ದತ್ತಪೀಠದಲ್ಲಿ ಮತ್ತೆ ಮಾಂಸ, ಜಿಲ್ಲಾಡಳಿತದ ವಿರುದ್ಧ ಹಿಂದೂ ಸಂಘಟನೆಗಳ ಆಕ್ರೊಶ….!
1 min read
ಚಿಕ್ಕಮಗಳೂರು : ಜಿಲ್ಲೆಯ ಹಿಂದೂ-ಮುಸ್ಲಿಮರ ಧಾರ್ಮಿಕ ಭಾವೈಕ್ಯದ ಕ್ಷೇತ್ರವಾಗಿರೋ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ದರ್ಗಾದಲ್ಲಿ ಪ್ರವಾಸಿಗರು ಮತ್ತೆ ಮಾಂಸವನ್ನು ಬೇಯಿಸಿರುವ ವಿಡಿಯೋ ವೈರಲ್ ಆಗಿದ್ದು, ಹಿಂದೂಪರ ಸಂಘಟನೆ ಕಾರ್ಯಕರ್ತರು ಜಿಲ್ಲಾಡಳಿತದ ವಿರುದ್ಧ ಕಿಡಿಕಾರಿದ್ದಾರೆ. ನಾಲ್ಕೈದು ತಿಂಗಳ ಹಿಂದೆಯೂ ದತ್ತಪೀಠದಲ್ಲಿ ಬಿರಿಯಾನಿ ತಯಾರಿಸಿ ಸೇವಿಸಿದ್ದರು. ಆಗಲೂ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಜಿಲ್ಲಾಡಳಿತಕ್ಕೆ ದೂರು ನೀಡಿದ್ದರು. ಆಗ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿತ್ತು. ಆದರೆ, ಯಾವುದೇ ಕ್ರಮಕೈಗೊಂಡಿಲ್ಲ. ಹಾಗಾಗಿ, ದತ್ತಪೀಠಕ್ಕೆ ಬರುವ ಪ್ರವಾಸಿಗರು ದತ್ತ ಮಾಲಾ ಧಾರಣೆ ಹಾಗೂ ದತ್ತ ಜಯಂತಿಯ ವೇಳೆ ಹಿಂದೂ ಸಂಘಟನೆಗಳು ಹೋಮ-ಹವನ ನಡೆಸಲು ಸರ್ಕಾರವೇ ನಿರ್ಮಿಸಿರುವ ತಾತ್ಕಾಲಿಕ ಶೆಡ್ ನಲ್ಲಿ ಪುನಃ ಮಾಂಸವನ್ನ ಬೇಯಿಸಿದ್ದಾರೆ. ಇದೇ ಕೊನೆ ಎಚ್ಚರಿಕೆ. ಇನ್ನು ಮುಂದೆ ಇಂತಹಾ ಘಟನೆ ನಡೆಯದಂತೆ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು.
ಇಲ್ಲಿ ಇನ್ನೊಮ್ಮೆ ಇಂತಹಾ ಅಚಾತುರ್ಯ ನಡೆದರೆ ಮುಂದಿನ ದಿನಗಳಲ್ಲಿ ನಾವೇ ಸೂಕ್ತ ಉತ್ತರ ಕೊಡುತ್ತೇವೆ ಎಂದು ಯುವ ಬ್ರಿಗೇಡ್ ಸಂಚಾಲಕ ಪ್ರವೀಣ್ ಖಾಂಡ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿರೋ ಹಿಂದೂ ಬ್ರಿಗೇಡ್ ಕಾರ್ಯಕರ್ತರು, ಸರ್ಕಾರ ಅಂದು ಕೊಟ್ಟ ಮಾತನ್ನ ಉಳಿಸಿಕೊಂಡಿಲ್ಲ. ಸರ್ಕಾರದ ನಿರ್ಲಕ್ಷ್ಯದಿಂದಲೇ ಪ್ರವಾಸಿಗರು ಪುಣ್ಯಕ್ಷೇತ್ರದಲ್ಲಿ ಎಲ್ಲೆಂದರಲ್ಲಿ ಮಾಂಸವನ್ನ ಕಡಿದು, ಬೇಯಿಸುತ್ತಿದ್ದಾರೆ. ದತ್ತಪೀಠ ಟೂರಿಸ್ಟ್ ಸ್ಪಾಟ್ ಅಲ್ಲ. ಟೂರಿಸ್ಟ್ ಸ್ಪಾಟ್ ಬೇಕು ಅಂದ್ರೆ ಗಿರಿಶ್ರೇಣಿಯಲ್ಲಿ ಬೇರೆ ಸ್ಥಳಗಳಿವೆ. ಎರಡು ಕೋಮುಗಳು ಕೂಡ ದತ್ತಪೀಠವನ್ನ ಧಾರ್ಮಿಕ ಕ್ಷೇತ್ರ ಎಂದು ನಂಬಿವೆ. ಹೋಮ-ಹವನಕ್ಕೆ ಸರ್ಕಾರವೇ ತಾತ್ಕಾಲಿಕ ಶೆಡ್ ನಿರ್ಮಿಸಿಕೊಟ್ಟಿದೆ. ಅಲ್ಲಿ ಈ ರೀತಿ ಮಾಂಸ ಬೇಯಿಸಿದರೆ ಅದು ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರಲಿದೆ. ಎಲ್ಲಿಂದಲೋ ಬರುವ ಪ್ರವಾಸಿಗರು ಯಾವುದ್ಯಾವುದೋ ಮಾಂಸವನ್ನ ತಂದು ಅಡಿಗೆ ಮಾಡಿ ಬಿಸಾಡಿ ಹೋಗುತ್ತಾರೆ. ಆದರೆ, ಅಲ್ಲೇ ಇರುವ ಪೊಲೀಸರು ಏನ್ ಮಾಡುತ್ತಾರೋ ಗೊತ್ತಿಲ್ಲ ಎಂದು ಪೊಲಿಸರ ವಿರುದ್ಧವೂ ಅಸಾಮಾಧಾನ ಹೊರಹಾಕಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g