May 15, 2024

MALNAD TV

HEART OF COFFEE CITY

ಮಕ್ಕಳ ಜೊತೆ ಅಸಭ್ಯ ವರ್ತನೆ, ವಾಹನ ಚಾಲಕನಿಗೆ ಥಳಿತ

1 min read

ಶಾಲಾ ಮಕ್ಕಳ ಜೊತೆ ಅಸಭ್ಯ ವರ್ತನೆ ತೋರಿದ ಕ್ಯಾಬ್ ಚಾಲಕನಿಗೆ ಸ್ಥಳಿಯರು ಕಂಬಕ್ಕೆ ಕಟ್ಟಿ ಧರ್ಮದೇಟು ನೀಡಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಸಿದ್ದರಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಡೂರು ತಾಲೂಕಿನ ರಾಜಪ್ಪ ಎಂಬುವರು ಕಡೂರಿನಿಂದ ಶಿಕ್ಷಕರನ್ನ ತನ್ನ ವ್ಯಾನಿನಲ್ಲಿ ಕಡೂರಿನಿಂದ ಸಿದ್ದರಹಳ್ಳಿಗೆ ಕರೆದುಕೊಂಡು ಬಂದು ಸಂಜೆ ಮತ್ತೆ ಕರೆದೊಯ್ಯುತ್ತಿದ್ದರು. ಹೀಗೆ ಬೆಳಗ್ಗೆಯಿಂದ ಸಂಜೆವರೆಗೂ ಶಾಲೆ ಬಳಿಯೇ ಇರುತ್ತಿದ್ದ ರಾಜಪ್ಪ ಅಲ್ಲಿನ ವಿಧ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದರು. ಶಾಲೆಯೊಳಗೆ, ಬಾತ್ ರೂಮಿನಲ್ಲಿ ಮಕ್ಕಳ ಜೊತೆ ಕೆಟ್ಟದಾಗಿ ವರ್ತಿಸುತ್ತಿದ್ದರು. ಈ ಬಗ್ಗೆ ವಿದ್ಯಾರ್ಥಿನಿ ಶಾಲೆಯ ಶಿಕ್ಷಕರ ಬಳಿ ಹೇಳಿದ್ದಾರೆ.

ಆಗ ಅವರು ನಿಮ್ಮ ಅಪ್ಪ-ಅಮ್ಮನಿಗೆ ತಿಳಿಸುವಂತೆ ಹೇಳಿದ್ದರು. ಮಕ್ಕಳು ಹೆತ್ತವರಿಗೆ ಹೇಳಿದ ಬಳಿಕ ಪೋಷಕರು ಎಸ್.ಡಿ.ಎಂ.ಸಿ. ಅಧ್ಯಕ್ಷರ ಗಮನಕ್ಕೆ ತಂದಿದ್ದಾರೆ. ಆಗ ಶಾಲಾ ಆಡಳಿತ ಮಂಡಳಿ ಕ್ಯಾಬ್ ಚಾಲಕ ರಾಜಪ್ಪನನ್ನ ಕರೆಸಿ ಕೇಳಿದಾಗ ಆರೋಪಿ ರಾಜಪ್ಪ ತನ್ನ ತಪ್ಪನ್ನ ಒಪ್ಪಿಕೊಂಡಿದ್ದಾರೆ. ಕೂಡಲೇ ರೊಚ್ಚಿಗೆದ್ದ ಸ್ಥಳಿಯರು ರಾಜಪ್ಪನನ್ನ ಹಿಗ್ಗಾಮುಗ್ಗ ಥಳಿಸಿದ್ದಾರೆ. ಕಂಬಕ್ಕೆ ಕಟ್ಟಿ ಭಾರಿಸಿದ್ದಾರೆ. ನೊಂದವರು ಈ ಬಗ್ಗೆ ದೂರು ನೀಡಿದ್ದು ಪೊಲೀಸರು ಆತನನ್ನ ಬಂಧಿಸಿದ್ದಾರೆ. ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!