ್, ಲೋಕೇಶ್ ಸೇರಿದಂತೆ ಮತ್ತಿತರರು ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!