ಬೈಕ್ _ಕಾರು ನಡುವೆ ಭೀಕರ ಅಪಘಾತ, ಓರ್ವನ ಸ್ಥಿತಿ ಗಂಭೀರ
1 min read
ಶೃಂಗೇರಿ: ಕಾರು – ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶೃಂಗೇರಿಯಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಿಂದ ಕಾರ್ಕಳ- ಧರ್ಮಸ್ಥಳದ ಕಡೆಗೆ ತೆರಳುವ ಮಾರ್ಗದಲ್ಲಿ ಬರುವ ನೆಮ್ಮಾರು ಸರ್ಕಲ್ ಬಳಿ ಈ ಅಪಘಾತ ಸಂಭವಿಸಿದ್ದು, ಕಾರು ಡಿಕ್ಕಿಹೊಡೆದ ರಭಸಕ್ಕೆ ಬೈಕ್ ಸವಾರ ಗಂಭೀರವಾಗಿ ಗಾಯಕ್ಕೊಳಗಾಗಿದ್ದಾನೆ. ಅತನನ್ನು ತಕ್ಷಣವೇ ನೆಮ್ಮಾರು ಪ್ರಾಥಮಿಕ ಅರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಶೃಂಗೇರಿಯ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಸಂಪೂರ್ಣ ಜಖಂಗೊಂಡಿವೆ. ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಅಪಘಾತ ನಡೆದ ಸ್ಥಳದಲ್ಲಿ ಸ್ಥಳೀಯರು ಹಾಗೂ ಇತರ ವಾಹನ ಸವಾರರು ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದು, ಅಪಘಾತಕ್ಕೀಡಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g