ಶಾರದಾಂಬೆ ಮೊರೆ ಹೋದ ಸಿ.ಎಂ, ವಿಶೇಷ ಪೂಜೆ, ಜಗದ್ಗುರುಗಳ ಆಶೀರ್ವಾದ
1 min read
ಶೃಂಗೇರಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಶ್ರೀ ಶಾರದಾ ಪೀಠಕ್ಕೆ ಮಂಗಳವಾರ ಆಗಮಿಸಿ, ಶ್ರೀ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ, ನಂತರ ಜಗದ್ಗುರುಗಳ ಆಶೀರ್ವಾದ ಪಡೆದರು.ಇದಕ್ಕೂ ಮೊದಲು ಹೆಲಿಕ್ಯಾಪ್ಟರ್ ಮೂಲಕ ಪಟ್ಟಣದ ಹೊರಭಾಗದ ಕೊರಡಕಲ್ಲು ಹೆಲಿಪ್ಯಾಡ್ಗೆ ಆಗಮಿಸಿದ ಮುಖ್ಯಮಂತ್ರಿಗಳನ್ನು ಹೆಲಿಪ್ಯಾಡಿನಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್, ಶಾಸಕ ಟಿ.ಡಿ.ರಾಜೇಗೌಡ, ಪೊಲೀಸ್ ಐಜಿ ದೇವಜಿತ್ ರೇ, ಉಡುಪಿ ಎಸ್ಪಿ ವಿಷ್ಣುವರ್ಧನ್, ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮತ್ತಿತರರು ಸ್ವಾಗತಿಸಿದರು.
ಶ್ರೀಮಠಕ್ಕೆ ತೆರಳಿದ ಮುಖ್ಯಮಂತ್ರಿಗಳಿಗೆ ಶ್ರೀಮಠದ ಆಡಳಿತಾಧಿಕಾರಿ ಡಾ.ವಿ.ಆರ್.ಗೌರಿಶಂಕರ್ ಪೂರ್ಣಕುಂಭ ಸ್ವಾಗತ ನೀಡಿದರು.ಶ್ರೀ ಶಾರದಾಂಬಾ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಮಹಾಮಂಗಳಾರತಿ ಸ್ವೀಕರಿಸಿ, ಶ್ರೀ ಶಂಕರಚಾರ್ಯ ದೇಗುಲಕ್ಕೆ ತೆರಳಿದರು. ತೋರಣ ಗಣಪತಿ ಸನ್ನಿಧಿಗೆ ತೆರಳಿ ಪೂಜೆ ಸಲ್ಲಿಸಿ, ತೆಂಗಿನ ಕಾಯಿ ಒಡೆದರು. ಬಳಿಕ ನರಸಿಂಹವನಕ್ಕೆ ತೆರಳಿದ ಮುಖ್ಯಮಂತ್ರಿಗಳು ಉಭಯ ಜಗದ್ಗುರುಗಳಾದ ಶ್ರೀ ಭಾರತೀತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳ ಆಶೀರ್ವಾದ ಪಡೆದರು
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g