May 3, 2024

MALNAD TV

HEART OF COFFEE CITY

ನಕಲಿ ದಾಖಲೆ ಸೃಷ್ಠಿಸಿ ಹಣ ದುರುಪಯೋಗ ರಸೂಲ್ ಖಾನ್ ಆರೋಪ

1 min read

ಚಿಕ್ಕಮಗಳೂರು : ರಸ್ತೆಯನ್ನೇ ನಿರ್ಮಿಸದೆ ನಕಲಿ ದಾಖಲೆಗಳನ್ನು ಸೃಷ್ಠಿ ಮಾಡಿಕೊಂಡು ಸರ್ಕಾರದ ಲಕ್ಷಾಂತರ ರೂಪಾಯಿಗಳನ್ನು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ರಸೂಲ್ ಖಾನ್ ಆರೋಪಿಸಿದ್ದಾರೆ.

ಅವರು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತ, ಜಿಲ್ಲೆಯ ಪ್ರತಿಷ್ಠಿತ ಕಾಲೇಜಾದ ಐ.ಡಿ.ಎಸ್..ಜಿ ಆವರಣದಲ್ಲಿ ಗಣ್ಯ ವ್ಯಕ್ತಿಗಳು ನಗರಕ್ಕೆ ಆಗಮಿಸುವಾಗ ಹೆಲಿಕ್ಯಾಪ್ಟರ್‌ನಿಂದ ಇಳಿಯಲು ಹೆಲಿಪ್ಯಾಡ್ ಇದ್ದು, ಇದರಿಂದ ನಿರ್ಗಮಿಸಲು ರಸ್ತೆ ಅವಶ್ಯಕತೆ ಇದೆ. ಈ ರಸ್ತೆ ಕಾಮಗಾರಿ ನಡೆಸಲು 2018-19 ರಲ್ಲಿ ಸುಮಾರು 25 ಲಕ್ಷ ರೂಪಾಯಿಗಳ ಅಂದಾಜು ವೆಚ್ಚ ನೀಡಿದ್ದಾರೆ. ಅದರಲ್ಲಿ ನಕಲಿ ದಾಖಲೆಗಳನ್ನು ಸೃಷ್ಠಿ ಮಾಡಿ, ಕಾಮಗಾರಿಯನ್ನೆ ನಿರ್ವಹಿಸದೆ 21 ಲಕ್ಷ 70 ಸಾವಿರದ 512 ರೂಪಾಯಿಗಳಿಗೆ ಬಿಲ್ ಮಾಡಿಕೊಂಡು ಸರ್ಕಾರದ ಹಣ ದುರುಪಯೋಗ ಮಾಡಿದ್ದಾರೆ. ಅಲ್ಲದೆ ಇದರ ಬಗ್ಗೆ ಸಂಬಂಧಪಟ್ಟ ಕಾಲೇಜಿನ ಪ್ರಾಶುಂಪಾಲರು ಸಹ ತಮ್ಮ ಪತ್ರದಲ್ಲಿ ದೃಡಿಕರಿಸಿದ್ದಾರೆ. ನಕಲಿ ದಾಖಲೆ ಸೃಷ್ಠಿ ಮಾಡಿ ಲಕ್ಷಾಂತರ ರೂಪಾಯಿ ಭ್ರಷ್ಟಾಚಾರ ಮಾಡಿರುವ ಎಲ್ಲಾ ಅಧಿಕಾರಿ, ಸಿಬ್ಬಂದಿ ಮತ್ತು ಗುತ್ತಿಗೆದಾರರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!