ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆಯಲ್ಲಿ ಮೆಸ್ಕಾಂ ವಿಫಲ_ಹೆಚ್.ಹೆಚ್ ದೇವರಾಜ್
1 min read
ಚಿಕ್ಕಮಗಳೂರು: ಮೆಸ್ಕಾಂ ಜಿಲ್ಲೆಯಲ್ಲಿ ರೈತರಿಗೆ ಸಮರ್ಪಕವಾದ ವಿದ್ಯುತ್ ಪೂರೈಕೆ ಮಾಡುವಲ್ಲಿ ವಿಫಲವಾಗಿದ್ದು ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದು ಕೆಪಿಸಿಸಿ ವಕ್ತಾರ ಹೆಚ್.ಹೆಚ್ ದೇವರಾಜ್ ಆರೋಪಿಸಿದರು.ನಗರದ ಪ್ರೆಸ್ಕ್ಲಬ್ನಲ್ಲಿ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಸರಿಯಾದ ವಿದ್ಯುತ್ ಪೂರೈಕೆಯಾಗದ ಹಿನ್ನೆಲೆ ಬಯಲು ಸೀಮೆ ಹಾಗೂ ಮಲೆನಾಡಿನಲ್ಲಿ ಅಡಿಕೆ, ಕಾಫಿಗೆ ಸಮರ್ಪಕವಾಗಿ ನೀರುಣಿಸಲು ಸಾಧ್ಯವಾಗದೇ ರೈತರು ಪರಿತಪಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು ಇಲಾಖೆ ಸೂಕ್ತವಾಗಿ ವಿದ್ಯುತ್ ಪೂರೈಸಬೇಕು ಎಂದು ಒತ್ತಾಯಿಸಿದರು.
ಸಚಿವ ಸುನೀಲ್ ಕುಮಾರ್ ಜಿಲ್ಲೆಯಲ್ಲ ಮೆಸ್ಕಾಂ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಸಂಪರ್ಕ ಸಭೆಯಲ್ಲಿ ರೈತರಿಗೆ ಸರಿಯಾದ ಸಮಯಕ್ಕೆ ವಿದ್ಯುತ್ ನೀಡುವ ಭರವಸೆ ನೀಡಿದ್ದರು. ಆದರೆ ಜಿಲ್ಲೆಯಲ್ಲಿ ಅದು ಅನುಷ್ಟಾನವಾಗಿಲ್ಲ ಮಾತಿಗಷ್ಟೇ ಸಿಮೀತವಾಗಿದೆ ಎಂದರು.ವಿದ್ಯುತ್ ಸಮಸ್ಯೆಯಿಂದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗೂ ಸಹ ಅಭಾವ ಉಂಟಾಗಿದೆ. ಈ ನಿಟ್ಟಿನಲ್ಲಿ ಯೋಚಿಸಿ ಮೆಸ್ಕಾಂ ಥ್ರೀಫೇಸ್ ವಿದ್ಯುತ್ ಪೂರೈಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಎಚ್ಚರಿಕೆ ನೀಡಿದರು.
ಇನ್ನು ಇದೇ ವೇಳೆ ಹಿಜಾಬ್ ವಿವಾದದ ಕುರಿತು ಮಾತನಾಡಿದ ಅವರು. ವಿವಾದ ಇಷ್ಟೊಂದು ದೊಡ್ಡಮಟ್ಟದಲ್ಲಿ ಬೆಳೆಯಲು ಸರ್ಕಾರ ಹಾಗೂ ಮಂತ್ರಿಗಳು ನೇರ ಹೊಣೆ. ಹಿರಿಯ ಸಚಿವರು ಯಾವುದೋ ಮತೀಯ ಸಂಸ್ಥೆಯ ವಕ್ತಾರರಂತೆ ವರ್ತಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಸರ್ಕಾರ ವಿವಾದವನ್ನು ಮುಂದಿಟ್ಟುಕೊಂಡು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನ ಹಾಗೂ ಅವರ ಬದುಕಿನ ಜೊತಗೆ ಚೆಲ್ಲಾಟವಾಡುತ್ತಿದ್ದಾರೆ. ಈ ಬಗ್ಗೆ ಶಿಕ್ಷಣ ಸಚಿವರು ಜಾವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g