ಇಂದಾವರ ಶಾಲೆಯಲ್ಲಿ ಭುಗಿಲೆದ್ದ ಹಿಜಾಬ್ ವಿವಾದ
1 min read
ಚಿಕ್ಕಮಗಳೂರು ನಗರದ ಮೌಲಾನಾ ಅಬ್ದುಲ್ ಆಜಾದ್ ಪ್ರೌಢಶಾಲೆಯಲ್ಲಿ ಮಂಗಳವಾರ ಹಿಜಾಬ್ ವಿವಾದ ಭುಗಿಲೆದ್ದಿದೆ. ಶಾಲೆಗೆ ಇಂದು ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಆಗಮಿಸಿದ್ದು ಈ ವೇಳೆ ಶಿಕ್ಷಕರು ಹಿಜಾಬ್ ಧರಿಸಿಕೊಂಡು ಬಂದಿರುವುದನ್ನು ನಿಷೇಧಿಸಿದ ಹಿನ್ನೆಲೆ ವಿವಾದ ಭುಗಿಲೆದ್ದಿದೆ.
ಈ ವೇಳೆ ವಿದ್ಯಾರ್ಥಿನಿಯರು ಯಾವುದೇ ಕಾರಣಕ್ಕೂ ಹಿಜಾಬ್ ತಗೆಯುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ ನಮಗೆ ಪರೀಕ್ಷೆ ಬೇಡ ಹಿಜಾಬ್ ಬೇಕು ಎಂದು ಶಾಲೆಯಿಂದ ಹೊರಬಂದಿದ್ದು ಈ ವೇಳೆ ಪೋಷಕರು ಹಾಗೂ ಶಾಲಾ ಆಡಳಿತ ಮಂಡಳಿಯ ಮಧ್ಯೆ ಮಾತಿನ ಚಕಮಕಿ ಉಂಟಾಯಿತು. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g