ಕನ್ನಡ ಸೇನೆ ರಾಜ್ಯಾಧ್ಯಕ್ಷರ ಅರ್ಥಪೂರ್ಣ ಹುಟ್ಟುಹಬ್ಬ
1 min readಚಿಕ್ಕಮಗಳೂರು : ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ.ಆರ್. ಕುಮಾರ್ ರವರ ಹುಟ್ಟುಹಬ್ಬವನ್ನು ಕನ್ನಡ ಸೇನೆ ಜಿಲ್ಲಾ ಘಟಕದ ಕಾರ್ಯಕರ್ತರು ದೇವಸ್ಥಾನದಲ್ಲಿ ಪೂಜೆ ಹಾಗೂ ಅಂದ ಮಕ್ಕಳಿಗೆ ಅನ್ನಸಂತರ್ಪಣೆ ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು.
ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ.ಆರ್. ಕುಮಾರ್ ರವರ ಹುಟ್ಟುಹಬ್ಬದ ಅಂಗವಾಗಿ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಪಿ.ಸಿ ರಾಜೇಗೌಡ ನೇತೃತ್ವದಲ್ಲಿ ಕನ್ನಡ ಸೇನೆ ಕಾರ್ಯಕರ್ತರು ನಗರದ ಓಂಕಾರೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಆಶಾಕಿರಣ ಅಂಧ ಮಕ್ಕಳ ಶಾಲೆಯ ವಿದ್ಯಾರ್ಥಿಗಳೊಂದಿಗೆ ಕೇಕು ಕತ್ತರಿಸಿ, ಸಿಹಿ ಹಂಚಿದರು. ನಂತರ ಶಾಲೆಯ ವಿದ್ಯಾರ್ಥಿಗಳಿಗೆ ಅನ್ನಸಂತರ್ಪಣೆ ಮಾಡುವ ಮೂಲಕ ವಿಶೇಷವಾಗಿ ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ.ಆರ್. ಕುಮಾರ್ ರವರ ಹುಟ್ಟುಹಬ್ಬವನ್ನು ಆಚರಿಸಿದರು.
ಈ ವೇಳೆ ಕನ್ನಡ ಸೇನೆ ಕಾರ್ಯಕರ್ತರುಗಳಾದ ಕಳವಾಸೆ ರವಿ, ನಗರಾಧ್ಯಕ್ಷ ದೇವರಾಜ್, ನಗರ ಆಟೋ ಸಂಘದ ಅಧ್ಯಕ್ಷ ಜಯಪ್ರಕಾಶ್, ಉಪಾಧ್ಯಕ್ಷ ಮರ್ಲೆ ಜಗದೀಶ್, ಭುವನೇಶ್ವರಿ ಆಟೋ ಸಂಘದ ಅಧ್ಯಕ್ಷ ಸತೀಶ್, ಪುಟ್ಟಸ್ವಾಮಿ, ಲವ, ತಿಮ್ಮಪ್ಪ, ದೇವರಾಜ್, ಶಂಕರೇಗೌಡ್ರು, ಹರೀಶ್ ಮುಂತಾದವರಿದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g