ಜಿಲ್ಲೆಗೆ ಹೆಚ್ಚು ಅನುದಾನ ತರುವಲ್ಲಿ ಎಂ.ಕೆ.ಪ್ರಾಣೇಶ್ ಶ್ರಮವಿದೆ
1 min readಚಿಕ್ಕಮಗಳೂರು-ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಹೊರತುಪಡಿಸಿ ಜಿಲ್ಲೆಯ ಹಲವು ಅಭಿವೃದ್ಧಿ ಕಾರ್ಯಗಳಿಗೆ ಎಂ.ಕೆ.ಪ್ರಾಣೇಶ್ ಸಾಕಷ್ಟು ಅನುದಾನ ತರುವಲ್ಲಿ ಯಶಸ್ವಿಯಾಗಿದ್ದು ಮೊದಲ ಪ್ರಾಶಸ್ತö್ಯದ ಮತ ನೀಡುವ ಮೂಲಕ ಗೆಲ್ಲಿಸುವಂತೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವರಾಜ್ ಶೆಟ್ಟಿ ಮನವಿ ಮಾಡಿದರು.
ಸರಳ ಹಾಗೂ ಸಜ್ಜನ ಸ್ವಭಾವದ ಪ್ರಾಣೇಶ್ ಅವರು ಪರಿಷತ್ ಸದಸ್ಯರಾಗಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಮುಖ್ಯವಾಗಿ ಗ್ರಾಮೀಣ ಹಾಗೂ ತಾಲ್ಲೂಕು ಮಟ್ಟದ ಮುಖ್ಯ ರಸ್ತೆಗಳ ಸಂಪರ್ಕ ಅಭಿವೃದ್ಧಿಗೆ ಶ್ರಮಿಸಿದ್ದಾರೆ, ಪ್ರವಾಸಿ ತಾಣಗಳ ಯಾತ್ರಿ ನಿವಾಸ ನಿರ್ಮಾಣಕ್ಕೆ ಅನುದಾನ, ದೇವಸ್ಥಾನಗಳ ಜೀಣೋದ್ಧಾರ, ಕಲ್ಯಾಣಿಗಳ ಅಭಿವೃದ್ಧಿ, ಸಮುದಾಯ ಭವನಗಳ ನಿರ್ಮಾಣಕ್ಕೆ ಅನುದಾನ ಒಳಗೊಂಡAತೆ ಹಲವು ಕಾರ್ಯಗಳಿಗೆ ಅನುದಾನ ತರುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದರು.
ಅಲ್ಲದೇ ಮಲೆನಾಡು ಭಾಗದಲ್ಲಿ ಅತಿವೃಷ್ಟಿಯಾದ ವೇಳೆ ರೈತರು, ಬೆಳೆಗಾರರು, ನಿರಾಶ್ರಿತರ ಕಷ್ಟಗಳಿಗೆ ಸ್ಪಂದಿಸಿದ್ದಾರೆ. ಸಿಎಂ ಪರಿಹಾರ ನಿಧಿಯಿಂದ ವಿವಿಧ ಫಲಾನುಭವಿಗಳಿಗೆ ಅನುದಾನ ಬಿಡುಗಡೆಗೊಳಿಸುವಲ್ಲಿ ಶ್ರಮಿಸಿದ್ದಾರೆ ಎಂದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g