April 29, 2024

MALNAD TV

HEART OF COFFEE CITY

ಕೊಲೆ ಆರೋಪಿಗಳ ಬಂಧನಕ್ಕೆ ಆಗ್ರಹ

1 min read

 

ಚಿಕ್ಕಮಗಳೂರು: ಹಿಂದು ಕಾರ್ಯಕರ್ತರ ಹತ್ಯೆಯ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಶ್ರೀರಾಮಸೇನೆ ಮತ್ತು ದುರ್ಗಾಸೇನೆಯ ಮುಖಂಡರು ಸರ್ಕಾರವನ್ನು ಒತ್ತಾಯಿಸಿ ಸೋಮವಾರ ಮನವಿ ಸಲ್ಲಿಸಿದರು.

ಶಿವಮೊಗ್ಗದಲ್ಲಿ ನಡೆದಿರುವ ಹಿಂದು ಕಾರ್ಯಕರ್ತ ಹರ್ಷ ಅವರ ಹತ್ಯೆ ಹಿಂದೆ ಮೂಲಭೂತವಾದಿ ಸಂಘಟನೆಗಳು ಯತ್ನಿಸಿದ್ದವು. ಅವರಿಗೆ ಸೂಕ್ತ ರಕ್ಷಣೆ ನೀಡದಿರುವುದು ಸರ್ಕಾರದ ನಾಚಿಕೆಗೇಡಿನ ವಿಷಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ರೂಪ ಅವರಿಗೆ ಸಲ್ಲಿಸಿರುವ ಮನವಿಯಲ್ಲಿ ತಿಳಿಸಲಾಗಿದೆ.

ಶಿವಮೊಗ್ಗ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ 2-3 ವರ್ಷಗಳಿಂದ ಹಿಂದೂಗಳ ಹತ್ಯೆ ಅವ್ಯಹತವಾಗಿ ನಡೆಯುತ್ತಿದ್ದು, ಸರ್ಕಾರದ ದಿವ್ಯನಿರ್ಲಕ್ಷ್ಯ ಇದಕ್ಕೆ ಕಾರಣವಾಗಿದೆ. ವಿರೋಧ ಪಕ್ಷದಲ್ಲಿದ್ದಾಗ ಬಿಜೆಪಿ ಕೆಲವು ಮೂಲಭೂತವಾದಿ ಸಂಘಟನೆಗಳ ನಿಷೇಧಕ್ಕೆ ಒತ್ತಾಯಿಸಿದ್ದು, ಈಗ ಅಧಿಕಾರದಲ್ಲಿದ್ದಾಗ ನಿಷೇಧಿಸದಿರುವುದು ಸರ್ಕಾರದ ಮೇಲೆ ಅನುಮಾನ ಮೂಡುವಂತಾಗಿದೆ ಎಂದು ಹೇಳಿದ್ದಾರೆ.

ಹತ್ಯೆಯ ಆರೋಪಿಗಳಿಗೆ ಉಗ್ರಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಎಸ್‍ಡಿಪಿಐ, ಪಿಎಫ್‍ಐ, ಸಿಎಫ್‍ಐ ಸಂಘಟನೆಗಳನ್ನು ನಿಷೇಧಿಸಿ ಪ್ರಮುಖರನ್ನು ಬಂಧಿಸಬೇಕು. ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು. ಹಿಂದು ಕಾರ್ಯಕರ್ತರು ಮತ್ತು ನಾಯಕರಿಗೆ ಸರ್ಕಾರ ಸೂಕ್ತ ಭದ್ರತೆ ವ್ಯವಸ್ಥೆ ಕಲ್ಪಿಸಬೇಕೆಂದು ಕೋರಿದ್ದಾರೆ.

ವಿಶ್ವಹಿಂದೂಪರಿಷತ್ ಜಿಲ್ಲಾಧ್ಯಕ್ಷ ಶ್ರೀಕಾಂತ್‍ಪೈ, ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರಂಜಿತ್‍ಶೆಟ್ಟಿ, ದುರ್ಗಾಸೇನೆ ಜಿಲ್ಲಾಧ್ಯಕ್ಷೆ ಶಾರದಮ್ಮ, ಶ್ರೀರಾಮಸೇನೆ ಜಿಲ್ಲಾಪ್ರಧಾನಕಾರ್ಯದರ್ಶಿ ಮಹೇಶ್ ಮೇದಾರ್, ತಾಲೂಕು ಅಧ್ಯಕ್ಷ ಪುನೀತ್, ಪ್ರಧಾನಕಾರ್ಯದರ್ಶಿಕೃಷ್ಣಕುಮಾರ್, ತಾಲೂಕು ವಿದ್ಯಾರ್ಥಿಪ್ರಮುಖ್ ಯಶ್ವಂತ್, ತಾಲೂಕು ಪ್ರಮುಖ್ ಜ್ಞಾನೇಂದ್ರ, ದುರ್ಗಾಸೇನೆ ತಾಲೂಕು ಅಧ್ಯಕ್ಷೆ ನವೀನಾ ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!