May 19, 2024

MALNAD TV

HEART OF COFFEE CITY

ವಿಧಾನ ಪರಿಷತ್ ಚುನಾವಣೆ; ಪೆಟ್ಟು ನೀಡಿದ ಆತ್ಮ ವಿಶ್ವಾಸ_ಎಚ್.ಡಿ ತಮ್ಮಯ್ಯ

1 min read

 

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ನಮ್ಮ ಲೆಕ್ಕಾಚಾರ ತಪ್ಪಿದೆ ಈ ಬಗ್ಗೆ ಪಕ್ಷದ ಆಂತರೀಕ ಮಟ್ಟದಲ್ಲಿ ಚರ್ಚೆ ನಡೆಸಲಾಗುವುದು ಹಾಗೂ ಪಕ್ಷ ವಿರೋಧಿ ಚಟುವಟಿಕೆ ಮಾಡಿದವರ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು ಎಂದು ಬಿಜೆಪಿ ಮುಖಂಡ ಎಚ್.ಡಿ ತಮ್ಮಯ್ಯ ಹೇಳಿದರು.

ನಗರದಲ್ಲಿ ಈ ಕುರಿತು ಮಾತನಾಡಿದ ಅವರು, ನಮ್ಮ‌ ಪಕ್ಷದ 1400 ಕಾರ್ಯಕರ್ತರು ಇದ್ರು ಸಹ ನಮ್ಮ ಅಭ್ಯರ್ಥಿಗೆ 1188 ಮತಗಳು ಬಿದ್ದಿದ್ದು 200 ಮತಗಳು ಎದುರು ಪಕ್ಷದ ಅಭ್ಯರ್ಥಿಗೆ ಬಿದ್ದಿದ್ದು ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.

* ಆತ್ಮವಿಶ್ವಾಸ ಬಿಟ್ಟು ತಳಮಟ್ಟದಲ್ಲಿ ಕೆಲಸ

ವಿಧಾನ ಪರಿಷತ್ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಗೆದ್ದೆ ಗೆಲ್ಲುತ್ತೇವೆ ಎಂಬ ವಿಶ್ವಾಸದಿಂದ ಇದ್ದೇವು. ಈ ಚುನಾವಣೆ ಪಾಠ ಕಲಿಸಿದೆ ಈ ಹಿನ್ನೆಲೆಯಲ್ಲಿ ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಆತ್ಮವಿಶ್ವಾಸವನ್ನು ಬಿಟ್ಟು ಇದೊಂದು ಎಚ್ಚರಿಕೆ ಗಂಟೆ ಎಂದು ಭಾವಿಸಿ ಹಿಂದಿನಂತೆ ತಳಮಟ್ಟಕ್ಕೆ ಇಳಿದು ಕೆಲಸ ಮಾಡುತ್ತೇವೆ ಎಂದು ಹೇಳಿದರು.

* ನಗರಸಭೆ ಚುನಾವಣೆ; 35 ವಾರ್ಡ್ ಗಳಲ್ಲಿ ಬಿಜೆಪಿ ಸ್ಪರ್ಧೆ

ಡಿ.27 ರಂದು ನಗರಸಭೆ ಚುನಾವಣೆ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಹಳೆ ಬೇರು ಹೊಸ ಚಿಗುರು ಆಧಾರದ ಮೇಲೆ ಹಿರಿಯರು, ಯುವಕರು, ಮಹಿಳೆಯರು, ಹಿಂದುಳಿದ ವರ್ಗ ಸೇರಿದಂತೆ ಸಾಮಾಜಿಕ ನ್ಯಾಯದ ಆಧಾರದ ಮೇಲೆ ಟಿಕೇಟ್ ನೀಡಲಾಗಿದೆ ಎಂದು ತಿಳಿಸಿದರು.

* ನಗರಸಭೆ ಚುಕ್ಕಾಣಿ ಹಿಡಿಯುವುದು ಶತಸಿದ್ಧ

ವಿರೋಧ ಪಕ್ಷಗಳು ಒಟ್ಟಾಗಿ ಬಂದ್ರೂ ಅಥವಾ ಬಿಡಿಬಿಡಿಯಾಗಿ ಬಂದ್ರೂ ಸಹ ನಗರಸಭೆ ಚುನಾವಣೆಯಲ್ಲಿ ಗೆದ್ದು ಆಡಳಿತದ ಚುಕ್ಕಾಣಿ ಹಿಡಿಯುವುದು ಶತಸಿದ್ಧ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!